![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Apr 6, 2024, 6:15 AM IST
ಕಣ್ಣೂರು: ಲೋಕಸಭೆ ಚುನಾವಣೆ ಪ್ರಚಾ ರದ ಭರಾಟೆ ನಡುವೆಯೇ ಕೇರಳದ ಕಣ್ಣೂರಿನಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಒಬ್ಬ ಅಸುನೀಗಿದ್ದು, ಮತ್ತೊಬ್ಬ ಗಾಯ ಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಚಾರ ಕೇರಳದಲ್ಲಿ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ.
ಸ್ಫೋಟದಲ್ಲಿ ಗಾಯಗೊಂಡ ಶೆರಿನ್ ಮತ್ತು ವಿನೀಶ್ನನ್ನು ಸ್ಥಳೀಯರು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಗೆ ದಾಖ ಲಿ ಸಿದರು. ಆದರೆ ಚಿಕಿತ್ಸೆ ಫಲಕಾರಿಯಾ ಗದೆ ಶೆರಿನ್ ಮೃತಪಟ್ಟಿದ್ದು, ಅಂಗೈ ಕಳೆದಕೊಂಡು ಗಂಭೀರವಾಗಿ ಗಾಯ ಗೊಂಡಿರುವ ವಿನೇಶ್ಗೆ ಚಿಕಿತ್ಸೆ ನೀಡಲಾ ಗುತ್ತಿದೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಶೆರಿನ್ ಮತ್ತು ವಿನೀಶ್ ಸಿಪಿಎಂ ಕಾರ್ಯಕರ್ತರಾಗಿದ್ದಾರೆ. ಅವರಿಬ್ಬರು ಬಾಂಬ್ ತಯಾರಿಸುವ ವೇಳೆ ಸ್ಫೋಟ ಸಂಭವಿಸಿದೆ. ದಾಳಿಗಳನ್ನು ನಡೆಸಲು ಇವರನ್ನು ಸಿಪಿಎಂ ಬಳಸಿಕೊಳ್ಳುತ್ತಿತ್ತು’ ಎಂದು ಬಿಜೆಪಿ ಆರೋಪಿಸಿದೆ. ಗೃಹ ಖಾತೆಯನ್ನು ಹೊಂದಿರುವ ಸಿಎಂ ಪಿಣರಾಯಿ ವಿಜಯನ್ ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ವಿ.ಡಿ.ಸತೀಶನ್ ಪ್ರಶ್ನಿಸಿದ್ದಾರೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.