Punjab ಮಾಜಿ ಸಿಎಂ Charanjit Channi ಬಿಜೆಪಿಗೆ? ಕಾಂಗ್ರೆಸ್‌ ಗೆ ಕಾದಿದ್ಯಾ ಆತಂಕ?


Team Udayavani, Apr 9, 2023, 7:27 AM IST

Punjab ಮಾಜಿ ಸಿಎಂ Charanjit Channi ಬಿಜೆಪಿಗೆ? ಕಾಂಗ್ರೆಸ್‌ ಗೆ ಕಾದಿದ್ಯಾ ಆತಂಕ?

ಚಂಡೀಗಢ: ಮಾಜಿ ರಕ್ಷಣಾ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಎ.ಟಿ.ಆ್ಯಂಟನಿ ಪುತ್ರ ಅನಿಲ್‌ ಆ್ಯಂಟನಿ, ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಕಿರಣ್‌ ರೆಡ್ಡಿ ಅವರು ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ಗೆ ಪಂಜಾಬ್‌ನಿಂದ ಒಂದು ಆಘಾತಕಾರಿ ಸುದ್ದಿ ಎದುರಾಗಿದೆ. ಮಾಜಿ ಮುಖ್ಯಮಂತ್ರಿ, ದಲಿತ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಕೇಸರಿ ಪಾಳಯ ಸೇರುವ ಊಹೆಗಳು ಹರಿದಾಡತೊಡಗಿವೆ.

ಕಾಂಗ್ರೆಸ್‌ನಿಂದ ಚನ್ನಿ ಅವರನ್ನು ಸಂತೈಸುವ ಪ್ರಯತ್ನದ ಹೊರತಾಗಿಯೂ ಅವರು ಪಂಜಾಬ್‌ನಲ್ಲಿ ಕೆಲವು ಬಿಜೆಪಿ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2024ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಇರುವಾಗಲೇ ಚನ್ನಿ ಬಿಜೆಪಿ ಸೇರ್ಪಡೆ ವಿಚಾರ ಭಾರೀ ಕುತೂಹಲ ಮೂಡಿಸಿದೆ!

ಸಿಧು ಆಗಮನವೇ ಕಾರಣ?: ಪಂಜಾಬ್‌ ಕಾಂಗ್ರೆಸ್‌ ಸಮಿತಿ ಮಾಜಿ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಅವರು ಜಾಮೀನಿನ ಮೇಲೆ ಪಟಿಯಾಲ ಜೈಲಿನಿಂದ ಹೊರಗೆ ಬಂದಿದ್ದಾರೆ. ಅವರೊಂದಿಗೆ ಚನ್ನಿಗೆ ಮೊದಲಿಂದಲೂ ಭಿನ್ನಮತ ಇದೆ. ಇದೂ ಮೇಲಿನ ಬೆಳವಣಿಗೆ ಕಾರಣವಿರಬಹುದೆನ್ನಲಾಗಿದೆ. ಈಗಾಗಲೇ ಪಂಜಾಬ್‌ ಕಾಂಗ್ರೆಸ್‌ನಲ್ಲಿ ಹಲವು ಬಣಗಳು ಏರ್ಪಟ್ಟಿವೆ.

ಕೆಲವು ಶಕ್ತಿಕೇಂದ್ರಗಳು ನಿರ್ಮಾಣವಾಗಿವೆ. 2022ರ ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತ ನಂತರ ಚನ್ನಿ ಅವರು ರಾಜಕೀಯ ಜೀವನದಿಂದ ತುಸು ಹಿಂದೆ ಸರಿದಿದ್ದರು.

ಭ್ರಷ್ಟಾಚಾರ ಪ್ರಕರಣದಲ್ಲಿ ಚನ್ನಿ ಅವರ ಸೋದರಳಿಯ ಬಂಧಿತರಾದಾಗ ಅವರ ಮೇಲೆ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಪಂಜಾಬಿ ಗಾಯಕ ಸಿಧು ಮೂಸೇವಾಲ ಹತ್ಯೆಯಾದ ನಂತರ ಅವರ ಮನೆಗೆ ಚನ್ನಿ ಅನಿರೀಕ್ಷಿತ ಭೇಟಿ ನೀಡುವ ಮೂಲಕ ರಾಜಕೀಯಕ್ಕೆ ಮರುಪ್ರವೇಶ ಪಡೆದರು. ರಾಜಸ್ಥಾನದಲ್ಲಿ ಭಾರತ್‌ ಜೋಡೋ ಯಾತ್ರೆ ವೇಳೆ ರಾಹುಲ್‌ ಗಾಂಧಿ ಅವರೊಂದಿಗೆ ಚನ್ನಿ ಕಾಣಿಸಿಕೊಂಡಿದ್ದರು. ಅಲ್ಲದೇ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ ವಾದ್ರಾ ಅವರನ್ನು ಭೇಟಿಯಾಗಿದ್ದರು. ಈ ಮೂಲಕ ರಾಜಕೀಯದಲ್ಲಿ ಇನ್ನು ಚಾಲ್ತಿಯಲ್ಲಿರುವ ಸಂದೇಶ ರವಾನಿಸಿದ್ದರು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

He is Karunanidhi’s grandson, not apologizing for Sanatana controversy: Udayanidhi

Santana row: ಸನಾತನ ವಿವಾದಕ್ಕೆ ತಾನು ಕರುಣಾನಿಧಿ ಮೊಮ್ಮಗ, ಕ್ಷಮೆ ಕೇಳಲ್ಲ: ಉದಯನಿಧಿ

Police have discovered a new branch of Lashkar in Kashmir

Jammu Kashmir: ಲಷ್ಕರ್‌ನ ಹೊಸ ಶಾಖೆ ಪತ್ತೆ ಹಚ್ಚಿದ ಪೊಲೀಸರು

Fake bomb threat call for 50 flights in one day!

Threat Call; ಒಂದೇ ದಿನ 50 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ!

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Fake bomb threats to CRPF schools across the country

Threats: ದೇಶಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.