![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 27, 2021, 6:33 PM IST
ನವದೆಹಲಿ : ನಷ್ಟದಲ್ಲಿರುವ ಏರ್ ಇಂಡಿಯಾ ಮೇಲೆತ್ತಲು ನಾವೇ ಸಂಪೂರ್ಣ ಹೂಡಿಕೆ ಮಾಡುವುದು ಅಥವಾ ಈ ಕಂಪನಿಯ ಬಾಗಿಲು ಮುಚ್ಚುವ ಆಯ್ಕೇಗಳು ಮಾತ್ರ ನಮ್ಮ ಮುಂದೆ ಇವೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ಶನಿವಾರ ಮಾಧ್ಯಮಗಳ ಎದುರು ಈ ವಿಷಯ ಹಂಚಿಕೊಂಡಿರುವ ಅವರು, ಏರ್ ಇಂಡಿಯಾದಲ್ಲಿ ಶೇ. 100 ಹೂಡಿಕೆ ಮಾಡಲು ನಾವು ನಿರ್ಧರಿಸಿದ್ದೇವೆ. ಏರ್ ಇಂಡಿಯಾದ ಒಟ್ಟು ಸಾಲ 60,000 ಕೋಟಿ ರೂ. ಇದೆ ಎಂದು ಹೇಳಿದರು.
ಏರ್ ಇಂಡಿಯಾ ಹೂಡಿಕೆಗಾಗಿ ಸರ್ಕಾರವು ಸೂಕ್ತ ಸಮಯ ಎದುರು ನೋಡುತ್ತಿದೆ ಮತ್ತು ಮುಂದಿನ ದಿನಗಳಲ್ಲಿ ಹರಾಜು ಪ್ರಕ್ರಿಯೆಗೆ ಖಾಸಗಿ ಕಂಪನಿಗಳನ್ನು ಆಹ್ವಾನಿಸಲಾಗುವುದು. “ಕಳೆದ ಸಭೆಯಲ್ಲಿ ಹರಾಜುದಾರರ ಶಾರ್ಟ್ಲಿಸ್ಟ್ ಮಾಡಲಾಗಿದೆ. (ಏರ್ ಇಂಡಿಯಾ ಹೂಡಿಕೆಗಾಗಿ) 64 ದಿನಗಳಲ್ಲಿ ಹರಾಜುದಾರರು ಬರಬೇಕು ಎಂದು ತಿಳಿಸಲಾಗಿದೆ ಎಂದು ಅವರು ಹೇಳಿದರು.
ನಷ್ಟದಲ್ಲಿದ್ದ ಏರ್ ಇಂಡಿಯಾಗೆ ಪುನಶ್ಚೇತನ ನೀಡಲು 2018ರಲ್ಲಿ 76% ಪಾಲುದಾರಿಕೆಗೆ ಸರ್ಕಾರ ಮುಂದಾಗಿತ್ತು. ಆದರೆ, ಈ ವೇಳೆ ಯಾವೊಬ್ಬ ಬಿಡ್ಡರ್ ಕೂಡ ಮುಂದೆ ಬರಲಿಲ್ಲ. ಸದ್ಯ ಕೇಂದ್ರ ಸರ್ಕಾರವು ಏರ್ ಇಂಡಿಯಾದ ಶೇ 100 ರಷ್ಟು ಷೇರುಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.