
ಆರೋಗ್ಯ ವಿಮೆ ಕ್ಲೇಮ್ ನಿರಾಕರಿಸುವಂತಿಲ್ಲ: ಇನ್ಶೂರೆನ್ಸ್ ಕಂಪನಿಗಳಿಗೆ ಸುಪ್ರೀಂ ನಿರ್ದೇಶನ
ಪೂರ್ವ ಘೋಷಣೆ ಮಾಡಿಲ್ಲ ಎಂಬ ಸಬೂಬಿಗೆ ಕತ್ತರಿ, ಗ್ರಾಹಕರ ಕ್ಲೇಮ್ ಹಕ್ಕು ಎತ್ತಿ ಹಿಡಿದ ಸುಪ್ರೀಂ
Team Udayavani, Dec 29, 2021, 5:10 PM IST

ಹೊಸದಿಲ್ಲಿ : ಒಮ್ಮೆ ಆರೋಗ್ಯ ವಿಮೆ ಪಾಲಿಸಿ ಜಾರಿಯಾದ ನಂತರ ಮೊದಲೇ ಘೋಷಿಸಿರಲಿಲ್ಲ ಎಂಬ ಕಾರಣ ನೀಡಿ ವಿಮೆ ಕ್ಲೇಮ್ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಖಾಸಗಿ ಆರೋಗ್ಯ ವಿಮಾ ಕಂಪನಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
ರಾಷ್ಟ್ರೀಯ ಗ್ರಾಹಕ ಆಯೋಗ ತಮ್ಮ ಮನವಿ ಸ್ವೀಕರಸಲು ನಿರಾಕರಿಸಿದ್ದರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಮನಮೋಹನ್ ನಂದಾ ಎಂಬುವರ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಮಹತ್ವದ ನಿರ್ದೇಶನ ನೀಡಿದೆ.
ಖಾಸಗಿ ಇನ್ಶೂರೆನ್ಸ್ ಕಂಪನಿಗಳು ಪಾಲಿಸಿ ಕ್ಲೇಮ್ ಮಾಡುವಾಗ ವಿಧಿಸುತ್ತಿದ್ದ ಕಟ್ಟಳೆಗಳಿಂದ ಹೈರಾಣಾಗಿದ್ದ ಗ್ರಾಹಕರಿಗೆ ಸುಪ್ರೀಂ ಕೋರ್ಟ್ನ ಈ ನಿರ್ದೇಶನ ನಿಟ್ಟುಸಿರು ಮಾಡುವಂತೆ ಮಾಡಿದೆ. ಪೂರ್ವ ಘೋಷಣೆಯಾಗಿಲ್ಲ, ಎಂಬ ಕಾರಣ ನೀಡಿ ಪಾಲಿಸಿ ಪಡೆದು ಹಣ ಪಾವತಿಸಿದ ಗ್ರಾಹಕರಿಗೆ ಆರೋಗ್ಯ ವಿಮೆ ಕ್ಲೇಮ್ ಮಾಡುವುದಕ್ಕೆ ಅವಕಾಶ ನಿರಾಕರಿಸುವುದಕ್ಕೆ ಸಾಧ್ಯವಿಲ್ಲ. ಇದು ಗ್ರಾಹಕರ ಹಕ್ಕು ಕಸಿದುಕೊಂಡಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಅಭಿಪ್ರಾಯಪಟ್ಟಿದೆ.
ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ತಮ್ಮ ಕ್ಲೇಮ್ ನಿರಾಕರಿಸಿದ ಹಿನ್ನೆಲೆಯಲ್ಲಿ ನಂದಾ ರಾಷ್ಟ್ರೀಯ ಗ್ರಾಹಕ ಆಯೋಗದ ಮೆಟ್ಟಿಲೇರಿದ್ದರು. ಆದರೆ ಅವರ ಅರ್ಜಿ ವಿಚಾರಣೆ ನಡೆಸುವುದಕ್ಕೆ ಆಯೋಗ ನಿರಾಕರಿಸಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು.
ಸಾಗರೋತ್ತರ ಮೆಡಿಕ್ಲೇಮ್ ಹಾಗೂ ರಜಾ ಪಾಲಿಸಿ ಪಡೆದಿದ್ದ ನಂದಾ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿದ್ದರು. ಆದರೆ ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಲ್ಲಿ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಯಿತು. ಆಸ್ಪತ್ರೆಗೆ ದಾಖಲಿಸಿದಾಗ ಹೃದಯ ಸಂಬಂಧಿ ಕಾಯಿಲೆ ಇರುವುದು ಸ್ಪಷ್ಟವಾಯಿತು. ಆಂಜಿಪ್ಲಾಸ್ಟಿ ಜತೆಗೆ, ಸ್ಟಂಟ್ ಅಳವಡಿಸಲಾಗಿತ್ತು. ಇನ್ಶೂರೆನ್ಸ್ ಪಾಲಿಸಿದಾರರಾಗಿದ್ದ ನಂದಾ ಕ್ಲೇಮ್ಗೆ ಅರ್ಜಿ ಸಲ್ಲಿಸಿದರು. ಆದರೆ ಇನ್ಶೂರೆನ್ಸ್ ಸೇವೆ ಪಡೆಯುವಾಗ ನೀವು ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಹೇಳಿಲ್ಲ. ಸಕ್ಕರೆ ಕಾಯಿಲೆ ಇರುವ ವಿಚಾರ ಮುಚ್ಚಿಟ್ಟಿದ್ದೀರಿ ಎಂದು ಸಂಬಂಧಪಟ್ಟ ಇನ್ಶೂರೆನ್ಸ್ ಕಂಪನಿ ಆಕ್ಷೇಪ ಸಲ್ಲಿಸಿತ್ತು.
ಸಂಸ್ಥೆಯ ಈ ನಿಲುವನ್ನು ಒಪ್ಪದ ಸುಪ್ರೀಂ ಕೋರ್ಟ್ ಅನಾರೋಗ್ಯದ ಬಗ್ಗೆ ಮುಂಚಿತವಾಗಿ ಸಂಪೂರ್ಣ ಮಾಹಿತಿ ನೀಡಿಲ್ಲ ಎಂದು ವಾದಿಸುವುದು ಸರಿಯಲ್ಲ. ಪೂರ್ವ ಘೋಷಣೆ ಮಾಡಿಲ್ಲ ಎಂಬ ಮಾತ್ರಕ್ಕೆ ಕ್ಲೇಮ್ ನಿರಾಕರಿಸುವುದು ಕಾಯಿದೆಗೆ ಬದ್ಧವಲ್ಲ. ಆಕಸ್ಮಿಕವಾಗಿ ಸಂಭವಿಸಬಹುದಾದ ಆರೋಗ್ಯ ಸಮಸ್ಯೆಗೆ ವೈದಕೀಯ ನೆರವು ಪಡೆಯುವುದಕ್ಕಾಗಿಯೇ ಆರೋಗ್ಯ ವಿಮೆ ಸೌಲಭ್ಯ ಪಡೆದುಕೊಳ್ಳುವುದು ಎಂಬುದನ್ನು ನೆನಪಿನಲ್ಲಿಡಬೇಕು. ಇಂಥ ಕಾರಣಗಳ ಮೂಲಕ ಕ್ಲೇಮ್ ನಿರಾಕರಣೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.