![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 6, 2022, 1:10 PM IST
ಹೊಸದಿಲ್ಲಿ: ಬಿಎಸ್ ಎಫ್ ಸಿಬ್ಬಂದಿಯೊಬ್ಬರು ತನ್ನ ಸಹೋದ್ಯೋಗಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ ಘಟನೆ ಇಂದು ಬೆಳಗ್ಗೆ ಪಂಜಾಬ್ನ ಅಮೃತಸರದಲ್ಲಿ ನಡೆದಿದೆ.
ಸಹೋದ್ಯೋಗಿಯ ಗುಂಡಿನ ದಾಳಿಗೆ ನಾಲ್ಕು ಮಂದಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ಸಿಬ್ಬಂದಿಯನ್ನೂ ಹತ್ಯೆ ಮಾಡಲಾಗಿದೆ.
ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಶೂಟರ್ ನನ್ನು ಸತ್ತೆಪ್ಪ ಎಸ್ ಕೆ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಸಿಬ್ಬಂದಿ ಗಾಯಗೊಂಡಿದ್ದು, ಆತನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ:ಹೈಕೋರ್ಟ್ ಎಂದರೆ ಏನೆಂದು ತೋರಿಸುತ್ತೇವೆ : ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವ ದಿನ ಸನಿಹ
ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದಲ್ಲಿನ ಫೋರ್ಸ್ ಮೆಸ್ನಲ್ಲಿ ಈ ಘಟನೆ ನಡೆದಿದೆ.
ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
5 troops were injured today due to fratricide committed by Ct Satteppa SK at HQ 144 Bn Khasa, Amritsar. Ct Satteppa S K was also injured. Out of the 6 injured, 5 troops incl Ct Satteppa, have lost their lives, one critical. A court of inquiry has been ordered: BSF pic.twitter.com/d17FzAdFkl
— ANI (@ANI) March 6, 2022
ಸತ್ಯಾಂಶ ತಿಳಿಯಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.