Chhattisgarh: ಬಿಜೆಪಿ ಗೆಲುವಿಗಾಗಿ ತನ್ನ ಬೆರಳನ್ನೇ ಕಾಳಿ ದೇವಿಗೆ ಅರ್ಪಿಸಿದ ಬೆಂಬಲಿಗ…
Team Udayavani, Jun 8, 2024, 2:05 PM IST
ಛತ್ತೀಸ್ಗಡ: ಜಗತ್ತಿನಲ್ಲಿ ಯಾವ ಯಾವ ಜನರು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ, ಅದರಂತೆ ಛತ್ತೀಸ್ಗಡದಲ್ಲೊಬ್ಬ ವ್ಯಕ್ತಿ ತನ್ನ ನೆಚ್ಚಿನ ಪಕ್ಷವಾದ ಬಿಜೆಪಿ ಅಧಿಕಾರಕ್ಕೆ ಬಂದ ಖುಷಿಯಲ್ಲಿ ತನ್ನ ಒಂದು ಬೆರಳನ್ನು ಕಾಳಿ ದೇವಿಗೆ ಅರ್ಪಿಸಿದ್ದಾನೆ.
ಛತ್ತೀಸ್ಗಢದ ಬಲರಾಮ್ಪುರದ ದುರ್ಗೇಶ್ ಪಾಂಡೆ ಎಂಬಾತನೇ ಬೆರಳನ್ನು ಕತ್ತರಿಸಿಕೊಂಡ ಬಿಜೆಪಿ ಬೆಂಬಲಿಗ, ಮೊನ್ನೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಗಳಿಸಬೇಕೆಂದು ಅಂದುಕೊಂಡಿದ್ದ ಆದರೆ ಕೊನೆ ಗಳಿಗೆಯಲ್ಲಿ ಸಂಖ್ಯಾ ಬಲ ಕಡಿಮೆಯಾಗಿಟ್ಟಿರುವುದನ್ನು ಕಂಡ ಬೆಂಬಲಿಗ ಕಾಳಿ ದೇವಿ ಬಳಿ ಪ್ರಾರ್ಥನೆ ಸಲ್ಲಿಸಿದ್ದಾನೆ ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ತನ್ನ ಒಂದು ಬೆರಳನ್ನು ದೇವಿಗೆ ಅರ್ಪಿಸುವುದಾಗಿ ಹೇಳಿಕೊಂಡಿದ್ದಾನೆ. ಅದರಂತೆ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದುಕೊಂಡಿತು ಇದರಿಂದ ಸಂತಸಗೊಂಡ ಬೆಂಬಲಿಗ ತನ್ನ ಪ್ರಾರ್ಥನೆಯಂತೆ ಕಾಳಿ ದೇವಿಗೆ ಬೆರಳನ್ನು ಅರ್ಪಿಸಿದ್ದಾನೆ.
ಇತ್ತ ಬೆರಳನ್ನು ಕೊಯ್ದ ಜಾಗದಲ್ಲಿ ರಕ್ತ ಸುರಿಯುತ್ತಿದ್ದುರಿಂದ ಅಸ್ವಸ್ಥಗೊಂಡ ದುರ್ಗೇಶ್ ನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ, ಸದ್ಯ ಅಪಾಯದಿಂದ ಪಾರಾದ ದುರ್ಗೇಶ್ ಚುನಾವಣಾ ಫಲಿತಾಂಶದ ವೇಳೆ ಬಿಜೆಪಿ ಸಂಖ್ಯಾಬಲ ಕಡಿಮೆಯಾಗುತ್ತಿರುವುದನ್ನು ಕಂಡು ಕಾಳಿ ದೇವಿಯನ್ನು ನೆನೆದು ಬಿಜೆಪಿ ಅಧಿಕಾರಕ್ಕೆ ಬಂದರೆ ನನ್ನ ಒಂದು ಬೆರಳನ್ನು ಅರ್ಪಿಸುವುದಾಗಿ ಪ್ರಾರ್ಥಿಸಿದೆ ಹಾಗಾಗಿ ಕೊನೆ ಕ್ಷಣದಲ್ಲಿ ಬಿಜೆಪಿ ಬಹುಮತ ಪಡುಯುತ್ತಿದ್ದಂತೆ ದೇವಸ್ಥಾನಕ್ಕೆ ಬಂದು ಬೆರಳನ್ನು ಅರ್ಪಿಸಿದೆ ಎಂದು ಹೇಳಿಕೊಂಡಿದ್ದಾನೆ.
ಇದನ್ನೂ ಓದಿ: Panaji: ಕಟ್ಟಡದ ಸ್ಲ್ಯಾಬ್ ಕುಸಿದು 2 ಕಾರು, 3 ದ್ವಿಚಕ್ರ ವಾಹನ ಜಖಂ… ತಪ್ಪಿದ ಅನಾಹುತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.