J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ
ಸೇನಾ ವಾಹನದ ಮೇಲೆ ಹೊಂಚುದಾಳಿ...
Team Udayavani, Oct 24, 2024, 9:42 PM IST
ಶ್ರೀನಗರ: ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಗುರುವಾರ(ಅ24) ಸಂಜೆ ಗುಲ್ಮಾರ್ಗ್ನ ಬೋಟ್ ಪತ್ರಿ ಬಳಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ನಂತರ ಓರ್ವ ನಾಗರಿಕ ಸಾವನ್ನಪ್ಪಿದ್ದು, ಐವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನವು 18 ರಾಷ್ಟ್ರೀಯ ರೈಫಲ್ಸ್ (RR) ಗೆ ಸೇರಿದ್ದಾಗಿದೆ.
ಉಗ್ರರು ದಾಳಿ ನಡೆಸಿದಾಗ ವಾಹನವು ಗಡಿ ನಿಯಂತ್ರಣ ರೇಖೆಯಿಂದ (LOC) 5 ಕಿಲೋಮೀಟರ್ ದೂರದಲ್ಲಿರುವ ಬೋಟ್ಪತ್ರಿಯಿಂದ ತೆರಳುತ್ತಿತ್ತು. ಈ ದಾಳಿಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ನಾಗರಿಕ ಸಾವನ್ನಪ್ಪಿದ್ದಾರೆ.
ಉಗ್ರರು ಪಾಕಿಸ್ಥಾನದ ಬಾರ್ಡರ್ ಆಕ್ಷನ್ ಟೀಮ್ (BAT) ನ ಒಂದು ಭಾಗವೆಂದು ನಂಬಲಾಗಿದೆ, ಈ ಹಿಂದೆ ವಿವಿಧ ಗಡಿಯಾಚೆಗಿನ ದಾಳಿಗಳನ್ನು ನಡೆಸಿದ ದಾಖಲೆ ಇದೆ. ದೂರದ ಬೋಟ್ಪತ್ರಿ ಪ್ರದೇಶಕ್ಕೆ ವಾಹನ ತಲುಪಿದಾಗ ಭಯೋತ್ಪಾದಕರು ಸೇನಾ ವಾಹನದ ಮೇಲೆ ಹೊಂಚುದಾಳಿ ನಡೆಸಿದರು. ದಾಳಿಗೆ ಪ್ರತಿಯಾಗಿ ಭದ್ರತಾ ಪಡೆಗಳು ಪ್ರತಿ ಕಾರ್ಯಾಚರಣೆಯನ್ನು ಆರಂಭಿಸಿವೆ.
ಇತ್ತೀಚೆಗೆ ಕಾಶ್ಮೀರದಲ್ಲಿ ಸ್ಥಳೀಯರಲ್ಲದ ಕಾರ್ಮಿಕರ ಮೇಲೆ ದಾಳಿಗಳು ಹೆಚ್ಚಾಗುತ್ತಿದ್ದು, ಗುರುವಾರ ಬೆಳಗ್ಗೆಯಷ್ಟೇ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಉತ್ತರ ಪ್ರದೇಶದ ಕಾರ್ಮಿಕನ ಮೇಲೆ ಉಗ್ರರು ಗುಂಡು ಹಾರಿಸಿ ಗಾಯಗೊಳಿಸಿದ್ದರು.
ಗಂದರ್ಬಾಲ್ ಜಿಲ್ಲೆಯ ನಿರ್ಮಾಣ ಸ್ಥಳದಲ್ಲಿ ಭಾನುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಆರು ಸ್ಥಳೀಯೇತರ ಕಾರ್ಮಿಕರು ಮತ್ತು ಸ್ಥಳೀಯ ವೈದ್ಯರು ಸಾವನ್ನಪ್ಪಿದ್ದರೆ, ಅಕ್ಟೋಬರ್ 18 ರಂದು ಶೋಪಿಯಾನ್ ಜಿಲ್ಲೆಯಲ್ಲಿ ಬಿಹಾರದ ಕಾರ್ಮಿಕನೊಬ್ಬ ಉಗ್ರರ ಗುಂಡಿಗೆ ಬಲಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾನೂನು ಸಮರದಲ್ಲಿ ಪವಾರ್ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್ ಬಣಕ್ಕೆ ಮೇಲುಗೈ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.