ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಿಸಿದ ಸುಶಾಂತ್ ಸಿಂಗ್ ತಂದೆ


Team Udayavani, Jul 28, 2020, 7:34 PM IST

ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಿಸಿದ ಸುಶಾಂತ್ ಸಿಂಗ್ ತಂದೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪಟ್ನಾ: ನಟಿ ರಿಯಾ ಚಕ್ರವರ್ತಿ ತನ್ನ ಮಗನ ಕೈಯಿಂದ ಸಿಕ್ಕಾಪಟ್ಟೆ ಹಣ ಪಡೆದುಕೊಂಡಿದ್ದಾಳೆ ಮತ್ತು ಆತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದನೆ ನೀಡಿದ್ದಾಳೆ ಎಂದು ಆರೋಪಿಸಿ ನಟ ಸುಶಾಂತ್ ಸಿಂಗ್ ಅವರ ತಂದೆ ಇಂದು ದೂರು ದಾಖಲಿಸಿದ್ದಾರೆ.

ಈ ಕುರಿತಾಗಿ ಸುಶಾಂತ್ ಅವರ ತಂದೆ ಕೆ.ಕೆ. ಸಿಂಗ್ ಅವರು ಪಟ್ನಾದ ರಾಜೀವ್ ನಗರ ಪೊಲೀಸ್ ಠಾಣೆಯಲ್ಲಿ ದೂರೊಂದನ್ನು ದಾಖಲಿಸಿದ್ದಾರೆ.

ಜೂನ್ 14 ರಂದು ಮುಂಬಯಿಯ ತನ್ನ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ನಟ ಸುಶಾಂತ್ ಸಿಂಗ್ ಅವರು ಕೆಲವು ಸಮಯ ನಟಿ ರಿಯಾ ಚಕ್ರವರ್ತಿಯೊಂದಿಗೆ ಡೇಟಿಂಗ್ ನಡೆಸಿದ್ದರು.

ದೂರು ದಾಖಲಿಸಿಕೊಂಡಿರುವ ಪಟ್ನಾ ಪೊಲೀಸರು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಶಾಂತ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬಯಿ ಪೊಲೀಸ್ ತಂಡದ ಡಿಸಿಪಿಯವರನ್ನು ಭೇಟಿ ಮಾಡಿದ್ದಾರೆ.

ಜೂನ್ ತಿಂಗಳಿನಲ್ಲಿ ಮುಂಬಯಿ ತನಿಖಾ ತಂಡದ ಪೊಲೀಸ್ ಅಧಿಕಾರಿಗಳು ಸುಶಾಂತ್ ಅವರ ತಂದೆಯನ್ನು ಪ್ರಶ್ನಿಸಿ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದರು. ಆದರೆ ಈ ಸಂದರ್ಭದಲ್ಲಿ ಕೆ.ಕೆ. ಸಿಂಗ್ ಅವರು ಅಲ್ಲಿ ಯಾವುದೇ ದೂರು ದಾಖಲಿಸಿರಲಿಲ್ಲ.

ಮಾತ್ರವಲ್ಲದೇ ಈ ವಿಚಾರದಲ್ಲಿ ನನಗೆ ಯಾರ ಮೇಲೂ ಆರೋಪ ಮಾಡಲು ಏನೂ ಇಲ್ಲ ಎಂದು ಹೇಳಿದ್ದರು. ಆದರೆ ಇದೀಗ ಸುಶಾಂತ್ ಅವರ ತಂದೆ ಪಟ್ನಾದಲ್ಲಿ ತನ್ನ ಮಗನ ಮಾಜೀ ಗೆಳತಿಯ ವಿರುದ್ಧ ದೂರು ದಾಖಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಟ ಸುಶಾಂತ್ ಸಿಂಗ್ ಅವರ ಆತ್ಮಹತ್ಯೆ ಪ್ರಕರಣದ ವಿಚಾರಣೆಯನ್ನು ಬಾಂದ್ರಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಟಿ ರಿಯಾ ಅವರನ್ನು ಪೊಲೀಸರು ಈ ಹಿಂದೆ ವಿಚಾರಣೆ ನಡೆಸಿದ್ದರು. ಆ ಸಂದರ್ಭದಲ್ಲಿ ರಿಯಾ ಅವರು, ‘ಸುಶಾಂತ್ ಯಶ್ ರಾಜ್ ಪಿಲಂಸ್ ಜೊತೆಗಿನ ಒಪ್ಪಂದವನ್ನು ರದ್ದುಮಾಡಿಕೊಂಡಿದ್ದರು ಮತ್ತು ತನಗೂ ಹಾಗೇ ಮಾಡುವಂತೆ ಹೇಳಿದ್ದರು’ ಎಂಬ ಹೇಳಿಕೆಯನ್ನು ನೀಡಿದ್ದರು.

‘ಶುದ್ದ್ ದೇಸೀ ರೊಮ್ಯಾನ್ಸ್’, ‘ಡಿಟೆಕ್ಟಿವ್ ಭ್ಯೋಮ್ ಕೇಶ್ ಭಕ್ಷಿ’ ಮತ್ತು ಶೇಖರ್ ಕಪೂರ್ ಅವರ ‘ಪಾನೀ’ ಸಹಿತ ಒಟ್ಟು ಮೂರು ಚಿತ್ರಗಳಲ್ಲಿ ನಟಿಸಲು ಸುಶಾಂತ್ ಸಿಂಗ್ ಅವರು ಯಶ್ ರಾಜ್ ಫಿಲಂಸ್ ಜೊತೆ ಒಪ್ಪಂದ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.