Chhattisgarh; ಮತ್ತೆ 12 ನಕ್ಸಲೀಯರ ಹತ್ಯೆ: ಈ ವರ್ಷ ಒಟ್ಟು 103 ಬೇಟೆ
Team Udayavani, May 11, 2024, 1:19 AM IST
ಬಿಜಾಪುರ: ಛತ್ತೀಸ್ಗಢದಲ್ಲಿ ನಕ್ಸಲೀ ಯ ರನ್ನು ಮಟ್ಟ ಹಾಕುವ ಕಾರ್ಯಾ ಚರಣೆ ಮುಂದುವರಿದಿದೆ. ನಕ್ಸಲ್ ಪೀಡಿತ ಜಿಲ್ಲೆಯ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಕಾರ್ಯಾಚರಣೆ ಯಲ್ಲಿ 12 ಮಂದಿ ನಕ್ಸಲೀಯರನ್ನು ಕೊಲ್ಲಲಾಗಿದೆ. ಹೀಗಾಗಿ ಪ್ರಸಕ್ತ ವರ್ಷ ರಾಜ್ಯದಲ್ಲಿ ಅಸುನೀಗಿದ ಒಟ್ಟು ನಕ್ಸಲರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.
ನಕ್ಸಲ್ ಕಾರ್ಯಾಚರಣೆ ಬಗ್ಗೆ ಸಿಎಂ ವಿಷ್ಣು ದೇವ್ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಯಶಸ್ವಿಯಾ ಗಿದ್ದಕ್ಕೆ ಭದ್ರತಾ ಸಿಬಂದಿಗೆ ಅಭಿನಂದನೆ ಸಲ್ಲಿಸಿದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಕ್ಸಲ್ ಪಿಡುಗನ್ನು ಕೊನೆಗಾಣಿಸಲು ಶ್ರಮಿಸು ತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಜಾಪುರ ಜಿಲ್ಲೆಯ ಕಾಡಿನಲ್ಲಿ ಭದ್ರತಾ ಸಿಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿ ದ್ದಾರೆ. ಇದರೊಂದಿಗೆ ಈ ವರ್ಷ ಕೊಲ್ಲ ಲ್ಪಟ್ಟ ನಕ್ಸಲರ ಸಂಖ್ಯೆ 100ನ್ನು ದಾಟಿದ್ದು, ಇದು 2019ರ ಅನಂತರದ ದಾಖಲೆ ಯಾಗಿದೆ. 2018ರಲ್ಲಿ 112, 2016ರಲ್ಲಿ 134 ನಕ್ಸಲರು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.