![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Aug 4, 2023, 7:11 PM IST
ನಾಗ್ಪುರ: ಬಾಂಬೆ ಹೈಕೋರ್ಟ್ ನ ನಾಗ್ಪುರ ಬೆಂಚ್ ನ ಜಡ್ಜ್ ನ್ಯಾ. ರೋಹಿತ್ ಡಿಯೊ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಕೋರ್ಟ್ ಕಲಾಪದಲ್ಲೇ ತನ್ನ ರಾಜೀನಾಮೆ ಬಗ್ಗೆ ಘೋಷಣೆ ಮಾಡಿದ ಅವರು, ‘ನನಗೆ ಸ್ವಾಭಿಮಾನದ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.
“ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಲು ವಿಷಾದಿಸುತ್ತೇನೆ. ನನ್ನ ಆತ್ಮಗೌರವಕ್ಕೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ನೀವು ಕಷ್ಟಪಟ್ಟು ಕೆಲಸ ಮಾಡಿ” ಎಂದು ನ್ಯಾಯಮೂರ್ತಿ ರೋಹಿತ್ ಅವರು ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರಿಗೆ ಹೇಳಿದರು.
ಆದರೆ ತನ್ನ ರಾಜೀನಾಮೆಗೆ ನಿಖರ ಕಾರಣವನ್ನು ಅವರು ಬಹಿರಂಗ ಪಡಿಸಿಲ್ಲ. ಹಲವು ಸಂದರ್ಭಗಳಲ್ಲಿ ಕಟ್ಟುನಿಟ್ಟಾಗಿ ವರ್ತಿಸಿದ್ದಕ್ಕಾಗಿ ವಕೀಲರ ಬಳಿ ಅವರು ಕ್ಷಮೆ ಕೇಳಿದರು.
ಇದನ್ನೂ ಓದಿ:ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್ ಬ್ಯಾಟರ್ ಅಲೆಕ್ಸ್ ಹೇಲ್ಸ್
“ಸಭಾಂಗಣದಲ್ಲಿ ಹಾಜರಿರುವ ವಕೀಲರ ಬಳಿ ನಾನು ಕ್ಷಮೆ ಕೇಳುತ್ತೇನೆ. ನೀವು ಸುಧಾರಣೆ ಕಾಣಬೇಕು ಎಂಬ ಉದ್ದೇಶದಿಂದ ನಾನು ನಿಮಗೆ ಹಲವು ಬಾರಿ ಗದರಿದ್ದೇನೆ. ಆದರೆ ನಿಮಗೆ ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನಲ್ಲಿಲ್ಲ. ಯಾಕೆಂದರೆ ನೀವು ನನ್ನ ಕುಟುಂಬ ಇದ್ದಂತೆ” ಎಂದು ಅವರು ಹೇಳಿದರು.
ನ್ಯಾಯಮೂರ್ತಿಗಳ ದಿಢೀರ್ ನಿರ್ಧಾರ ಕೇಳಿ ವಕೀಲರು ಅಚ್ಚರಿ ಪಟ್ಟರು.
ನ್ಯಾ.ರೋಹಿತ್ ಡಿಯೋ ಅವರು ಜೂನ್ 2017 ರಲ್ಲಿ ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾಗಿ ನೇಮಕಗೊಂಡರು. 2025 ರ ಡಿಸೆಂಬರ್ ನಲ್ಲಿ ಅವರು ನಿವೃತ್ತರಾಗಬೇಕಿತ್ತು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.