Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ


Team Udayavani, Sep 27, 2024, 11:04 AM IST

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

ತ್ರಿಶೂರ್: ಹಾಡಹಗಲೇ ನಗರದ ಮುಖ್ಯ ರಸ್ತೆಯಲ್ಲೇ ಹನ್ನೆರಡು ಮಂದಿಯ ತಂಡವೊಂದು ಚಿನ್ನದ ವ್ಯಾಪಾರಿಗಳಿದ್ದ ಕಾರನ್ನು ಅಡ್ಡಗಟ್ಟಿ ಇಬ್ಬರನ್ನು ಅಪಹರಿಸಿ ಅವರ ಬಳಿಯಿದ್ದ 2.5 ಕೆಜಿ ಚಿನ್ನಾಭರಣ ದೋಚಿದ ಆಘಾತಕಾರಿ ಘಟನೆ ತ್ರಿಶೂರ್ ನ ರಾಷ್ಟ್ರೀಯ ಹೆದ್ದಾರಿಯ ಕುಥಿರಾನ್ ಬಳಿ ಕಳೆದ ಬುಧವಾರ(ಸೆ.೨೫) ರಂದು ನಡೆದಿದೆ.

ಮೂರೂ ಎಸ್‌ಯುವಿ ಕಾರಿನಲ್ಲಿ ಬಂದ ಹನ್ನೆರಡು ಮಂದಿಯ ತಂಡ ಚಿನ್ನದ ವ್ಯಾಪಾರಿಗಳಿದ್ದ ಕಾರನ್ನು ಹೆದ್ದಾರಿ ಮಧ್ಯದಲ್ಲಿ ಅಡ್ಡಗಟ್ಟಿ ಕಾರಿನಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿ ಅವರನ್ನು ಅಪಹರಿಸಿ ಬಳಿಕ ಅವರ ಬಳಿಯಿದ್ದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆ ನಡೆಸುವ ದೃಶ್ಯ ಅಲ್ಲಿದ್ದ ಕಾರಿನ ಡ್ಯಾಶ್ ಬೋರ್ಡ್ ನಲ್ಲಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಏನಿದು ಪ್ರಕರಣ:
ತ್ರಿಶೂರ್‌ನ ಕಿಜಕ್ಕೆಕೋಟಾದ ಚಿನ್ನದ ವ್ಯಾಪಾರಿ ಅರುಣ್ ಸನ್ನಿ ಮತ್ತು ಅವರ ಸ್ನೇಹಿತ ಪೊಟ್ಟಾ ನಿವಾಸಿ ರೋಜಿ ಥಾಮಸ್ ಇಬ್ಬರು ಚಿನ್ನದ ವ್ಯಾಪಾರಿಗಳು ಬುಧವಾರ ಬೆಳಗ್ಗೆ 11.15ಕ್ಕೆ ತಮ್ಮ ಕಾರಿನಲ್ಲಿ ಸುಮಾರು 2.5ಕೆಜಿ ಚಿನ್ನವನ್ನು ಕೊಯಮತ್ತೂರಿನಿಂದ ತ್ರಿಶೂರ್‌ಗೆ ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದರು ಎನ್ನಲಾಗಿದೆ. ಕಾರು ಕುಥಿರಾನ್ ಹೆದ್ದಾರಿಯಲ್ಲಿ ಬರುತ್ತಿದ್ದಂತೆ ಎರಡು ಇನ್ನೋವಾ ಹಾಗೂ ಒಂದು ರೆನಾಲ್ಟ್ ಕಾರಿನಲ್ಲಿ ಬಂದ ಹನ್ನೆರಡು ಮಂಜು ಮುಸುಧಾರಿಗಳ ತಂಡ ಕಾರನ್ನು ಅಡ್ಡಗಟ್ಟಿ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿ ಅವರ ಕಾರಿನಲ್ಲಿದ್ದ ಚಿನ್ನದ ಬ್ಯಾಗ್ ಎಗರಿಸಿ ಬಳಿಕ ಇಬ್ಬರನ್ನೂ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಘಟನೆಯ ದೃಶ್ಯ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆ ನಡೆದ ಕೆಲ ಹೊತ್ತಿನಲ್ಲೇ ಅಪಹರಣಕ್ಕೊಳಗಾದ ಇಬ್ಬರನ್ನು ತಂಡ ಕಾರಿನಿಂದ ಇಳಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಪೀಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಕ್ಯಾಮೆರಾ ಆಧಾರದ ಮೇಲೆ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Dwayne Bravo: ಎಲ್ಲಾ ಮಾದರಿ ಕ್ರಿಕೆಟ್‌ ನಿಂದ ನಿವೃತ್ತಿಯಾದ ʼಚಾಂಪಿಯನ್‌ʼ ಬ್ರಾವೋ

ಟಾಪ್ ನ್ಯೂಸ್

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

000

World Tourism Day:ಚಾರಣ- ಇದು ಮಲೆಕುಡಿಯರ ಊರಿನ ನಡುವಿನ ನಿಗೂಢ ಜಲಪಾತ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.