NEET-UG ಹಗರಣ ; ಮಾಸ್ಟರ್ಮೈಂಡ್, ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳ ಬಂಧನ
Team Udayavani, Jul 20, 2024, 8:32 PM IST
ಹೊಸದಿಲ್ಲಿ: NEET-UG ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬ ಎನ್ಐಟಿ-ಜೆಮ್ಶೆಡ್ಪುರದ ಬಿ ಟೆಕ್ ಪದವೀಧರ ಹಾಗೂ ಸಾಲ್ವರ್ಸ್(solvers) ಆಗಿದ್ದ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಶನಿವಾರ ಬಂಧಿಸಿರುವುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿಸಲಾಗಿರುವ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ರಾಜಸ್ಥಾನದ ಭರತ್ಪುರದ ವೈದ್ಯಕೀಯ ಶಾಲೆಯವರಾಗಿದ್ದಾರೆ. ಈ ಬಂಧನಗಳೊಂದಿಗೆ, ಆಪಾದಿತ ಅಕ್ರಮಗಳಿಗೆ ಸಂಬಂಧಿಸಿದ ಆರು ಪ್ರಕರಣಗಳಲ್ಲಿ ಸಂಸ್ಥೆಯು ಇದುವರೆಗೆ ಬಂಧಿಸಿರುವ ಒಟ್ಟು ಸಂಖ್ಯೆ ಈಗ 21 ಕ್ಕೆ ತಲುಪಿದೆ.
ನೀಟ್ ಯುಜಿ ಪರೀಕ್ಷೆ ದಿನಾಂಕ ಮೇ 5 ರಂದು ಹಜಾರಿಬಾಗ್ನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಕುಮಾರ್ ಮಂಗಳಂ ಬಿಷ್ಣೋಯ್ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿ ದೀಪೇಂದರ್ ಶರ್ಮ ಹಾಜರಾಗಿದ್ದರು ಮತ್ತು ಎಂಜಿನಿಯರ್ ಪಂಕಜ್ ಕುಮಾರ್ ಕದ್ದ ಪೇಪರ್ಗೆ “ಸಾಲ್ವರ್ಸ್” ಆಗಿ ಕಾರ್ಯನಿರ್ವಹಿಸಿದ್ದರು ಎಂದು ಆರೋಪಿಸಲಾಗಿದೆ.
ಶಶಿಕಾಂತ್ ಪಾಸ್ವಾನ್ ಅಲಿಯಾಸ್ ಶಶಿ ಅಲಿಯಾಸ್ ಪಸು, ಜೆಮ್ಶೆಡ್ಪುರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ B.Tech (Electrical) ಪಾಸ್ಔಟ್ ಆಗಿದ್ದು, ಈ ಹಿಂದೆ ಬಂಧಿತರಾಗಿದ್ದ ಕುಮಾರ್ ಮತ್ತು ರಾಕಿ ಜತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.