![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 28, 2023, 5:46 PM IST
ನವದೆಹಲಿ: ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವಂತೆಯೇ, ಇತ್ತೀಚೆಗೆ ಸಂಸತ್ತಿನಲ್ಲಿ ಮುಸ್ಲಿಂ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣೆಯ ಹೊಣೆಗಾರಿಕೆ ನೀಡಲಾಗಿದೆ.
ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಟೊಂಕ್ ಜಿಲ್ಲೆಯ ಜವಾಬ್ದಾರಿಯನ್ನು ರಮೇಶ್ ಬಿಧುರಿಗೆ ವಹಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟೊಂಕ್ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ.
ಏತನ್ಮಧ್ಯೆ, ರಮೇಶ್ ಬಿಧುರಿ ಅವರನ್ನು ಟೊಂಕ್ ಜಿಲ್ಲಾ ಉಸ್ತುವಾರಿಯಾಗಿ ನೇಮಿಸಿದ್ದಕ್ಕಾಗಿ ಟಿಎಂಸಿ ಮತ್ತು ಕಾಂಗ್ರೆಸ್ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.
ರಮೇಶ್ ಬಿಧುರಿ ಮತ್ತು ಸಚಿನ್ ಪೈಲಟ್ ಇಬ್ಬರು ಗುರ್ಜರ್ ಸಮುದಾಯದಿಂದ ಬಂದವರು ಹಾಗೆಯೇ ಈ ಕ್ಷೇತ್ರದಲ್ಲಿ ಗುರ್ಜರ್ ಸಮುದಾಯ ಪ್ರಬಲವಾಗಿದ್ದು, ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರವಾಗಿದ್ದು, ಚುನಾವಣೆಗೆ ಈಗಿನಿಂದಲೇ ಬಿಜೆಪಿ ತಯಾರಿ ಆರಂಭಿಸಿದೆ.
2013ರಲ್ಲಿ ಬಿಜೆಪಿಯ ಅಜಿತ್ ಸಿಂಗ್ ಮೆಹ್ತಾ ಗೆದ್ದಿದ್ದರು. 1993ರಲ್ಲಿ ಬಿಜೆಪಿಯ ಮಹಾವೀರ್ ಪ್ರಸಾದ್ ಅವರು ಕೊನೆಯ ಬಾರಿಗೆ ಶಾಸಕರಾಗಿದ್ದರು. ಬಿಧುರಿ ಅವರು ಜೈಪುರದಲ್ಲಿ ಬಿಜೆಪಿಯ ರಾಜ್ಯ ಮುಖ್ಯಸ್ಥ ಸಿಪಿ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
राजस्थान प्रदेश भाजपा कार्यालय जयपुर में ज़िला टोंक की समन्वय बैठक में प्रदेश अध्यक्ष श्री @cpjoshiBJP जी द्वारा संगठनात्मक कार्यों व चुनाव की तैयारियों के साथ सेवा सप्ताह के कार्यक्रमों सहित आगामी कार्यकर्ताओं के प्रवास योजनाओं की जानकारी लेते हुए। pic.twitter.com/wK63ctXR6X
— Ramesh Bidhuri (@rameshbidhuri) September 27, 2023
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.