![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 5, 2020, 12:52 PM IST
ನವದೆಹಲಿ: ಹತ್ರಾಸ್ ಅತ್ಯಾಚಾರ ಮತ್ತು ಹತ್ಯೆ ಸಂತ್ರಸ್ಥೆಯ ಕುಟುಂಬಸ್ಥರನ್ನು ಆ.4ರ ಭಾನುವಾರ ಭೇಟಿ ಮಾಡಿದ್ದ ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮತ್ತು ಇತರ 400 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹತ್ರಾಸ್ ಭೇಟಿಯ ವೇಳೆ 144 ಸೆಕ್ಷನ್ ಜಾರಿಯಲ್ಲಿದ್ದರೂ ಕೂಡ ಅತೀ ದೊಡ್ಡ ಪ್ರಮಾಣದಲ್ಲಿ ಜನರು ಒಗ್ಗೂಡಿದಕ್ಕಾಗಿ 400ಕ್ಕಿಂತ ಹೆಚ್ಚು ಜನರು ಮೇಲೆ ಪ್ರಕರಣ ದಾಖಲಾಗಿದೆ.
ಭೀಮ್ ಆರ್ಮಿಯ ಮುಖ್ಯಸ್ಥ ಅಜಾದ್, ಹತ್ರಾಸ್ ಸಂತ್ರಸ್ಥೆಯ ಕುಟುಂಬಸ್ಥರನ್ನು ಭೇಟಿ ಮಾಡಲು ತೆರಳಿದ್ದ ವೇಳೆ 2 ಬಾರಿ ನಡುದಾರಿಯಲ್ಲಿ ಉತ್ತರಪ್ರದೇಶ ಪೊಲೀಸರು ತಡೆದಿದ್ದರು. ಈ ವೇಳೆ ಪ್ರತಿಭಟನೆಗಿಳಿದ ಆಜಾದ್, ಟ್ರಕ್ ಮೇಲೆ ನಿಂತು ಸಾಮೂಹಿಕ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಭಾರೀ ಪ್ರತಿಭಟನೆಯ ನಂತರ ಭಾನುವಾರ ಸಂಜೆ ಸಂತ್ರಸ್ಥೆಯ ಕುಟುಂಬಸ್ಥರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ಕಲ್ಪಿಸಿದ್ದರು.
ಇದನ್ನೂ ಓದಿ: ಡಿಕೆ ಶಿವಕುಮಾರ್ ದೊಡ್ಡಾಲಹಳ್ಳಿಯ ಮನೆ ಲಾಕರ್ ಒಡೆದಾಗ ಸಿಕ್ಕಿದ್ದು ಚಿಲ್ಲರೆ ಮಾತ್ರ!
ಅದಾಗ್ಯೂ ಈ ಕುರಿತು ಪ್ರತಿಕ್ರಿಯೆ ನೀಡಿದ ಆಜಾದ್ ಹತ್ರಾಸ್ ಗೆ ಕೇವಲ 20 ಕಿ. ಮೀ ದೂರದಲ್ಲಿ ಪೊಲೀಸರು ನನ್ನನ್ನು ಮೊದಲ ಬಾರಿಗೆ ತಡೆದಿದ್ದರು. ಆ ಬಳಿಕ ಕಾಲ್ನಡಿಗೆಯಲ್ಲೇ ಬೆಂಬಲಿಗರೊಂದಿಗೆ 5 ಕಿ. ಮೀ ಕ್ರಮಿಸಲಾಗಿತ್ತು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಗಿತ್ತು. ನಂತರದಲ್ಲಿ ಪೊಲೀಸರು ಮತ್ತೊಮ್ಮೆ ಅಡ್ಡಪಡಿಸಿ ಕೊನೆಗೂ ಭೇಟಿಗೆ ಕೇವಲ 10 ಜನರಿಗೆ ಅವಕಾಶ ನೀಡಿದರು ಎಂದಿದ್ದಾರೆ.
ಕುಟುಂಬಸ್ಥರನ್ನು ಭೇಟಿಯಾದ ವೇಳೆ ಅವರು ತಮಗೆ ವೈ ಪ್ಲಸ್ ಭದ್ರತೆ ಒದಗಿಸುವಂತೆ ಕೇಳಿಕೊಂಡಿದ್ದರು. ಕಂಗಾನಾ ರಣಾವತ್ ಗೆ ವೈ ಪ್ಲಸ್ ಭದ್ರತೆ ನೀಡುವುದಾದರೇ ಸಂತ್ರಸ್ಥೆಯ ಕುಟುಂಬಕ್ಕೆ ಏಕೆ ಸಾಧ್ಯವಾಗುವುದಿಲ್ಲ. ಈ ಕೂಡಲೇ ಸರ್ಕಾರ ಭದ್ರತೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ: ಮೋದಿಯನ್ನು ಕೊಲ್ಲಲು ಯಾಕೆ ಬಾಂಬ್ ತಯಾರಿಸಿಲ್ಲ: ವಿವಾದ ಸೃಷ್ಟಿಸಿದ ಮಾಜಿ ಶಾಸಕ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.