ಕಾಂಗ್ರೆಸ್‌ಗೆ ಒಬಿಸಿ ಕಮಲ ರಣತಂತ್ರ


Team Udayavani, Oct 23, 2017, 6:00 AM IST

OBC-200.jpg

ನವದೆಹಲಿ: ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿರುವಂತೆ ರಾಜಕೀಯದಾಟವೂ ಭರ್ಜರಿಯಾಗಿಯೇ ಶುರುವಾಗಿದೆ. ಗುಜರಾತ್‌ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಕೌಂಟರ್‌ ಕೊಡಲು ಬಿಜೆಪಿ ಸಿದ್ಧತೆ ನಡೆಸಿದ್ದು, ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ವಿಧೇಯಕಕ್ಕೆ ಪ್ರತಿಪಕ್ಷಗಳು ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್‌ ಅಡ್ಡಿಪಡಿಸಿದ್ದನ್ನೇ ಮುಖ್ಯ ಚುನಾವಣಾ ವಿಚಾರವನ್ನಾಗಿ ಬಳಸಿಕೊಳ್ಳಲು ಮುಂದಾಗಿದೆ.

ಒಂದೆಡೆ ಹಿಂದುಳಿದ ವರ್ಗಗಳ (ಒಬಿಸಿ) ಮುಖಂಡರನ್ನು ಒಲಿಸಿ ಪಕ್ಷಕ್ಕೆ ಸೇರಿಸಿಕೊಂಡು, ಸಮುದಾಯದ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ಯತ್ನಿಸುತ್ತಿದ್ದರೆ, ಮತ್ತೂಂದೆಡೆ, ಕಾಂಗ್ರೆಸ್‌ನ ಈ ತಂತ್ರವನ್ನು ವಿಫ‌ಲಗೊಳಿಸಲು ಒಬಿಸಿ ಆಯೋಗದ ವಿಚಾರವನ್ನೇ ಮುಂದಿಟ್ಟುಕೊಂಡು ಬಿಜೆಪಿ ಕೂಡ ಪ್ರತಿತಂತ್ರ ಹೆಣೆದಿದೆ.

ಕಾಂಗ್ರೆಸ್‌ ಈಗಾಗಲೇ ಗುಜರಾತ್‌ನ ಒಬಿಸಿ ಮುಖಂಡ ಅಲ್ಪೇಶ್‌ ಠಾಕೂರ್‌ರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ. ಇದಕ್ಕೆ ಪ್ರತಿಯಾಗಿ ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಸಂಬಂಧ ಕಳೆದ ಅಧಿವೇಶನದಲ್ಲಿ ಮಂಡಿಸಿದ್ದ ಮಸೂದೆಗೆ ಕಾಂಗ್ರೆಸ್‌ ಅಡ್ಡಿಪಡಿಸಿದ್ದನ್ನೇ ಬಿಜೆಪಿ ಚುನಾವಣೆಯಲ್ಲಿ ಅಸ್ತ್ರವನ್ನಾಗಿ ಬಳಸಿಕೊಳ್ಳಲಿದೆ. 

ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರಿಂದ ಮಸೂದೆ ಅನುಮೋದನೆಗೊಂಡಿತ್ತು. ಆದರೆ ಕಾಂಗ್ರೆಸ್‌ ಆಕ್ಷೇಪದಿಂದಾಗಿ ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರಗೊಂಡಿಲ್ಲ. ಕಾಂಗ್ರೆಸ್‌ನ ಈ ಆಕ್ಷೇಪವನ್ನೇ ಚುನಾವಣೆ ವಿಷಯವನ್ನಾಗಿಸಿ ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಬಿಸಿಗೆ ಸೇರಿದವರಾಗಿದ್ದು, ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಲು ಕಾಂಗ್ರೆಸ್‌ ಅಡ್ಡಿಪಡಿಸುತ್ತಿರುವ ಬಗ್ಗೆ ಅವರ ಮೌನವನ್ನು ಪ್ರಶ್ನಿಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ. ಆ ಮೂಲಕ ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಅವರನ್ನು ಒಬಿಸಿ ವಿರೋಧಿಗಳಂತೆ ಪ್ರತಿಬಿಂಬಿಸಲು ಪ್ರಯತ್ನಿಸಲಿದೆ.

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಹೊರಬಂದ ಮೇಲೆ ಅವರನ್ನು ಬಿಜೆಪಿ ಒಬಿಸಿ ಮೋರ್ಚಾ ಪ್ರಭಾರಿಯಾಗಿ ನೇಮಿಸಲಾಗಿತ್ತು. ಅಲ್ಲದೆ, ಒಬಿಸಿ ಮೋರ್ಚಾದಿಂದ ಎಲ್ಲಾ ಜಿಲ್ಲೆಗಳಲ್ಲಿ ಒಬಿಸಿ ಸಮಾವೇಶಗಳನ್ನು ನಡೆಸಿ ಅದರ ಮೂಲಕ ಒಬಿಸಿ ಆಯೋಗದ ವಿಚಾರ ಪ್ರಸ್ತಾಪಿಸಲು ನಿರ್ಧರಿಸಿತ್ತು.

ಆದರೆ, ನ. 2ರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ನಡೆಯುತ್ತಿರುವ ಕಾರಣ ಸಮಯದ ಕೊರತೆಯಿಂದ ಒಬಿಸಿ ಸಮಾವೇಶ ಸಾಧ್ಯವಾಗುತ್ತಿಲ್ಲ. ಹೀಗಾಗಿ ಯಾತ್ರೆ ವೇಳೆಯೇ ಎಲ್ಲಾ ಕಡೆ ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಲು ಕಾಂಗ್ರೆಸ್‌ ಅಡ್ಡಿಪಡಿಸುತ್ತಿರುವ ವಿಚಾರವನ್ನು ಪ್ರಸ್ತಾಪಿಸಿ, ಕಾಂಗ್ರೆಸ್‌ ಯಾವ ರೀತಿ ಹಿಂದುಳಿದ ವರ್ಗದವರನ್ನು ವಂಚಿಸುತ್ತಿದೆ ಎಂದು ವಿವರಿಸುವ ಮೂಲಕ ಆ ಸಮುದಾಯವನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ನಿರ್ಧರಿಸಿದೆ.

ಹಲವು ವರ್ಷಗಳ ಬೇಡಿಕೆ:
ಹಲವು ವರ್ಷಗಳಿಂದಲೂ ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಒಬಿಸಿ ಸಮುದಾಯ ಬೇಡಿಕೆ ಇಡುತ್ತಲೇ ಬಂದಿತ್ತು. ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವುದರಿಂದ ಎಸ್‌ಸಿ ಎಸ್‌ಟಿ ಆಯೋಗಕ್ಕೆ ಸಮಾನವಾಗಿ ಇದು ಕಾರ್ಯನಿರ್ವಹಿಸಬಹುದಾಗಿದೆ. ಅಲ್ಲದೆ ಒಬಿಸಿ ಮೀಸಲಾತಿಗೆ 6 ಲಕ್ಷ ರೂ. ಆದಾಯ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವುದರ ಜತೆಗೆ, ಒಬಿಸಿಯಲ್ಲಿ ಉಪ ಸಮುದಾಯಗಳನ್ನು ಗುರುತಿಸಲು ಬಿಜೆಪಿ ಪ್ರಸ್ತಾವನೆ ರೂಪಿಸಿತ್ತು. ಆದರೆ, ಈ ವಿಧೇಯಕಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸಿದ್ದರಿಂದ, ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಿಸಿ ಮುಟ್ಟಿಸಲು ಇದನ್ನೇ ಬಳಸಲು ಬಿಜೆಪಿ ನಿರ್ಧರಿಸಿದೆ.

ಹಾರ್ದಿಕ್‌ ಪಟೇಲ್‌ ಬಂಟರು ಬಿಜೆಪಿಗೆ:
ನಾಟಕೀಯ ಬೆಳವಣಿಗೆಯೊಂದರಲ್ಲಿ ಗುಜರಾತ್‌ನ ಪಟೇಲ್‌ ಮೀಸಲಾತಿ ಹೋರಾಟಗಾರ ಹಾರ್ದಿಕ್‌ ಪಟೇಲ್‌ರ ಆಪ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಾರ್ದಿಕ್‌ರನ್ನು ಕಾಂಗ್ರೆಸ್‌ಗೆ ಆಹ್ವಾನಿಸಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ವರುಣ್‌ ಪಟೇಲ್‌ ಮತ್ತು ರೇಷ್ಮಾ ಪಟೇಲ್‌ ಮೀಸಲು ಹೋರಾಟದ ಮುಖ್ಯಭೂಮಿಕೆಯಲ್ಲಿದ್ದರು. ಅಷ್ಟೇ ಅಲ್ಲ, ಬಿಜೆಪಿ ಆಡಳಿತವನ್ನು ಹಲವು ಬಾರಿ ವಿರೋಧಿಸಿದ್ದರು. ಆದರೆ ಭಾನುವಾರ ಮುಖ್ಯಮಂತ್ರಿ ವಿಜಯ್‌ ರೂಪಾನಿ ಹಾಗೂ ಇತರ ಮುಖಂಡರ ಜತೆ ಮಾತುಕತೆ ನಡೆಸಿದ ಬಳಿಕ ಪಕ್ಷ ಸೇರ್ಪಡೆ ಘೋಷಣೆ ಮಾಡಿದ್ದಾರೆ.

ಗುಜರಾತ್‌ನಲ್ಲಿ ಅಠಾವಳೆ ಬೆಂಬಲ:
ಇನ್ನೊಂದೆಡೆ, ಮಹಾರಾಷ್ಟ್ರದ ರಿಪಬ್ಲಿಕ್‌ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ಮುಖ್ಯಸ್ಥ ರಾಮದಾಸ್‌ ಅಠಾವಳೆ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಅಠಾವಳೆ ನೇತೃತ್ವದ ಪಕ್ಷ ಎನ್‌ಡಿಎ ಅಂಗವಾಗಿದೆ. ಅಲ್ಲದೆ ಬಿಜೆಪಿಯೊಂದಿಗೆ ಜಗಳಕ್ಕಿಳಿಯಬೇಡಿ ಎಂದು ಶಿವಸೇನೆಗೂ ಅವರು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.