Andhra Pradesh ಬಂದ್ ವಿಫಲ; 21 ಶಾಸಕರಿಗೆ ಪೊಲೀಸರಿಂದ ಗೃಹ ಬಂಧನ
Team Udayavani, Sep 11, 2023, 9:07 PM IST
ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮದ 370 ಕೋಟಿ ರೂ. ಹಗರಣದಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ಟಿಡಿಪಿ ಕರೆ ನೀಡಿದ್ದ ಆಂಧ್ರಪ್ರದೇಶ ಬಂದ್ಗೆ ನಿರೀಕ್ಷಿತ ಸ್ಪಂದನೆ ವ್ಯಕ್ತವಾಗಿಲ್ಲ.
ಆಂಧ್ರಪ್ರದೇಶದ ವಿವಿಧ ಭಾಗಗಳಲ್ಲಿ ನಾಯ್ಡು ಬಂಧನ ಖಂಡಿಸಿ ಟಿಡಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆದರೆ, ಬಂದ್ಗೆ ಸಾರ್ವಜನಿಕರು ಸ್ಪಂದಿಸಲಿಲ್ಲ. ಈ ಬಗ್ಗೆ ಮಾತನಾಡಿದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಶಂಖ ಬಾತ್ರಾ ರಾಜ್ಯಾದ್ಯಂತ ಪರಿಸ್ಥಿತಿ ಶಾಂತಿಯುತವಾಗಿತ್ತು ಎಂದಿದ್ದಾರೆ.
ಈ ನಡುವೆ ಟಿಡಿಪಿ ಶಾಸಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ವಿಧಾನಸಭೆಯಲ್ಲಿರುವ ಎಲ್ಲ 21 ಶಾಸಕರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸಲು ಸೂಕ್ತ ನಾಯಕತ್ವದ ಕೊರತೆಯಾಗಿದ್ದೂ ಬಂದ್ ವಿಫಲಗೊಳ್ಳಲು ಕಾರಣವಾಯಿತು.
ಜೈಲಿಗೆ ಶಿಫ್ಟ್:
14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಾಯ್ದು ಅವರನ್ನು ರಾಜಾ ಮಹೇಂದ್ರವರಮ್ ನಗರದಲ್ಲಿರುವ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಕೋರ್ಟ್ ಆದೇಶದ ಅನ್ವಯ ಜೈಲಲ್ಲಿ ಮನೆಯ ಊಟ, ಧ್ಯಾನ ನಡೆಸಲು ಅವಕಾಶ, ಪ್ರತ್ಯೇಕ ಸೆಲ್ ನೀಡಲು ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್!
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.