Mallikarjun Kharge; ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್
ಇದು "ಕಾಪಿಕ್ಯಾಟ್' ಬಜೆಟ್, ನಮ್ಮ ಪ್ರಣಾಳಿಕೆಯ ಕಾಪಿ ಆ್ಯಂಡ್ ಪೇಸ್ಟ್: ಕಾಂಗ್ರೆಸ್
Team Udayavani, Jul 23, 2024, 9:30 PM IST
ಹೊಸದಿಲ್ಲಿ: ಈ ಬಾರಿಯ ಕೇಂದ್ರ ಬಜೆಟ್ “ಕಾಪಿಕ್ಯಾಟ್’ ಬಜೆಟ್ ಆಗಿದ್ದು, ಇದು ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಮೋದಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಬಜೆಟ್ ಮಂಡನೆಯಾಗಿದೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆ ದು ಕೊಂಡಿ ರುವ ಖರ್ಗೆ, “ಮೋದಿ ಸರ್ಕಾರದ “ಕಾಪಿಕ್ಯಾಟ್ ಬಜೆಟ್’ಗೆ ಸರಿಯಾಗಿ ಕಾಂಗ್ರೆಸ್ನ ನ್ಯಾಯಪತ್ರವನ್ನು ನಕಲು ಮಾಡಲೂ ಬಂದಿಲ್ಲ. ತಮ್ಮ ಮಿತ್ರ ಪಕ್ಷಗಳಿಗಾಗಿ ಅರೆ ಮನಸ್ಸಿನಲ್ಲಿ ಉಚಿತ ಕೊಡುಗೆಗಳನ್ನು ನೀಡಿ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಇದು ದೇಶದ ಪ್ರಗತಿಗಾಗಿ ಮಂಡನೆಯಾದ ಬಜೆಟ್ ಅಲ್ಲ. ಇದು “ಸೇವ್ ಮೋದಿ ಗೌರ್ನಮೆಂಟ್ ಬಜೆಟ್’ ಎಂದು ಹೇಳಿದ್ದಾರೆ.
ಹತ್ತು ವರ್ಷಗಳಿಂದ ಉದ್ಯೋಗ ಸೃಷ್ಟಿಯ ಘೋಷಣೆಯನ್ನು ಮಾತ್ರ ಹೇಳಿ ಯುವಕರನ್ನು ಹತಾಶಗೊಳಿಸಿದ್ದು, ಈ ಬಾರಿಯೂ ಕನಿಷ್ಠ ಘೋಷಣೆ ಮಾಡಲಾಗಿದೆ. ರೈತವರ್ಗ, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗ ಸೇರಿದಂತೆ ಸಾಮಾಜಿಕವಾಗಿ ಶೋಷಿತ ವರ್ಗಗಳಿಗಾಗಿ ಯಾವುದೇ ಕ್ರಾಂತಿಕಾರಿ ಯೋಜನೆಯನ್ನು ಘೋಷಿಸಿಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.
ಕಾಪಿ ಆ್ಯಂಡ್ ಪೇಸ್ಟ್ ಮಾಡಿರುವ ಬಜೆಟ್:
ಇನ್ನು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ಬಜೆಟ್ ಅನ್ನು “ಕಾಪಿ ಆ್ಯಂಡ್ ಪೇಸ್ಟ್’, ಹಾಗೂ “ಕುರ್ಚಿ ಉಳಿಸಿ ಬಜೆಟ್’ ಎಂದು ವಾಗ್ಧಾಳಿ ನಡೆಸಿದ್ದಾರೆ. ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ, ಇತರ ರಾಜ್ಯಗಳ ವೆಚ್ಚದಲ್ಲಿ ಮಿತ್ರಪಕ್ಷಗಳಿಗೆ ಸುಳ್ಳು ಭರವಸೆಗಳನ್ನು ನೀಡಲಾಗಿದೆ.
2024ರ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಿಸಿದ್ದ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್ಗಳ “ಕಾಪಿ-ಪೇಸ್ಟ್’ ಮಾಡಿ ಈ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ತಮ್ಮ ಮಿತ್ರರಿಗೆ ತೃಪ್ತಿ ಪಡಿಸಲಷ್ಟೇ ಈ ಬಜೆಟ್ ಮಂಡನೆಯಾಗಿದ್ದು, ಜನ ಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ರಾಹುಲ್ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.