ಕುರ್ಚಿ ಉಳಿಸಿಕೊಳ್ಳುವ ಬಜೆಟ್‌: ರಾಹುಲ್ ಗಾಂಧಿ ಟೀಕೆ


Team Udayavani, Jul 25, 2024, 7:00 AM IST

ಕುರ್ಚಿ ಉಳಿಸಿಕೊಳ್ಳುವ ಬಜೆಟ್‌: ರಾಹುಲ್ ಗಾಂಧಿ ಟೀಕೆ

ಹೊಸದಿಲ್ಲಿ: ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್‌ನಲ್ಲಿ ತಾರತಮ್ಯ ಎಸಗಲಾಗಿದೆ. ಇದು ಒಕ್ಕೂಟ ರಚನೆ ಮೇಲಿನ ದಾಳಿ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಸಂಸತ್‌ ಆವರಣದಲ್ಲಿ ಐಎನ್‌ಡಿಐಎ ಒಕ್ಕೂಟದ ಸಂಸದರು ಬುಧವಾರ ಕೇಂದ್ರ ಬಜೆಟ್‌ ವಿರೋಧಿಸಿ ಪ್ರತಿಭಟನೆ ನಡೆಸಿದ ಬಳಿಕ ಅವರು ಮಾತನಾಡಿದರು. ಕೇಂದ್ರ ಸರಕಾರ ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಬಜೆಟ್‌ ಮಂಡಿಸಿದೆ. ಅಧಿಕಾರದ ದುರಾಸೆಯಲ್ಲಿ ದೇಶದ ಇತರೆ ರಾಜ್ಯಗಳನ್ನು ಕಡೆಗಣಿಸಿ ತಾರತಮ್ಯ ಎಸಗಿದೆ. ದೇಶದ ಪ್ರತಿಯೊಂದು ರಾಜ್ಯಕ್ಕೂ ಸಮಾನ ನ್ಯಾಯ ಒದಗಿಸಲೇಬೇಕು ಇದಕ್ಕಾಗಿ ಇಂಡಿಯಾ ಒಕ್ಕೂಟ ತನ್ನ ಹೋರಾಟ ಮುಂದುವರಿಸುತ್ತದೆ. ರಾಜ್ಯಗಳ ನಡುವೆ ತಾರತಮ್ಯ ಎಸಗುವ ಕೇಂದ್ರ ಸರಕಾರದ ಈ ನಡೆ ಒಕ್ಕೂಟ ರಚನೆ ಮೇಲೆ ಎಸಗುತ್ತಿರುವ ಆಕ್ರಮಣ’ ಎಂದೂ ಟೀಕಿಸಿದ್ದಾರೆ.

ನಿರ್ಮಲಾ ಮಾತಿನಲ್ಲಿ ನಿಸ್ಸೀಮರು: ಖರ್ಗೆ
ಲೋಕಸಭೆ ಮತ್ತು ರಾಜ್ಯ ಸಭೆ ಕಲಾಪಗಳಲ್ಲೂ ಕೇಂದ್ರ ಬಜೆಟ್‌ ವಿರೋಧಿಸಿ ವಿಪಕ್ಷಗಳು ಘೋಷಣೆ ಮೊಳಗಿಸಿವೆ. ಸಚಿವೆ ನಿರ್ಮಲಾ ಸೀತಾರಾಮನ್‌ ಕರ್ನಾ ಟಕದಿಂದ ಆಯ್ಕೆ ಯಾ ದವರು, ಬಜೆಟ್‌ನಲ್ಲಿ ಕರ್ನಾಟಕಕ್ಕೂ ಸಿಹಿ ನೀಡುವರೆಂದು ಭಾವಿಸಿ ದ್ದೆವು. ಆದರೆ ಅದು ಹುಸಿಯಾಗಿದೆ ಎಂದು ಖರ್ಗೆ ಹೇಳಿದ್ದಾರೆ. ನಿರ್ಮಲಾ ಅವರಿಗೆ ಪ್ರತಿಕ್ರಿಯಿಸಲು ಸಭಾ ಧ್ಯಕ್ಷರು ಅವಕಾಶ ನೀಡುವ ಮುನ್ನವೇ “ಮಾತೆ ಮಾತಿನಲ್ಲಿ ನಿಸ್ಸೀಮರು ‘ಎಂದು ನನಗೆ ತಿಳಿದಿದೆ. ನಾನು ಹೇಳಬೇಕಿರುವುದನ್ನು ಹೇಳಿದ್ದೇನೆ. ಎಲ್ಲಾ ರಾಜ್ಯಗಳ ತಟ್ಟೆ ಖಾಲಿ ಇಟ್ಟು ಆಂಧ್ರ- ಬಿಹಾರದ ತಟ್ಟೆಗೆ ಮಾತ್ರ ಕೇಂದ್ರದ ಬಜೆಟ್‌ನಲ್ಲಿ ಜಿಲೇಬಿ, ಪಕೋಡವನ್ನು ನೀಡಲಾಗಿದೆ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ.

ನಮಗೆ ಅನ್ಯಾಯ, ನೀತಿ ಆಯೋಗ ಸಭೆಗೆ ಹೋಗಲ್ಲ: ತೆಲಂಗಾಣ ಸಿಎಂ ರೇವಂತ್‌
ತೆಲಂಗಾಣಕ್ಕೆ ನೀಡಬೇಕಾದ ಹಣವನ್ನೂ ನೀಡದೇ, ಕೊಡಬೇಕಾದ ಅನುಮತಿಗಳನ್ನೂ ಕೊಡದೇ ರಾಜ್ಯದ ಹಿತಾಸಕ್ತಿಗೆ ಕೇಂದ್ರ ಸರಕಾರ ಧಕ್ಕೆ ತಂದಿದೆ. ಈ ಕಾರಣ ಜು.27ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ತೆಲಂಗಾಣ ಸಿಎಂ ಆಗಿ ನಾನು ಬಹಿಷ್ಕರಿಸು ತ್ತಿದ್ದೇನೆ. ಪ್ರಧಾನಿ ನೇತೃತ್ವದ ಈ ಸಭೆಗೆ ಹಾಜರಾಗಲ್ಲ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಹೇಳಿದ್ದಾರೆ.

ಮೋದಿ, ಹಗೆ ಸಾಧಿಸಿದರೆ ಒಂಟಿಯಾಗ್ತಿàರಿ: ಸ್ಟಾಲಿನ್‌
ಕೇಂದ್ರ ಬಜೆಟ್‌ ನಿಮ್ಮ ಅಧಿಕಾರವನ್ನು ಕಾಪಾಡಬಹುದು ಆದರೆ ದೇಶವನ್ನು ಕಾಪಾ ಡಲಾರದು. ಚುನಾವಣೆ ಮುಗಿದಿದೆ. ವಿಪಕ್ಷಗಳ ವಿರುದ್ಧ ಇನ್ನೂ ಹಗೆ ಸಾಧಿಸಿದರೆ ನೀವು ಒಬ್ಬಂಟಿಯಾಗ ಬೇಕಾಗುತ್ತದೆ ಎಂದು ಪ್ರಧಾನಿ ಮೋದಿ ಅವ ರನ್ನು ಉಲ್ಲೇಖೀಸಿ ತಮಿ ಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಟ್ವೀಟ್‌ ಮಾಡಿದ್ದಾರೆ. ಕೇಂದ್ರ ಬಜೆಟ್‌ ವಿರೋಧಿಸಿ ಟ್ವೀಟ್‌ ಮಾಡಿರುವ ಸ್ಟಾಲಿನ್‌, ನಿಮ್ಮನ್ನು ಸೋಲಿಸಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಸಮಯ ಇದಲ್ಲ. ಈಗ ದೇಶಕ್ಕಾಗಿ ಯೋಚಿಸುವ ಸಮಯ. ನೀವು ನಿಮ್ಮ ಇಷ್ಟ ಕಷ್ಟದಂತೆ ಆಡಳಿತ ನಡೆಸಿದರೆ ಖಂಡಿತವಾಗಿ ಒಬ್ಬಂಟಿಯಾಗ ಬೇಕಾಗುತ್ತದೆ. ದ್ವೇಷ ಪಕ್ಕಕ್ಕಿಟ್ಟು ವಸ್ತುನಿಷ್ಠವಾಗಿ ಆಡಳಿತ ನಡೆಸಿ ಎಂದು ಆಗ್ರಹಿಸಿದ್ದಾರೆ.

ಬಂಗಾಲಕ್ಕೆ ಅನುದಾನ: ಟಿಎಂಸಿ, ಸಚಿವೆ ನಿರ್ಮಲಾ ವಾಗ್ವಾದ
ಕೇಂದ್ರ ಅನುದಾನ ಬಿಡುಗಡೆಗೆ ಸಂಬಂಧಿ ಸಿದಂತೆ ಬಜೆಟ್‌ನಲ್ಲಿ ಪಶ್ಚಿಮ ಬಂಗಾಲದ ಹೆಸರು ಉಲ್ಲೇಖೀಸಿಲ್ಲ ಎಂದು ಟಿಎಂಸಿ ನಾಯಕಿ ಸುಷ್ಮಿತಾ ದೇವ್‌ ಟೀಕಿಸಿದ್ದಾರೆ. ವಿಶೇಷ ಅನು ದಾನ ನೀಡುವಲ್ಲಿ ಸರಕಾರ ಮುತುವರ್ಜಿ ವಹಿಸಿಲ್ಲ ಎಂದು ಟ್ವೀಟ್‌ ಮಾಡಿ ಆರೋಪಿ ಸಿದ್ದರು. ಅದಕ್ಕೆ ರಾಜ್ಯಸಭೆಯಲ್ಲಿ ತಿರುಗೇಟು ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, 10 ವರ್ಷಗಳಿಂದ ಪಶ್ಚಿಮ ಬಂಗಾಲ ಸರಕಾರ ಕೇಂದ್ರ ಸರಕಾರದ ಯೋಜನೆಗಳನ್ನು ಸರಿ ಯಾಗಿ ಅನುಷ್ಠಾನ ಮಾಡಿಲ್ಲ. ಈಗ ಬಜೆಟ್‌ ಅನ್ನು ಪ್ರಶ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೇ ಬಜೆಟ್‌ನಲ್ಲಿ ಯಾವ ರಾಜ್ಯಗಳ ಹೆಸರಿಲ್ಲವೋ ಅವುಗಳಿಗೆ ಕೇಂದ್ರದ ಯೋಜನೆ ತಲುಪುವುದಿಲ್ಲ ಎಂದೇನೂ ಇಲ್ಲ ಎಂದೂ ಸಚಿವೆ ಹೇಳಿದರು.

ಟಾಪ್ ನ್ಯೂಸ್

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.