ಬೆಂಗಳೂರು-ಮುಂಬೈ ನಡುವೆ ಗ್ರೀನ್ ಎಕ್ಸ್ಪ್ರೆಸ್ ಹೆದ್ದಾರಿ ಅಭಿವೃದ್ಧಿ
Team Udayavani, Oct 16, 2022, 9:00 PM IST
ನವದೆಹಲಿ: ಬೆಂಗಳೂರು-ಮುಂಬೈ ನಡುವೆ ಹಸಿರು ಎಕ್ಸ್ಪ್ರೆಸ್ ಹೆದ್ದಾರಿ ನಿರ್ಮಿಸಲು ಯೋಜಿಸಲಾಗಿದ್ದು, ಇದರಿಂದ ಎರಡು ನಗರಗಳ ನಡುವಿನ ಪ್ರಯಾಣದ ಅಂತರ ಐದು ಗಂಟೆಗಳವರೆಗೆ ತಗ್ಗಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಜತೆಗೆ ಹೆಚ್ಚು ಸಂಚಾರ ದಟ್ಟಣೆ ಇರುವ ರಾಜ್ಯ ಹೆದ್ದಾರಿಗಳನ್ನು 25 ವರ್ಷಗಳ ಕಾಲ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಯೋಜಿಸಿದ್ದು, ಅದನ್ನು 4ರಿಂದ 6 ಪಥಗಳ ಹೆದ್ದಾರಿಯಾಗಿ ವಿಸ್ತರಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ರಾಜ್ಯ ಹೆದ್ದಾರಿಗಳ ಹೂಡಿಕೆಯನ್ನು ಬಡ್ಡಿ ಸಮೇತ ಮತ್ತು ಭೂಸ್ವಾಧೀನ ವೆಚ್ಚದೊಂದಿಗೆ 12ರಿಂದ 13 ವರ್ಷಗಳವರೆಗೆ ಟೋಲ್ ಸಂಗ್ರಹಿಸುವ ಮೂಲಕ ಅದನ್ನು ಮರಳಿ ಪಡೆಯಲಾಗುವುದು ಎಂದು ನಿತಿನ್ ಗಡ್ಕರಿ ತಿಳಿಸಿದರು.
ಈ ರೀತಿ ದೇಶದಲ್ಲಿ ಒಟ್ಟು 25 ಹಸಿರು ಎಕ್ಸ್ಪ್ರೆಸ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಖಾಸಗಿ ಹೂಡಿಕೆದಾರರಿಂದ ಹೂಡಿಕೆ ನಿರೀಕ್ಷಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.