Jharkhand: ಎನ್ ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಚಂಪೈ ಸೊರೆನ್
Team Udayavani, Aug 19, 2024, 8:56 AM IST
ಹೊಸದಿಲ್ಲಿ: ಜಾರ್ಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಎನ್ ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ. ಇದರಿಂದ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.
ಜಿತನ್ ರಾಮ್ ಮಾಂಜಿ ಅವರ ಪಕ್ಷವಾದ ಹಿಂದೂಸ್ಥಾನಿ ಅವಾಮ್ ಮಾಂಜಿ ಕೂಡಾ ಬಿಜೆಪಿ ನೇತೃತ್ವದ ಎನ್ ಡಿಎದ ಭಾಗವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ ಪೋಸ್ಟ್ ಮಾಡಿರುವ ಮಾಂಝಿ, ಚಂಪೈ ಸೊರೆನ್ ಹುಲಿಯಾಗಿದ್ದರು ಮತ್ತು ಹುಲಿಯಾಗಿಯೇ ಉಳಿಯುತ್ತಾರೆ ಎಂದಿದ್ದಾರೆ.
चंपाई दा आप टाईगर थें,टाईगर हैं और टाईगर ही रहेंगें।
NDA परिवार में आपका स्वागत है।
जोहार टाईगर…@ChampaiSoren— Jitan Ram Manjhi (@jitanrmanjhi) August 18, 2024
ಬಿಹಾರದಿಂದ ಬೇರ್ಪಟ್ಟು ಪ್ರತ್ಯೇಕ ಜಾರ್ಖಂಡ್ ರಾಜ್ಯವನ್ನು ರಚಿಸುವಲ್ಲಿ ಚಂಪೈ ಸೊರೆನ್ ಅವರ ಪಾತ್ರಕ್ಕಾಗಿ ಅವರನ್ನು ಟೈಗರ್ ಎಂದು ಕರೆಯಲಾಗುತ್ತದೆ.
ಈ ವರ್ಷದ ಜನವರಿಯಲ್ಲಿ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಹೇಮಂತ್ ಸೊರೆನ್ ಅವರನ್ನು ಬಂಧಿಸಿದ ಕಾರಣಕ್ಕೆ ರಾಜೀನಾಮೆ ನೀಡಿದ ನಂತರ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ಆದರೆ, ಹೇಮಂತ್ ಸೊರೆನ್ಗೆ ಜಾಮೀನು ದೊರೆತಾಗ, ಚಂಪೈ ಸೊರೆನ್ ಅವರನ್ನು ಹುದ್ದೆಯಿಂದ ಕೆಳಗಿಳಿಸಿ ಈ ವರ್ಷದ ಜುಲೈನಲ್ಲಿ ಮತ್ತೊಮ್ಮೆ ರಾಜ್ಯದ ಆಡಳಿತವನ್ನು ವಹಿಸಿಕೊಂಡರು.
ಸೊರೆನ್ ಸುದೀರ್ಘ ಟ್ವೀಟ್
“ನಮ್ಮ ಬೆವರು, ರಕ್ತ ಸುರಿದು ಕಟ್ಟಿದ ಪಕ್ಷದಲ್ಲಿ ನನ್ನ ಅಸ್ತಿತ್ವವೇ ಇಲ್ಲವೆನ್ನುವಂತೆ ನನ್ನನ್ನು ಅವಮಾನಿಸಲಾ ಗಿತ್ತು. 4 ದಶಕದ ರಾಜಕೀಯ ಜೀವನದಲ್ಲಿ ಅದೇ ಮೊದಲ ಬಾರಿಗೆ ನಾನು ಕುಗ್ಗಿಹೋದೆ. ನನ್ನ ಜನರೇ ನನ್ನನ್ನು ನೋಯಿಸಿದರು” ಎಂದು ರವಿವಾರ ರಾತ್ರಿ ಚಂಪೈ ಸೊರೆನ್ ಟ್ವೀಟ್ ಮಾಡಿದ್ದಾರೆ.
“ಅಧಿಕಾರದ ಆಸೆ ಇರದ ನನ್ನನ್ನು ವಿಪಕ್ಷ ಒಕ್ಕೂಟದ ನಾಯಕರು ಸಿಎಂ ಆಗುವಂತೆ ಕೇಳಿದರು. ಅದರಂತೆ ಜ.31ರಂದು ಸಿಎಂ ಆದೆ. ಬಳಿಕ ಜು.3ಕ್ಕೂ 2 ದಿನದ ಹಿಂದೆ ಇದ್ದಕ್ಕಿದ್ದಂತೆ ಸಿಎಂ ಆಗಿದ್ದ ನನ್ನ ಕಾರ್ಯಕ್ರಮಗಳನ್ನು ಪಕ್ಷ ರದ್ದುಗೊಳಿಸಿತ್ತು. ಪ್ರಜಾಪ್ರಭುತ್ವದಲ್ಲಿ ಸಿಎಂಗೆ ಇದಕ್ಕಿಂತ ದೊಡ್ಡ ಅವಮಾನ ಏನಿದೆ? ಬಳಿಕ ನನ್ನ ರಾಜೀನಾಮೆ ಕೇಳಿದರು. ಅಧಿಕಾರದ ಆಸೆ ಇಲ್ಲದ್ದಕ್ಕೆ ರಾಜೀನಾಮೆಯನ್ನೂ ಕೊಟ್ಟೆ. ಆದರೆ ನನ್ನ ಆತ್ಮ ಗೌರವವನ್ನು ಗಾಳಿಯಲ್ಲಿ ತೂರಿದ್ದರ ಬಗ್ಗೆ ಯಾರೂ ಚಿಂತಿಸಲಿಲ್ಲ. ಇದರಿಂದ ನಾನು ಕಣ್ಣೀರಿಟ್ಟೆ, ಅವಮಾನಕ್ಕೊಳಗಾದೆ. ಆ ಬಳಿಕ ನನ್ನ ಮುಂದೆ 3 ಹಾದಿ ಇದೆ ಎಂದು ನಿರ್ಧರಿಸಿದೆ. ಒಂದು ರಾಜಕೀಯ ನಿವೃತ್ತಿ ಅಥವಾ ಪಕ್ಷ ಸ್ಥಾಪನೆ, ಇಲ್ಲವೋ ಸಮಾನ ಮನಸ್ಕರೊಂದಿಗೆ ಹೆಜ್ಜೆ ಎಂದುಕೊಂಡಿದ್ದೆ. ಆ ಆಯ್ಕೆಗಳು ಆಗಲೂ ನನ್ನ ಮುಂದೆ ಇದ್ದವು, ಈಗಲೂ ಇವೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.