ಉತ್ತರ ಪ್ರದೇಶ, ಪಂಜಾಬ್‌, ಒಡಿಶಾದಲ್ಲಿ ಉಪಚುನಾವಣೆ: ಆಡಳಿತ ಪಕ್ಷಗಳಿಗೆ ಜಯ


Team Udayavani, May 14, 2023, 7:50 AM IST

ಉತ್ತರ ಪ್ರದೇಶ, ಪಂಜಾಬ್‌, ಒಡಿಶಾದಲ್ಲಿ ಉಪಚುನಾವಣೆ: ಆಡಳಿತ ಪಕ್ಷಗಳಿಗೆ ಜಯ

ಹೊಸದಿಲ್ಲಿ: ಉತ್ತರ ಪ್ರದೇಶ, ಪಂಜಾಬ್‌ ಮತ್ತು ಒಡಿಶಾದಲ್ಲಿ ನಡೆದ ಉಪ ಚುನಾವಣೆಯ ಫ‌ಲಿತಾಂಶ ಘೋಷಣೆಯಾಗಿದೆ. ಉತ್ತರ ಪ್ರದೇಶದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎರಡರಲ್ಲೂ ಆಪ್ನಾ ದಳ(ಸೋನೆಲಾಲ್‌) ಪಕ್ಷವು ಜಯಭೇರಿ ಬಾರಿಸಿದೆ.

ರಾಮ್‌ಪುರ ಜಿಲ್ಲೆಯ ಸೂರ್‌ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾ ವಣೆಯಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಆಪ್ನಾ ದಳ(ಸೋನೆಲಾಲ್‌) ದ ಶಫೀಕ್‌ ಅಹ್ಮದ್‌ ಅನ್ಸಾರಿ ಅವರು ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಅನುರಾಧ ಚೌಹಾಣ್‌ ಅವರ ವಿರುದ್ಧ 8,724 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅಹ್ಮದ್‌ ಅನ್ಸಾರಿ ಅವರು 68,630 ಮತಗಳನ್ನು ಪಡೆದರೆ, ಅನುರಾಧ ಚೌಹಾಣ್‌ ಅವರು 59,906 ಮತಗಳನ್ನು ಪಡೆದಿದ್ದಾರೆ. 15 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮೊರಾದಾಬಾದ್‌ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಹಿನ್ನೆಲೆಯಲ್ಲಿ ಅಬ್ದುಲ್ಲಾ ಅಜಂ ಖಾನ್‌ ಅವರನ್ನು ಫೆಬ್ರವರಿಯಲ್ಲಿ ಅನರ್ಹಗೊಳಿಸಿದ ಅನಂತರ ಸೂರ್‌ ವಿಧಾನಸಭಾ ಸ್ಥಾನವು ತೆರವಾಗಿತ್ತು. ಅಬ್ದುಲ್ಲಾ ಅವರು ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್‌ ಅವರ ಪುತ್ರರಾಗಿದ್ದಾರೆ.

ಇನ್ನೊಂದೆಡೆ, ಉತ್ತರ ಪ್ರದೇಶದ ಛನ್ಬೆ ವಿಧಾನ ಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಕೀರ್ತಿ ಕೊಲ್‌ ವಿರುದ್ಧ 9,587 ಮತಗಳ ಅಂತರದಿಂದ ಅಪ್ನಾ ದಳ(ಸೋನೆಲಾಲ್‌) ಪಕ್ಷದ ರಿಂಕಿ ಕೊಲ್‌ ಜಯಗಳಿಸಿದ್ದಾರೆ. ರಿಂಕಿ ಕೊಲ್‌ ಅವರು 76,203 ಮತಗಳನ್ನು ಪಡೆದರೆ, ಕೀರ್ತಿ ಕೊಲ್‌ ಅವರು 66,616 ಮತಗಳನ್ನು ಪಡೆದಿದ್ದಾರೆ.

ಫೆಬ್ರವರಿಯಲ್ಲಿ ಅಪ್ನಾ ದಳ (ಸೋನೆಲಾಲ್‌) ಪಕ್ಷದ ಶಾಸಕ ರಾಹುಲ್‌ ಕೊಲ್‌ ಅವರ ನಿಧನ ದಿಂದಾಗಿ ಛನ್ಬೆ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.

ಒಡಿಶಾ ಉಪ ಚುನಾವಣೆ: ಒಡಿಶಾದ ಜಾರ್ಸುಗುಡಾ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಡಳಿತರೂಢ ಬಿಜೆಡಿ ಪಕ್ಷದ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಟಂಕಧರ್‌ ತ್ರಿಪಾಠಿ ವಿರುದ್ಧ 48,721 ಮತಗಳ ಅಂತರದಿಂದ ಬಿಜೆಡಿ ಪಕ್ಷದ ದೀಪಾಲಿ ದಾಸ್‌ ಅವರು ಗೆಲುವು ಸಾಧಿಸಿದ್ದಾರೆ.

ದೀಪಾಲಿ ದಾಸ್‌ ಅವರು ಒಟ್ಟಾರೆ 1,07,198 ಮತಗಳನ್ನು ಪಡೆದರೆ, ಸಮೀಪದ ಪ್ರತಿಸ್ಪರ್ಧಿ ಟಂಕಧರ್‌ ತ್ರಿಪಾಠಿ ಅವರು 58,477 ಮತಗಳನ್ನು ಪಡೆಯಲು ಮಾತ್ರ ಶಕ್ತರಾದರು. ದೀಪಾಲಿ ದಾಸ್‌ ಅವರು ಒಡಿಶಾದ ಹಿಂದಿನ ಆರೋಗ್ಯ ಸಚಿವ ನಬಾ ಕಿಶೋರ್‌ ದಾಸ್‌ ಅವರ ಪುತ್ರಿಯಾಗಿದ್ದಾರೆ. ಜನವರಿಯಲ್ಲಿ ಪೊಲೀಸ್‌ ಅಧಿಕಾರಿಯೊಬ್ಬ ಜಾರ್ಸುಗುಡಾ ಕ್ಷೇತ್ರದ ಶಾಸಕರಾಗಿದ್ದ ಕಿಶೋರ್‌ ದಾಸ್‌ ಅವರನ್ನು ಹತ್ಯೆ ಮಾಡಿದ್ದ. ಇದರಿಂದಾಗಿ ಸ್ಥಾನ ತೆರವಾಗಿತ್ತು.

ಜಲಂಧರ್‌ ಲೋಕಸಭೆ ಕ್ಷೇತ್ರ: ಪಂಜಾಬ್‌ನ ಜಲಂಧರ್‌ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ(ಆಪ್‌) ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಕರಮ್‌ಜೀತ್‌ ಕೌರ್‌ ಚೌಧರಿ ವಿರುದ್ಧ ಆಪ್‌ ಅಭ್ಯರ್ಥಿ ಸುಶೀಲ್‌ ಕುಮಾರ್‌ ರಿಂಕು 58,691 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಸುಶೀಲ್‌ ಕುಮಾರ್‌ ರಿಂಕು ಅವರು 3,02,279 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕರಮ್‌ಜೀತ್‌ ಕೌರ್‌ ಚೌಧರಿ ಅವರು 2,43,588 ಮತಗಳನ್ನು ಪಡೆದಿದ್ದಾರೆ.

ಜನವರಿಯಲ್ಲಿ ಕಾಂಗ್ರೆಸ್‌ ಸಂಸದರಾಗಿದ್ದ ಸಂತೋಕ್‌ ಸಿಂಗ್‌ ಚೌಧರಿ ಅವರ ಸಾವಿನಿಂದ ಜಲಂಧರ್‌ ಲೋಕಸಭೆ ಕ್ಷೇತ್ರ ತೆರವಾಗಿತ್ತು. ಇವರ ಪತ್ನಿ ಕರಮ್‌ಜೀತ್‌ ಕೌರ್‌ ಚೌಧರಿ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿತ್ತು.

ಯು.ಪಿ.: 16 ಪಾಲಿಕೆಗಳಲ್ಲಿ ಬಿಜೆಪಿ ಜಯಭೇರಿ
ಉತ್ತರ ಪ್ರದೇಶದ ಒಟ್ಟು 17 ನಗರ ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ 16 ನಗರ ಪಾಲಿಕೆಗಳು ಬಿಜೆಪಿ ತೆಕ್ಕೆಗೆ ಸೇರಿದೆ. ಈ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಕಮಾಲ್‌ ಮುಂದುವರಿದಿದೆ. ಪ್ರಮುಖ ವಿಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಎಐಎಂಐಎಂ ಪಕ್ಷವನ್ನು ಬಿಜೆಪಿ ಮಕಾಡೆ ಮಲಗಿಸಿದೆ. ಬಹುತೇಕ ವಾರ್ಡ್‌ಗಳಲ್ಲಿ ಕೇಸರಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ರಾಮಜನ್ಮಭೂಮಿ ಅಯೋಧ್ಯೆ ನಗರ ಪಾಲಿಕೆಯು ಕೂಡ ಬಿಜೆಪಿ ತೆಕ್ಕೆಗೆ ಜಾರಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.