BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ
ರಾಹುಲ್ ಹೇಳಿಕೆ ಅರ್ಥೈಸುವ ತಿಳುವಳಿಕೆ ಇಲ್ಲ...ಮಂಡಲ್ ಆಯೋಗದ ವರದಿ ಬಿಜೆಪಿ ಕಮಂಡಲ ಮಾಡಿತು
Team Udayavani, Sep 12, 2024, 8:03 PM IST
ಬೆಂಗಳೂರು: ಮೀಸಲಾತಿ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆಯು ‘ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ’ ಎಂದು ಸಿಎಂ ಸಿದ್ದರಾಮಯ್ಯ ಗುರುವಾರ(ಸೆ12 ) ಕಿಡಿ ಕಾರಿದ್ದಾರೆ.
ಸಿಎಂ ಕಚೇರಿ ಪತ್ರಿಕಾ ಹೇಳಿಕೆಯಲ್ಲಿ ” ರಾಹುಲ್ ಗಾಂಧಿ ಹೇಳಿಕೆಯನ್ನು ಅರ್ಥೈಸುವ ತಿಳುವಳಿಕೆ ಅಥವಾ ಬುದ್ಧಿವಂತಿಕೆ ಬಿಜೆಪಿ ನಾಯಕರಿಗೆ ಇಲ್ಲ. ಶಿಕ್ಷಣ, ಉದ್ಯೋಗ ಮತ್ತು ಸಂಪನ್ಮೂಲಗಳ ಪ್ರವೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಖಚಿತಪಡಿಸುವುದು ಮೀಸಲಾತಿಯ ಪ್ರಾಥಮಿಕ ಉದ್ದೇಶವಾಗಿದೆ. ಇದು ಕೇವಲ ರಾಹುಲ್ ಗಾಂಧಿ ಹೇಳುತ್ತಿರುವ ವಿಷಯವಲ್ಲ. ನಾನು ಕೂಡ ಇದಕ್ಕೆ ಬದ್ಧನಾಗಿದ್ದೇನೆ. ಇದನ್ನು ಮೀಸಲಾತಿ ವಿರೋಧಿ ಹೇಳಿಕೆ ಎಂದು ಹೇಗೆ ಅರ್ಥೈಸಬಹುದು? ಎಂದು ಸಿಎಂ ಪ್ರಶ್ನಿಸಿದರು.
“ಕರ್ನಾಟಕದಲ್ಲಿ, ಬಿಜೆಪಿ ಸ್ಥಳೀಯ ಸಂಸ್ಥೆಗಳ ಮೀಸಲಾತಿಯನ್ನು ವಿರೋಧಿಸಿತು, ದಿವಂಗತ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯನ್ನು ಸಹ ಸಲ್ಲಿಸಿತು. ದೇಶದಾದ್ಯಂತ ಬಿಜೆಪಿ ಮೀಸಲಾತಿ ನೀತಿಗಳ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ ಎಂದು ಸಿಎಂ ಕಿಡಿ ಕಾರಿದ್ದಾರೆ.
‘ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರು ಮಂಡಲ್ ಆಯೋಗದ ವರದಿಯನ್ನು ಜಾರಿಗೊಳಿಸಿದಾಗ, ಬಿಜೆಪಿಯು ‘ಕಮಂಡಲ’ ಚಳವಳಿಯನ್ನು ಪ್ರಾರಂಭಿಸಿತು, ಜನರ ಮನಸ್ಸಿನಲ್ಲಿ ಧರ್ಮದ ಅಫೀಮನ್ನು ತುಂಬಲು ಪ್ರಯತ್ನಿಸಿತು’ ಎಂದು ಸಿಎಂ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.