PMAY-G: ಗ್ರಾಮೀಣ ಆವಾಸ್ ಯೋಜನೆಯ ಮಾನದಂಡ ಸಡಿಲಿಕೆ… ಯಾರೆಲ್ಲ ಅರ್ಹರು ಇಲ್ಲಿದೆ ಮಾಹಿತಿ
Team Udayavani, Sep 12, 2024, 8:35 AM IST
ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (ಪಿಎಂಎವೈ-ಜಿ)ದ ಲಾಭ ಪಡೆಯುವ ನಾಗರಿಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ, ದ್ವಿಚಕ್ರ ವಾಹನ, ಮೋಟಾರುಚಾಲಿತ ಮೀನುಗಾರಿಕಾ ದೋಣಿ, ರೆಫ್ರಿಜರೇಟರ್, ಲ್ಯಾಂಡ್ಲೈನ್ ಫೋನ್ ಹೊಂದಿರುವ ಕುಟುಂಬಗಳು ಮತ್ತು ತಿಂಗಳಿಗೆ 15 ಸಾವಿರ ರೂ. ಆದಾಯ ಗಳಿಸುವ ಕುಟುಂಬಗಳು ಕೂಡ ಈ ಯೋಜನೆಯ ಫಲಾನುಭವಿಗಳಾಗಬಹುದು.
ಹೌದು, ಗ್ರಾಮೀಣ ಗೃಹ ಯೋಜನೆಯ ಫಲಾನುಭವಿಗಳ ಆಯ್ಕೆ ವೇಳೆ ಬಳಸಲಾಗುತ್ತಿದ್ದ “ಸ್ವಯಂಚಾಲಿತ ಹೊರಗುಳಿಯುವಿಕೆ’ ಮಾನದಂಡವನ್ನು ಈಗ ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆ. ಈವರೆಗೆ ಈ ಮಾನದಂಡ ಇದ್ದ ಕಾರಣ, ಹಲವರಿಗೆ ಆವಾಸ್ ಯೋಜನೆಯ ಅನುಕೂಲತೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಇನ್ನು ಈ ಷರತ್ತುಗಳು ಸಡಿಲಿಕೆಯಾದ ಕಾರಣ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಹೆಚ್ಚಿನವರು ಇದರ ಲಾಭ ಪಡೆಯಬಹುದು.
ಮಂಗಳವಾರ ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ಘೋಷಣೆ ಮಾಡಿದ್ದಾರೆ. ಜತೆಗೆ, ಯೋಜನೆಯಡಿ ಜಮೀನು ಸಂಬಂಧಿತ ಮಾನದಂಡವನ್ನೂ ಸಡಿಲಿಸಿರುವುದಾಗಿ ಅವರು ತಿಳಿಸಿದ್ದಾರೆ. 2028-29ರೊಳಗೆ ದೇಶಾದ್ಯಂತ ಹೆಚ್ಚುವರಿಯಾಗಿ 2 ಕೋಟಿ ಮನೆ ನಿರ್ಮಾಣದ ಗುರಿ ಸಾಧಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಯಾರು ಅನರ್ಹರು?
ಮೋಟಾರುಚಾಲಿತ ತ್ರಿಚಕ್ರ/4 ಚಕ್ರದ ವಾಹನಗಳನ್ನು ಹೊಂದಿರುವವರು, ಯಾಂತ್ರೀಕೃತ ಮೂರು/4 ಚಕ್ರದ ಕೃಷಿ ಉಪಕರಣ, 50 ಸಾವಿರ ರೂ. ಅಥವಾ ಅದಕ್ಕಿಂತ ಹೆಚ್ಚಿನ ಸಾಲ ಮಿತಿ ಹೊಂದಿರುವ ಕಿಸಾನ್ ಕ್ರೆಡಿಟ್ ಕಾರ್ಡ್ ಇರುವವರು, ಸರ್ಕಾರಿ ಉದ್ಯೋಗಿಯಿರುವಂಥ ಕುಟುಂಬ, ಸರ್ಕಾರದಲ್ಲಿ ನೋಂದಣಿಯಾಗಿರುವ ಕೃಷಿಯೇತರ ಉದ್ಯಮ ಹೊಂದಿರುವ ಕುಟುಂಬ, ಆದಾಯ ತೆರಿಗೆ, ವೃತ್ತಿಪರ ತೆರಿಗೆ ಪಾವತಿಸುತ್ತಿರುವ ಸದಸ್ಯರಿರುವ ಕುಟುಂಬ, 2.5 ಎಕರೆ ಅಥವಾ ಹೆಚ್ಚು ನೀರಾವರಿ ಭೂಮಿ ಹೊಂದಿರುವ ಕುಟುಂಬ.
ಇದನ್ನೂ ಓದಿ: Discovered: ಅಮೆರಿಕ ಕಂಡುಹಿಡಿದದ್ದು ಕೊಲಂಬಸ್ ಅಲ್ಲ, ಭಾರತೀಯ ನಾವಿಕ: ಮಧ್ಯಪ್ರದೇಶ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.