![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-415x229.jpg)
ChatGPT: ಮುಂದಿನ ವರ್ಷ ಚಾಟ್ಜಿಪಿಟಿ ದಿವಾಳಿ?
ಮೈಕ್ರೋಸಾಫ್ಟ್ ಹೂಡಿಕೆ ಮಾಡಿದ್ದರೂ ಒಲಿಯದ ಅದೃಷ್ಟ
Team Udayavani, Aug 14, 2023, 5:07 AM IST
![chat gpt](https://www.udayavani.com/wp-content/uploads/2023/08/chat-gpt-620x372.jpg)
ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ಚಾಟ್ಜಿಪಿಟಿ ಶೀಘ್ರವೇ ದಿವಾಳಿಯತ್ತ ಸಾಗುವ ಆತಂಕ ಎದುರಾಗಿದೆ. ಅದರ ಮಾತೃಸಂಸ್ಥೆ ಓಪನ್ ಎಐ ಈಗಲೇ ವಿತ್ತೀಯ ಬಿಕ್ಕಟ್ಟಿಗೆ ಗುರಿಯಾಗಿದೆ. 2024ರ ವೇಳೆಗೆ ಅದು ದಿವಾಳಿ ಆಗಬಹುದು ಎಂದು “ಅನಾಲಿಟಿಕ್ಸ್ ಇಂಡಿಯಾ’ ನಿಯತಕಾಲಿಕ ವರದಿ ಮಾಡಿದೆ.
ಓಪನ್ ಎಐ ಹಲವಾರು ಎಐ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿ, ನಿರ್ವಹಿಸುತ್ತಿದ್ದು, ಚಾಟ್ಜಿಪಿಟಿ ಒಂದಕ್ಕೇ ದಿನಕ್ಕೆ 5.80 ಕೋಟಿ ರೂ.ಗಳನ್ನು ವ್ಯಯಿಸುತ್ತಿದೆ. ಆದರೆ ಹಲವಾರು ಸಂಸ್ಥೆಗಳು ಕೂಡ ಪ್ರತಿಸ್ಪರ್ಧಿಗಳನ್ನು ಸೃಷ್ಟಿಸಿರುವ ಕಾರಣ ಚಾಟ್ಜಿಪಿಟಿ ಪ್ರಾಮುಖ್ಯ ಕುಸಿಯುತ್ತಿದೆ. ಜೂನ್ನಲ್ಲಿ 1.7 ಶತಕೋಟಿ ಬಳಕೆದಾರರನ್ನು ಹೊಂದಿದ್ದ ಚಾಟ್ಜಿಪಿಟಿ ಜುಲೈ ವೇಳೆಗೆ 1.5 ಶತಕೋಟಿ ಬಳಕೆದಾರರನ್ನು ಹೊಂದುವ ಮೂಲಕ ಶೇ. 12ರಷ್ಟು ಬಳಕೆದಾರರನ್ನು ಕಳೆದುಕೊಂಡಿದೆ. ಈಗ ಚಾಟ್ಜಿಪಿಟಿ 3.5 ಮತ್ತು ಜಿಪಿಟಿ4 ಎಂಬ ಸುಧಾರಿತ ಆವೃತ್ತಿಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. 2022ರ ನವೆಂಬರ್ನಲ್ಲಿ ಚಾಟ್ಜಿಪಿಟಿಯನ್ನು ಜಗತ್ತಿಗೆ ಪರಿಚಯಿಸಲಾಗಿತ್ತು. ಆರಂಭದಲ್ಲಿ ಚಾಟ್ಜಿಪಿಟಿಯನ್ನು ಬಳಸು ಹಿಂದೇಟು ಹಾಕಿದ್ದ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ಅದರ ಬಳಕೆಗೆ ಪ್ರೋತ್ಸಾಹ ನೀಡಲಾರಂಭಿಸಿವೆ.
ಇದರ ಜತೆಗೆ ಮೈಕ್ರೋಸಾಫ್ಟ್ ಸಹಭಾಗಿತ್ವದಲ್ಲಿ ಚಾಟ್ಜಿಪಿಟಿಯ ವಾಣಿಜ್ಯ ಬಳಕೆಗೆ ಪ್ರೋತ್ಸಾಹ ನೀಡಲಾಗಿತ್ತು. ಅದರಿಂದಲೂ ನಿರೀಕ್ಷಿತ ಯಶಸ್ಸು ಸಿಕ್ಕಿರಲಿಲ್ಲ. ಮೈಕ್ರೋಸಾಫ್ಟ್ ಓಪನ್ ಐಎನಲ್ಲಿ 10 ಬಿಲಿಯನ್ ಡಾಲರ್ ಹೂಡಿಕೆ ಮಾಡಿದ್ದು, ಅದುವೇ ಜೀವಾಳ ಎನ್ನುವಂತಾಗಿದೆ.
ಟಾಪ್ ನ್ಯೂಸ್
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ](https://www.udayavani.com/wp-content/uploads/2024/07/Lucknoe-150x93.jpg)
Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.