ಶರದ್ ಪವಾರ್ ದೆಹಲಿ ನಿವಾಸಕ್ಕಿದ್ದ ಭದ್ರತೆ ವಾಪಸ್; ಕೇಂದ್ರದ ನಡೆಗೆ ಎನ್.ಸಿ.ಪಿ., ಸೇನೆ ಟೀಕೆ


Team Udayavani, Jan 24, 2020, 9:03 PM IST

Sharad-Pawar-03-730

ನವದೆಹಲಿ: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ.) ಮುಖಂಡ ಮತ್ತು ಮಾಜೀ ಕೇಂದ್ರ ಸಚಿವ ಶರದ್ ಪವಾರ್ ಅವರ ದೆಹಲಿ ನಿವಾಸಕ್ಕಿದ್ದ ಸರಕಾರಿ ಭದ್ರತೆಯನ್ನು ಕೇಂದ್ರ ಸರಕಾರ ಇಂದು ವಾಪಾಸು ಪಡೆದುಕೊಂಡಿದೆ. ಕೇಂದ್ರದ ಈ ನಡೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮೂಲಗಳ ಪ್ರಕಾರ ಶರದ್ ಪವಾರ್ ಅವರ ಮನೆಯಲ್ಲಿ ರಕ್ಷಣೆಗೆಂದು ನಿಯೋಜನೆಗೊಂಡಿದ್ದ ದೆಹಲಿ ಪೊಲೀಸ್ ಸಿಬ್ಬಂದಿಗಳನ್ನು ಜನವರಿ 20ರಂದು ಇದ್ದಕ್ಕಿದ್ದಂತೆಯೇ ವಾಪಾಸು ಕರೆಯಿಸಿಕೊಳ್ಳಲಾಗಿದೆ. ಆದಾಗ್ಯೂ ಈ ಹಿರಿಯ ನಾಯಕನಿಗೆ ಮಹಾರಾಷ್ಟ್ರದಲ್ಲಿ ಹಾಗೂ ಅವರ ಪ್ರಯಾಣ ಸಂದರ್ಭದಲ್ಲಿ ಸಾಕಷ್ಟು ಭದ್ರತೆಯನ್ನು ಒದಗಿಸಗುತ್ತಿದೆ.

6 ಜನಪಥದಲ್ಲಿರುವ ಶರದ್ ಪವಾರ್ ಅವರ ನಿವಾಸಕ್ಕಿದ್ದ ಸರಕಾರೀ ಭದ್ರತೆಯನ್ನು ವಾಪಾಸು ಪಡೆದುಕೊಂಡಿರುವ ನರೇಂದ್ರ ಮೋದಿ ಸರಕಾರದ ನಡೆಯನ್ನು ಎನ್.ಸಿ.ಪಿ. ಮತ್ತು ಮಹಾರಾಷ್ಟ್ರದಲ್ಲಿ ಇದರ ಮಿತ್ರಪಕ್ಷವಾಗಿರುವ ಶಿವಸೇನೆ ಸಹಿತ ಹಲವು ರಾಜಕೀಯ ಪಕ್ಷಗಳ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಆದರೆ ಪವಾರ್ ಕುಟುಂಬದ ಯಾರೊಬ್ಬರೂ ಸಹ ಈ ಬೆಳವಣಿಗೆಗೆ ಸಂಬಂಧಿಸಿದಂತೆ ಇದುವರೆಗೂ ಪ್ರತಿಕ್ರಿಯಿಸಿಲ್ಲ.

ಹಿರಿಯ ರಾಜಕಾರಣಿಯಾಗಿರುವ ಶರದ್ ಪವಾರ್ ಅವರಿಗೆ ಬೆದರಿಕೆ ಇರುವ ವಿಚಾರ ತಿಳಿದಿದ್ದರೂ ಮತ್ತು ಈ ಹಿಂದೊಮ್ಮೆ ಅವರು ದಾಳಿಗೊಳಗಾಗಿದ್ದರೂ ಅವರ ನಿವಾಸಕ್ಕೆ ನೀಡಲಾಗಿರುವ ಭದ್ರತೆಯನ್ನು ವಾಪಾಸು ಪಡೆದುಕೊಂಡಿರುವ ಕ್ರಮ ದ್ವೇಷದ ರಾಜಕಾರಣ ಪ್ರವೃತ್ತಿಯನ್ನು ತೋರಿಸುತ್ತದೆ ಎಂದು ಹಿರಿಯ ಶಿವಸೇನಾ ನಾಯಕ ಮತ್ತು ಆ ಪಕ್ಷದ ಸಂಸದ ಸಂಜಯ್ ರಾವತ್ ಅವರು ಹೇಳಿದ್ದಾರೆ.

ಕೇಂದ್ರ ಸರಕಾರವು ಈ ಹಿಂದೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರಿಗಿದ್ದ ಭದ್ರತೆಯನ್ನು ಕಡಿಮೆಗೊಳಿಸಿತ್ತು ಇದೀಗ ಇನ್ನೋರ್ವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರ ನಿವಾಸಕ್ಕಿದ್ದ ಭದ್ರತೆಯನ್ನೇ ವಾಪಾಸು ಪಡೆದುಕೊಂಡಿದೆ, ಇದೊಂದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ ಎಂದು ರಾವತ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ತಮ್ಮ ಪಕ್ಷಕ್ಕೆ ಅಧಿಕಾರ ಕೈತಪ್ಪಿರುವುದು ಕೇಂದ್ರ ಬಿಜೆಪಿ ನಾಯಕರನ್ನು ಕಂಗೆಡಿಸಿದೆ. ಹೀಗಾಗಿ ಬಿಜೆಪಿ ಇದೀಗ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಅವರು ಕೇಂದ್ರದ ಈ ನಡೆಯನ್ನು ಟೀಕಿಸಿದ್ದಾರೆ.

ಶರದ್ ಪವಾರ್ ಅವರೇನೂ ಸಹ್ಯಾದ್ರಿ ಪರ್ವತವಲ್ಲ! ಅವರನ್ನೂ ಬೆದರಿಕೆ ವಿಚಾರಗಳು ಕಾಡುವುದಿಲ್ಲವೇ? ಎಂದು ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅಹ್ವಾದ್ ಅವರು ಕೇಂದ್ರದ ಈ ಕ್ರಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.