BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್
ಸೀಟು ಹಂಚಿಕೆ ಘೋಷಣೆ ಮಾಡಿದ ಬೆನ್ನಲ್ಲೇ 66 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ
Team Udayavani, Oct 19, 2024, 7:30 PM IST
ಹೊಸದಿಲ್ಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ(ಅ19) ಬಿಡುಗಡೆ ಮಾಡಿದೆ. ಜಾರ್ಖಂಡ್ ಬಿಜೆಪಿ ಅಧ್ಯಕ್ಷ, ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಧನ್ವಾರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಜೆಎಂಎಂ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಿಎಂ ಚಂಪೈ ಸೊರೆನ್ ಸಾರಿಕೆಲ್ಲಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಒಟ್ಟು 81 ಸ್ಥಾನಗಳ ಪೈಕಿ ಎನ್ ಡಿಎ ಮೈತ್ರಿಕೂಟದಡಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಈ ಪೈಕಿ 66 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಏಕಕಾಲದಲ್ಲಿ ಪ್ರಕಟಿಸಿದೆ.
ಮಿತ್ರ ಪಕ್ಷಗಳಾದ ಎಜೆಎಸ್ಯು 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಜೆಡಿಯು ಎರಡು ಸ್ಥಾನಗಳಲ್ಲಿ ಮತ್ತು ಎಲ್ಜೆಪಿ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ.
ಸೀತಾ ಸೊರೇನ್ ಗೆ ಟಿಕೆಟ್
ಪ್ರಮುಖ ಅಭ್ಯರ್ಥಿಗಳ ಪೈಕಿ ಸೀತಾ ಸೊರೆನ್ ಜಮ್ತಾರಾದಿಂದ ಕಣಕ್ಕಿಳಿಯಲಿದ್ದಾರೆ. ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ಅತ್ತಿಗೆ ಸೀತಾ ಸೊರೇನ್ ಅವರನ್ನು ಈ ವರ್ಷದ ಮೇ ತಿಂಗಳಲ್ಲಿ “ಪಕ್ಷ ವಿರೋಧಿ ಚಟುವಟಿಕೆ” ಗಾಗಿ ಜೆಎಂಎಂನಿಂದ ಉಚ್ಚಾಟಿಸಲಾಗಿತ್ತು. ಮೂರು ಬಾರಿ ಶಾಸಕಿಯಾಗಿರುವ ಸೀತಾ ಸೊರೇನ್ ಅವರು 2009 ರಲ್ಲಿ ಪತಿ ದುರ್ಗಾ ಸೊರೇನ್ ನಿಧನ ಹೊಂದಿದ್ದರು. ಜೆಎಂಎಂ ನಲ್ಲಿ ಪ್ರತ್ಯೇಕತೆ ಮತ್ತು ನಿರ್ಲಕ್ಷ್ಯವನ್ನು ಉಲ್ಲೇಖಿಸಿದ್ದರು.
ನೀರಾ ಯಾದವ್ ಕೊಡರ್ಮಾದಿಂದ ಸ್ಪರ್ಧಿಸಲಿದ್ದಾರೆ. ಗಂಡೆಯಲ್ಲಿ ಮುನಿಯಾ ದೇವಿ ಅಭ್ಯರ್ಥಿಯಾಗಲಿದ್ದು, ಸಿಂದ್ರಿಯಲ್ಲಿ ತಾರಾದೇವಿ ಹಾಗೂ ನಿರ್ಸಾದಲ್ಲಿ ಅಪ್ನರ್ನಾ ಸೇನ್ಗುಪ್ತಾ ಕಣಕ್ಕಿಳಿಯಲಿದ್ದಾರೆ. ರಾಗಿಣಿ ಸಿಂಗ್ ಝರಿಯಾದಲ್ಲಿ, ಗೀತಾ ಬಲ್ಮುಚು ಚೈಬಾಸಾದಲ್ಲಿ ಮತ್ತು ಪುಷ್ಪಾ ದೇವಿ ಭೂಯಿಯಾನ್ ಛತ್ತರ್ಪುರದಿಂದ ಸ್ಪರ್ಧಿಸಲಿದ್ದಾರೆ.
ಜಾರ್ಖಂಡ್ನಲ್ಲಿ ನವೆಂಬರ್ 13 ಮತ್ತು ನವೆಂಬರ್ 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗೌರ್ನರ್ ಅಸ್ತು
BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ
Pub ನಲ್ಲಿ ಅಶ್ಲೀ*ಲ ನೃತ್ಯ; 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನ
Jharkhand Polls: ಜಾರ್ಖಂಡ್ನಲ್ಲಿ ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ
Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ
MUST WATCH
ಹೊಸ ಸೇರ್ಪಡೆ
Life sentence: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟ
ಎಂಎಸ್ಇಝಡ್: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ
Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗೌರ್ನರ್ ಅಸ್ತು
ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು!
Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.