ಮತ್ತೂಂದು ಬ್ಯಾಂಕಿಂಗ್‌ ವಂಚನೆ ಪ್ರಕರಣ ಬಯಲು


Team Udayavani, Mar 22, 2018, 6:00 AM IST

27.jpg

ಚೆನ್ನೈ: ಸ್ವರ್ಣೋದ್ಯಮಿಗಳಾಗಿರುವ ನೀರವ್‌ ಮೋದಿ, ಮೆಹೂಲ್‌ ಚೋಸ್ಕಿ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13 ಸಾವಿರ ಕೋಟಿ ರೂ. ವಂಚಿಸಿದ ಬಳಿಕ ಮತ್ತೂಂದು ಚಿನ್ನಾಭರಣ ಮಳಿಗೆ ಎಸ್‌ಬಿಐ ಸೇರಿದಂತೆ 14 ಬ್ಯಾಂಕ್‌ಗಳಿಗೆ 1 ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಚೆನ್ನೈನ ಟಿ.ನಗರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಾನಿಷ್ಕ ಗೋಲ್ಡ್‌ ಪ್ರೈ.ಲಿಮಿಟೆಡ್‌ ಎಂಬ ಸಂಸ್ಥೆ ಮಾಡಿರುವ ಮೋಸದ ವಿರುದ್ಧ ತನಿಖೆ ನಡೆಸುವಂತೆ ಸಿಬಿಐಗೆ ಎಸ್‌ಬಿಐ ಜನವರಿಯಲ್ಲಿ ಮನವಿ ಮಾಡಿಕೊಂಡಿತ್ತು. ಭೂಪೇಶ್‌ ಕುಮಾರ್‌ ಜೈನ್‌ ಮತ್ತು ಅವರ ಪತ್ನಿ ನೀತಾ ಜೈನ್‌ ಅವರೇ ಈ ಕಂಪೆನಿಯ ಪ್ರವರ್ತಕರಾಗಿದ್ದಾರೆ. ಸದ್ಯ ಅವರು ಮಾರಿಷಿಯಸ್‌ನಲ್ಲಿದ್ದಾರೆ ಎಂದು ಹೇಳಲಾಗಿದೆ.

ಕೇಸು ದಾಖಲಿಸಿದ ಸಿಬಿಐ: ಹದಿನಾಲ್ಕು ಬ್ಯಾಂಕ್‌ಗಳಿಗೆ ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಕಾನಿಷ್ಕಾ ಗೋಲ್ಡ್‌ ಪ್ರೈ.ಲಿ ವಿರುದ್ಧ ಸಿಬಿಐ ಬುಧವಾರ ಕೇಸು ದಾಖಲಿಸಿಕೊಂಡಿದೆ. ಜತೆಗೆ ಚೆನ್ನೈ ಸೇರಿದಂತೆ ಹಲವೆಡೆ ಶೋಧ ಕಾರ್ಯಾಚರಣೆ ನಡೆಸಿದೆ. 

ಯಾವುದಿದು ಕಂಪೆನಿ?”ಕ್ರಿಜ್‌’ ಎಂಬ ಬ್ರಾಂಡ್‌ ನೇಮ್‌ನಲ್ಲಿ ಚಿನ್ನದ ಆಭರಣಗಳನ್ನು ಕಂಪೆನಿ ಉತ್ಪಾದಿಸುತ್ತಿತ್ತು. ಅದನ್ನು ವಿತರಕರ ಮೂಲಕ 2014ರ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡಿತ್ತು. 2015ರಲ್ಲಿ ತನ್ನ ವಹಿವಾಟಿನ ಮಾದರಿಯನ್ನು ಬದಲಿಸಿತ್ತು.

2017ರ ನ.11ರಂದು ಈ ಸಂಸ್ಥೆ ಹಣಕಾಸು ವಂಚನೆ ನಡೆಸಿದೆ ಎಂದು ಎಸ್‌ಬಿಐ ಮೊದಲ ಬಾರಿಗೆ ಆರ್‌ಬಿಐಗೆ ವರದಿ ಸಲ್ಲಿಸಿತ್ತು. ಅದರ ಜತೆಗೆ ಇತರ ಬ್ಯಾಂಕ್‌ಗಳೂ ವರದಿ ನೀಡಿವೆ. 

ಚಿನ್ನಾಭರಣ ಸಂಸ್ಥೆಯನ್ನು 2017ರ ಮಾರ್ಚ್‌ ನಲ್ಲಿ ಎಸ್‌ಬಿಐ ದಿವಾಳಿ ಎಂದು ಘೋಷಿಸಿತ್ತು. 2017ರ ಏಪ್ರಿಲ್‌ ವೇಳೆ ಕಾನಿಷ್ಕ ಸಂಸ್ಥೆ ಸಾಲ ಪಡೆದುಕೊಂಡ ಎಲ್ಲಾ 14 ಬ್ಯಾಂಕ್‌ಗಳಿಗೆ ಸಾಲ ಮರು ಪಾವತಿ ಮಾಡುವುದನ್ನು ನಿಲ್ಲಿಸಿತ್ತು. ಸಂಸ್ಥೆಯ ಪ್ರವರ್ತಕರನ್ನು ಸಂಪರ್ಕಿಸಲು ವಿಫ‌ಲಗೊಂಡ ಎಲ್ಲಾ ಬ್ಯಾಂಕ್‌ಗಳು ಅದೇ ವರ್ಷದ ಮೇ 25ರಂದು  ಟಿ.ನಗರದಲ್ಲಿರುವ ಚಿನ್ನಾಭರಣ ಸಂಸ್ಥೆಯ ಪ್ರಧಾನ ಕಚೇರಿಗೆ ಭೇಟಿ ನೀಡಿದವು. ಅಲ್ಲಿ ಯಾವುದೇ ವಾಣಿಜ್ಯಿಕ ಚಟುವಟಿಕೆ ಕಂಡುಬರಲಿಲ್ಲ. 

ಅದೇ ದಿನ ಎಸ್‌ಬಿಐ ಸೇರಿದಂತೆ ಎಲ್ಲಾ ಬ್ಯಾಂಕ್‌ಗಳಿಗೆ ಪತ್ರ ಬರೆದಿದ್ದ ಭೂಪೇಶ್‌ ಕುಮಾರ್‌ ಜೈನ್‌ ನಕಲಿ ದಾಖಲೆಗಳನ್ನು ನೀಡಿ ವಂಚಿಸಿದ್ದನ್ನು ಒಪ್ಪಿಕೊಂಡಿದ್ದರು. ಹೀಗಾಗಿ ಕಂಪೆನಿಯ ಇತರ ಶಾಖೆಗಳಿಗೆ ಭೇಟಿ ನೀಡಿದಾಗ ಅವುಗಳಿಗೆ ಬೀಗ ಹಾಕಲಾಗಿತ್ತು. ಈ ಬಗ್ಗೆ ಮಾತನಾಡಿರುವ ಮದ್ರಾಸ್‌ ಜ್ಯುವೆಲ್ಲರ್ಸ್‌ ಆ್ಯಂಡ್‌ ಡೈಮಂಡ್‌ ಮರ್ಚೆಂಟ್ಸ್‌ ಎಸೋಸಿಯೇಷನ್‌ನ ಪ್ರತಿನಿಧಿ 2017ರ ಮೇನಲ್ಲೇ ಕಾನಿಷ್ಕ ಕಂಪೆನಿ ನಷ್ಟ ಹೊಂದಿದ್ದರಿಂದ ವಹಿವಾಟು ಸ್ಥಗಿತಗೊಳಿಸಿತ್ತು ಎಂದು ಹೇಳಿದ್ದಾರೆ. 

2007ರಿಂದಲೇ ಸಾಲ ಕೊಟ್ಟ ಬ್ಯಾಂಕ್‌ಗಳು
ಕಾನಿಷ್ಕಾ ಕಂಪೆನಿಗೆ 2007ರಿಂದಲೇ ಸಾಲ ನೀಡಿರುವ ಬಗ್ಗೆ ದಾಖಲೆ ಗಳಿಂದ ದೃಢಪಟ್ಟಿದೆ. ವರ್ಷಗಳು ಕಳೆದಂತೆ ಬ್ಯಾಂಕ್‌ಗಳೂ ಕೂಡ ಅದಕ್ಕೆ ನೀಡಲಾಗುತ್ತಿದ್ದ ಸಾಲದ ಮಿತಿಯನ್ನೂ ಹೆಚ್ಚಿಸಿದ್ದವು. ಸಾಲದ ಮತ್ತು ದುಡಿಯುವ ಬಂಡವಾಳದ ಮಿತಿಯನ್ನೂ ಹೆಚ್ಚಿಸಲಾಗಿತ್ತು. 2012ರಲ್ಲಿ ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಗುಂಪು ಮೆಟಲ್‌ ಗೋಲ್ಡ್‌ ಲೋನ್‌ ಮೂಲಕ ನಿರ್ದಿಷ್ಟ ಬ್ಯಾಂಕ್‌ಗಳಿಂದ ಅಥವಾ ಮುಕ್ತ ಮಾರುಕಟ್ಟೆಯಿಂದ ಚಿನ್ನ ಖರೀದಿಗೂ ಅವಕಾಶ ಮಾಡಿಕೊಟ್ಟಿದ್ದವು.

ಟಾಪ್ ನ್ಯೂಸ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.