Union Budget 2024: ಮುದ್ರಾ ಸಾಲ ಮಿತಿ 20 ಲಕ್ಷ ರೂ.ಗಳಿಗೆ ಏರಿಕೆ


Team Udayavani, Jul 23, 2024, 8:21 PM IST

Budget 2024; Mudra loan limit increased to Rs.20 lakhs

ಹೊಸದಿಲ್ಲಿ: ದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆ  (ಪಿಎಂಎಂವೈ)ಅನ್ವಯ ಪಡೆಯುವ ಸಾಲದ ಮಿತಿಯನ್ನು ಪರಿಷ್ಕರಿಸಲಾಗಿದೆ. ಮುದ್ರಾದ “ತರುಣ ವರ್ಗ’ದ ಅನ್ವಯ ನೀಡಲಾಗುವ ಸಾಲದ ಮಿತಿಯನ್ನು 10ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಈ ಮೂಲಕ ಉದ್ಯಮಿಗಳಿಗೆ ಕೇಂದ್ರ ಬಜೆಟ್‌ನಲ್ಲಿ ಸಿಹಿ ನೀಡಲಾಗಿದೆ.

ಮುದ್ರಾ ಯೋಜನೆಯಲ್ಲಿ 3 ವರ್ಗದಲ್ಲಿ (ಕ್ಯಾಟಗರಿಯಲ್ಲಿ) ಸಾಲಗಳನ್ನು ನೀಡಲಾಗುತ್ತದೆ. ಈ ಪೈಕಿ ತರುಣ ವರ್ಗದ ಅನ್ವಯ ನೀಡಲಾಗುತ್ತಿದ್ದ ಸಾಲದ ಮಿತಿ ಈ ಹಿಂದೆ 5ರಿಂದ 10 ಲಕ್ಷ ರೂ.ಗಳ ವರೆಗಿತ್ತು. ಇದೀಗ ಇದೇ ವರ್ಗದಲ್ಲಿ ಈ ಹಿಂದೆ ಸಾಲ ಪಡೆದು, ಯಸ್ವಿಯಾಗಿ ಮರುಪಾವತಿಸಿದ ಉದ್ಯಮಿಗಳು ಹೊಸದಾಗಿ 20 ಲಕ್ಷ ರೂ.ಗಳವರೆಗೆ ಸಾಲ ಪಡೆಯಬಹುದಾಗಿದೆ. ಈ ಮೂಲಕ ಉದ್ಯಮ ವಿಸ್ತರಣೆಗೆ ಕೇಂದ್ರದಿಂದ ಹೆಚ್ಚಿನ ಬೆಂಬಲ ಸಿಕ್ಕಂತಾಗಿದೆ. ಉಳಿದಂತೆ ಶಿಶು ಹಾಗೂ ಕಿಶೋರ ವರ್ಗದ ಸಾಲದ ಮಿತಿಗಳು ಹಾಗೆಯೇ ಮುಂದುವರಿದಿವೆ. ಶಿಶು ವರ್ಗದಲ್ಲಿ 50,000ರೂ.ಗಳವರೆಗೆ ಸಾಲ ಪಡೆಯಬಹುದಾಗಿದ್ದು, ಕಿಶೋರ ವರ್ಗದಲ್ಲಿ 50 ಸಾವಿರದಿಂದ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ದೊರೆಯಲಿದೆ. ಪಿಎಂಎಂವೈ ಅನ್ವಯ ಬ್ಯಾಂಕುಗಳು, ಬ್ಯಾಂಕಿಂಗ್‌ ಅಲ್ಲದ ಹಣಕಾಸು ಕಂಪನಿಗಳು (ಎನ್‌ಬಿಎಫ್ಸಿಎಸ್‌), ಸಣ್ಣ ಹಣಕಾಸು ಸಂಸ್ಥೆಗಳು (ಎಂಎಫ್ಐಎಸ್‌) ಹಾಗೂ ಇತರ ಹಣಕಾಸು ಸಂಸ್ಥೆಗಳ ಮೂಲಕ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಏನಿದು ಮುದ್ರಾ ಯೋಜನೆ ?: ಕಾರ್ಪೋರೇಟ್‌ ಅಲ್ಲದ ಕೃಷಿಯೇತರ ಸಣ್ಣ ಮತ್ತು ಸೂಕ್ಷ್ಮಉದ್ಯಮಿಗಳಿಗೆ ಮೇಲಾಧಾರ ರಹಿತ ಸಾಲವನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ 2015ರ ಏಪ್ರಿಲ್‌ 8ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಿದರು. ಕಡಿಮೆ ಬಡ್ಡಿದರದಲ್ಲಿ ದೊರೆಯುವ ಈ ಸಾಲ ಸೌಲಭ್ಯದಿಂದ ಹೊಸದಾಗಿ ಉದ್ಯಮ ಆರಂಭಿಸಲು ಅಥವಾ ಅಸ್ತಿತ್ವದಲ್ಲಿರುವ ಉದ್ಯಮದ ವಿಸ್ತರಣೆಗೆ ಅನುಕೂಲವಾಗಲಿದೆ.

 ಮುದ್ರಾದಿಂದ ಮಹಿಳಾ ಸಬಲೀಕರಣ: 2024ರ ಫೆಬ್ರವರಿವರೆಗೆ ಮುದ್ರಾ ಯೋಜನೆ ಅನ್ವಯ 22.5 ಲಕ್ಷ ಕೋಟಿ ರೂ.ಮೊತ್ತದ ಒಟ್ಟು 43 ಕೋಟಿ ಸಾಲಗಳನ್ನು ನೀಡಲಾಗಿದೆ. ಈ ಪೈಕಿ 30 ಕೋಟಿ ಸಾಲಗಳನ್ನು ಮಹಿಳೆಯರಿಗೇ ನೀಡಲಾಗಿದೆ. ಮಹಿಳೆಯರು ಹೊಸದಾಗಿ ಉದ್ಯಮಗಳನ್ನು ಆರಂಭಿಸಲು ಅಗತ್ಯವಿರುವ ಸಾಲ ಸೌಲಭ್ಯ ಒದಗಿಸುವ ಮೂಲಕ ಮಹಿಳಾ ಉದ್ಯಮಿಗಳನ್ನು ಸೃಷ್ಟಿಸುವುದರ ಜತೆಯೆಲ್ಲೇ ಉದ್ಯೋಗ ಅವಕಾಶಗಳನ್ನೂ ಮುದ್ರಾ ಯೋಜನೆ ಮೂಲಕ ಸೃಷ್ಟಿಸಲಾಗುತ್ತಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.