Jharkhand; ವಿಶ್ವಾಸಮತ ಗೆದ್ದ ಚಂಪೈ ಸೊರೇನ್; 47 ಶಾಸಕರ ಬೆಂಬಲ
Team Udayavani, Feb 5, 2024, 2:32 PM IST
ರಾಂಚಿ: ಝಾರ್ಖಂಡ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಚಂಪೈ ಸೊರೇನ್ ಅವರು ಇಂದು ನಡೆದ ವಿಶ್ವಾಸಮತದಲ್ಲಿ ವಿಜಯ ಸಾಧಿಸಿದ್ದಾರೆ. ಈ ಮೂಲಕ ಜೆಎಂಎಂ ಸರ್ಕಾರವು ದೊಡ್ಡ ಗೆಲುವು ಪಡೆದಿದೆ.
ವಿಶ್ವಾಸಮತದ ವೇಳೆ ಒಟ್ಟು 47 ಸಮ್ಮಿಶ್ರ ಶಾಸಕರು ಚಂಪೈ ಸೊರೇನ್ ಸರ್ಕಾರವನ್ನು ಬೆಂಬಲಿಸಿದರು. 29 ಮತಗಳು ಸೊರೇನ್ ವಿರುದ್ಧ ದಾಖಲಾಯಿತು.
ಚಂಪೈ ಸೊರೇನ್ ಅವರ ವಿಜಯವನ್ನು ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಘೋಷಿಸಿದರು. ಇದನ್ನು ಜಾರ್ಖಂಡ್ ವಿಧಾನಸಭೆಯಲ್ಲಿ ಭಾರೀ ಹರ್ಷೋದ್ಗಾರಗಳೊಂದಿಗೆ ಸ್ವಾಗತಿಸಲಾಯಿತು.
81 ಸದಸ್ಯರ ಜಾರ್ಖಂಡ್ ವಿಧಾನಸಭೆಯಲ್ಲಿ ಬಹುಮತದ ಅಂಕ 41 ಆಗಿದ್ದು, ಇಂದಿನ ಸದನಕ್ಕೂ ಮುನ್ನ ಚಂಪೈ ಸೊರೇನ್ ಅವರು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)ಗೆ 47 ಶಾಸಕರ ಬೆಂಬಲವಿದ್ದು, ಅದು 50ಕ್ಕೆ ಹೆಚ್ಚಾಗಬಹುದು ಎಂದು ಹೇಳಿದ್ದರು.
ಭ್ರಷ್ಟಾಚಾರ ಪ್ರಕರಣದಲ್ಲಿ ಜೆಎಂಎಂ ನಾಯಕ, ಮಾಜಿ ಸಿಎಂ ಹೇಮಂತ್ ಸೊರೇನ್ ಬಂಧನವಾದ ಬಳಿಕ ಚಂಪೈ ಅವರು ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದರು. ರಾಜ್ಯಪಾಲರು ಅವರಿಗೆ ವಿಶ್ವಾಸಮತ ಸಾಬೀತುಪಡಿಸಲು 10 ದಿನಗಳ ಕಾಲಾವಕಾಶ ನೀಡಿದ್ದರು. ಆದರೆ ಹೆಚ್ಚು ದಿನ ಕಳೆದರೆ ಶಾಸಕರ ಖರೀದಿ ನಡೆಯಬಹುದು ಎಂಬ ಭೀತಿಯಿಂದ ಚಂಪೈ ಅವರು ಫೆ. 5ರಂದೇ ವಿಶ್ವಾಸಮತ ಸಾಬೀತುಪಡಿಸುವುದಾಗಿ ಘೋಷಿಸಿದ್ದರು. ರೆಸಾರ್ಟ್ನಲ್ಲಿದ್ದ ಜೆಎಂಎಂ ಪಕ್ಷದ ಶಾಸಕರು ಸೋಮವಾರ ವಿಶ್ವಾಸ ಮತ ಹಿನ್ನೆಲೆಯಲ್ಲಿ ರವಿವಾರವೇ ರಾಂಚಿಗೆ ವಾಪಸಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.