Chhattisgarh; ಬಯಲಿಗೆ ಬಂದಿತು ನಕ್ಸಲರ ಕಳ್ಳನೋಟು ಜಾಲ!

ಸುಕ್ಮಾ ಜಿಲ್ಲೆಯಲ್ಲಿ ಅಕ್ರಮ... ಮುದ್ರಣ ವಸ್ತುಗಳು ವಶಕ್ಕೆ

Team Udayavani, Jun 24, 2024, 6:00 AM IST

naksal (2)

ರಾಂಚಿ: ಭಾರತದ ಆರ್ಥಿಕತೆ ಯನ್ನು ಅಸ್ಥಿರಗೊಳಿಸಲೆಂದು ಛತ್ತೀಸ್‌ಗಢದಲ್ಲಿ ನಕ್ಸಲರು ಮುದ್ರಿಸುತ್ತಿದ್ದ ನಕಲಿ ನೋಟುಗಳ ಜಾಲವನ್ನು ಭದ್ರತಪಡೆಗಳು ಭೇದಿಸಿವೆ. 3 ದಶಕದಿಂದ ನಕ್ಸಲ್‌ ಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊಂದಿರುವ ಛತ್ತೀಸ್‌ಗಢದಲ್ಲಿ ಇದೇ ಮೊದಲ ಬಾರಿಗೆ ನಕ್ಸಲರು ಮುದ್ರಿಸಿದ ಭಾರೀ ಪ್ರಮಾಣದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಅವುಗಳ ಮುದ್ರಣಕ್ಕೆ ಬಳಸಲಾಗುತ್ತಿದ್ದ ಸಲಕರಣೆ ಗಳನ್ನೂ ವಶಕ್ಕೆ ಪಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸುಕ್ಮಾ ಜಿಲ್ಲೆಯ ಕೊರಾಜಗುಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಕಲಿ ನೋಟು ಮುದ್ರಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯನ್ನು ಆಧರಿಸಿ ಶನಿವಾರ ರಾತ್ರಿ ಭದ್ರತ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ನಡೆಸಿವೆ.

ಭದ್ರತ ಪಡೆಗಳ ಉಪಸ್ಥಿತಿಯ ಬಗ್ಗೆ ತಿಳಿಯುತ್ತಿದ್ದಂತೆಯೇ ನಕ್ಸಲರು ತಮ್ಮೆಲ್ಲ ವಸ್ತುಗಳನ್ನೂ ಬಿಟ್ಟು ಪರಾರಿಯಾಗಿದ್ದಾರೆ. ಅರಣ್ಯದ ಒಳಭಾಗದಲ್ಲಿ ಗುಡ್ಡವೊಂದರ ಶೋಧದ ಸಂದರ್ಭದಲ್ಲಿ ಈ ನಕಲಿ ನೋಟುಗಳ ಮುದ್ರಣ ಜಾಲ ಪತ್ತೆಯಾಗಿದೆ.

ಸ್ಥಳದಲ್ಲಿ 50 ರೂ., 100, 200 ಹಾಗೂ 500 ರೂ. ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ. ಅಲ್ಲದೆ ನೋಟುಗಳ ಮುದ್ರಣಕ್ಕೆ ಬಳಸುತ್ತಿದ್ದ ಕಲರ್‌ ಪ್ರಿಂಟಿಂಗ್‌ ಯಂತ್ರಗಳು, 200 ಬಾಟಲ್‌ ಶಾಯಿ, 4 ಕಾಟ್ರಿìಡ್ಜ್, ಪ್ರಿಂಟರ್‌, 9 ಪ್ರಿಂಟರ್‌ ರೋಲರ್‌ಗಳು, 6 ವೈರ್‌ಲೆಸ್‌ ಸೆಟ್‌ಗಳು, ಅವುಗಳ ಚಾರ್ಜರ್‌ ಮತ್ತು ಬ್ಯಾಟರಿಗಳೂ ಲಭಿಸಿವೆ. ಇದರ ಜತೆಗೆ 2 ಮಜಲ್‌ ಲೋಡಿಂಗ್‌ ಗನ್‌,ಭಾರೀ ಸ್ಫೋಟಕಗಳು, ನಕ್ಸಲ್‌ ಸಮವಸ್ತ್ರ ಹಾಗೂ ಇನ್ನಿತರ ವಸ್ತುಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಕಿರಣ್‌ ಹು ಚವಾಣ್‌ ಹೇಳಿದ್ದಾರೆ.

ಬುಡಕಟ್ಟು ಜನರಿಗೆ ವಂಚನೆ

ನಕ್ಸಲರು ತಾವು ಮುದ್ರಿಸಿರುವ ನಕಲಿ ನೋಟುಗಳನ್ನು ಚಲಾಯಿಸಲು ವಾರದ ಮಾರುಕಟ್ಟೆಗಳನ್ನೇ ತಾಣವಾಗಿಸಿಕೊಂಡಿದ್ದರು. ಪ್ರತೀ ವಾರ ನಡೆಯುವ ಸಂತೆ, ಮಾರುಕಟ್ಟೆಗಳಲ್ಲಿ ಈ ನೋಟುಗಳನ್ನು ಬಳಸಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. ಈ ಮೂಲಕ ಅಮಾಯಕ ಬುಡಕಟ್ಟು ಜನರಿಗೆ ವಂಚನೆ ಮಾಡುತ್ತಿದ್ದರು. ದೇಶದ ಆರ್ಥಿಕತೆಯನ್ನು ಅಸ್ಥಿರಗೊಳಿಸುವುದು ಕೂಡ ಈ ಕೃತ್ಯದ ಹಿಂದಿನ ಪ್ರಮುಖ ಉದ್ದೇಶ ಎನ್ನಲಾಗಿದೆ.

ನಕಲಿ ನೋಟುಗಳ ಮೊರೆ ಹೋದದ್ದೇಕೆ?
ಛತ್ತೀಸ್‌ಗಢದಲ್ಲಿ ಇತ್ತೀಚೆಗೆ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಯನ್ನು ಹೆಚ್ಚಿಸಲಾಗಿದ್ದು, ನಕ್ಸಲರಿಗೆ ಆರ್ಥಿಕ ನೆರವು ನೀಡುತ್ತಿದ್ದ ಮೂಲಗಳನ್ನೇ ಭದ್ರತ ಪಡೆಗಳು ಚಿವುಟಿಹಾಕಿವೆ. ಇದರಿಂದ ನಕ್ಸಲರು ಸಂಕಷ್ಟಕ್ಕೆ ಸಿಲುಕಿದ್ದು, ನಕಲಿ ನೋಟುಗಳ ಮುದ್ರಣಕ್ಕೆ ಮುಂದಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿಯುತ್ತಿದೆ ಎಂದು ಎಸ್‌ಪಿ ಕಿರಣ್‌ ಹು ಚವಾಣ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

SEBI issues show cause notice to Hindenburg

SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್‌ಬರ್ಗ್‌ಗೆ ಸೆಬಿ ಶೋಕಾಸ್‌ ನೋಟಿಸ್‌

6-

Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.