Budgam encounter: ಓರ್ವ ಉಗ್ರ, 3 ನಾಗರಿಕರು ಬಲಿ; ಮುಷ್ಕರಕ್ಕೆ ಕರೆ


Team Udayavani, Mar 29, 2017, 11:19 AM IST

Encounter1-700.jpg

ಕಾಶ್ಮೀರ : ಕಾಶ್ಮೀರದ ಬಡಗಾಂವ್‌ ಜಿಲ್ಲೆಯಲ್ಲಿ  ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ  ಭದ್ರತಾ ಪಡೆಗಳ ಗುಂಡಿಗೆ ಓರ್ವ ಉಗ್ರ ಹತನಾಗಿದ್ದಾನೆ. ಆದರೆ ಉಗ್ರ ನಿಗ್ರಹ ಸೇನಾ ಕಾರ್ಯಾಚರಣೆಯನ್ನು ಪ್ರತಿಭಟಿಸಲು ಎನ್‌ಕೌಂಟರ್‌ ತಾಣದಲ್ಲಿ ಸೇರಿದ ಜನಸಮೂಹವನ್ನು ನಿಯಂತ್ರಿಸಲು ಸೇನೆ ನಡೆಸಿದ ಕಾರ್ಯಾಚರಣೆಗೆ ಮೂವರು ನಾಗರಿಕರು ಬಲಿಯಾದರು. 

ಇದನ್ನು ಪ್ರತಿಭಟಿಸಿ ಪ್ರತ್ಯೇಕತಾವಾದಿಗಳು ಕಾಶ್ಮೀರದಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.  ಎನ್‌ಕೌಂಟರ್‌ ತಾಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಾ ಭದ್ರತಾ ಪಡೆಗಳಿಗೆ ಗುಂಡು ಹಾರಿಸುವ ಅನಿವಾರ್ಯತೆಯನ್ನು ತಂದೊಡ್ಡುವ ಟ್ರೆಂಡ್‌ ಕಳೆದ ವರ್ಷದಿಂದ ಆರಂಭವಾಗಿದೆ. ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ ಅವರು ಕಾಶ್ಮೀರಿ ಯುವಕರಿಗೆ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆಗೆ ಅಡ್ಡಿಪಡಿಸಕೂಡದೆಂದು ಕಟ್ಟುನಿಟ್ಟಾಗಿ ಹೇಳಿದ ಹೊರತಾಗಿಯೂ ಈ ಟ್ರೆಂಡ್‌ ಇನ್ನೂ ನಿಂತಿಲ್ಲ. 

ಎನ್‌ಕೌಂಟರ್‌ ನಡೆದ ತಾಣದಲ್ಲಿ ಹತನಾದ ಉಗ್ರನ ಬಳಿ ಇದ್ದ ಒಂದು ಬಂದೂಕನ್ನು ಯೋಧರು ವಶಪಡಿಸಿಕೊಂಡಿರುವುದಾಗಿ ಸೇನಾ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಎನ್‌ಕೌಂಟರ್‌ ಮುಗಿದಿದ್ದು  ಈ ಕಾರ್ಯಾಚರಣೆಯಲ್ಲಿ ಒಬ್ಬ ಪ್ಯಾರಾ ಟ್ರೂಪರ್‌ ಗಾಯಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. 

ಎನ್‌ಕೌಂಟರ್‌ ನಡೆದ ತಾಣಕ್ಕೆ ಸಮೀಪ ಪ್ರತಿಭಟನೆ ನಡೆಸುತ್ತಿದ್ದವರನ್ನು ಯೋಧರು ನಿಯಂತ್ರಿಸಲು ನಡೆಸಿದ ಗುಂಡಿನ ಹಾರಾಟದಲ್ಲಿ ಇಪ್ಪತ್ತರ ಹರೆಯದ ಮೂವರು ನಾಗರಿಕರು ಮೃತಪಟ್ಟು ಇತರ 18 ಮಂದಿ ಗಾಯಗೊಂಡರೆಂದು ಅಧಿಕಾರಿ ತಿಳಿಸಿದ್ದಾರೆ.  ಮೃತ ನಾಗರಿಕರನ್ನು ಝಹೀದ್‌ ದರ್‌, ಸಾಕಿಬ್‌ ಅಹ್ಮದ್‌ ಮತ್ತು ಇಶಾಕ್‌ ಅಹ್ಮದ್‌ ವಾನಿ ಎಂದು ಗುರುತಿಸಲಾಗಿದೆ. 

ಪ್ರತಿಭಟನಕಾರರು ನಡೆಸಿದ್ದ ಕಲ್ಲು ತೂರಾಟದಲ್ಲಿ 43 ಸಿಆರ್‌ಪಿಎಫ್ ಮತ್ತು ರಾಜ್ಯ ಪೊಲೀಸ್‌ ದಳದ 20 ಮಂದಿ ಸೇರಿದಂತೆ ಒಟ್ಟು 63 ಮಂದಿ ಭದ್ರತಾ ಸಿಬಂದಿಗಳು ಗಾಯಗೊಂಡರು. 11 ತಾಸುಗಳ ಕಾಲ ನಡೆದ ಸುದೀರ್ಘ‌ ಎನ್‌ಕೌಂಟರ್‌ನಲ್ಲಿ ಒಬ್ಬ ಪ್ಯಾರಾ ಟ್ರೂಪರ್‌ ಗಾಯಗೊಂಡ ಎಂದು ಭದ್ರತಾ ಅಧಿಕಾರಿ ಹೇಳಿದರು. ಪ್ರತಿಭಟನಕಾರರು ಆಜಾದಿ ಘೋಷಣೆಗಳನ್ನು ಹಾಗೂ ಉಗ್ರರ ಪರ ಘೋಷಣೆಯನ್ನು ಕೂಗುತ್ತಿದ್ದರು.

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.