ಮಹಾಮಾರಿ ವಿರುದ್ಧ ಅಘೋಷಿತ ಸಮರ ಸಾರಿರುವ ‘ಮೆಡಿಕಲ್ ಯೋ‍ಧ’ರನ್ನು ಮಾರ್ಚ್ 22ರಂದು ನೆನೆಯಿರಿ

ಕೋವಿಡ್ 19 ವಿರುದ್ಧ ಅವಿರತ ಹೋರಾಡುತ್ತಿರುವವರಿಗೆ ಮಾರ್ಚ್ 22ರಂದು ಹೀಗೆ ಅಭಿನಂದಿಸಿ

Team Udayavani, Mar 19, 2020, 9:48 PM IST

ಮಹಾಮಾರಿ ವಿರುದ್ಧ ಅಘೋಷಿತ ಸಮರ ಸಾರಿರುವ ‘ಮೆಡಿಕಲ್ ಯೋ‍ಧ’ರನ್ನು ಮಾರ್ಚ್ 22ರಂದು ನೆನೆಯಿರಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಶ್ವವ್ಯಾಪಿಯಾಗಿರುವ ಕೋವಿಡ್ 19 ವೈರಸ್ ಭಾರತದಲ್ಲಿಯೂ ಕೋಲಾಹಲವನ್ನುಂಟು ಮಾಡುತ್ತಿರುವ ಈ ಸಂದರ್ಭದಲ್ಲಿ ಇದರ ವಿರುದ್ಧ ಹೋರಾಡಲು ದೇಶದ ಜನರ ಸಂಪೂರ್ಣ ಸಹಕಾರವನ್ನು ಕೋರುವ ಮೂಲಕ ಈ ಪಿಡುಗನ್ನು ಎದುರಿಸಲು ‘ಸಂಕಲ್ಪ’ ಮತ್ತು ‘ಸಂಯಮ’ಗಳೆಂಬ ಮೂಲಮಂತ್ರವನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ಅವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ.

ಜನರು ತಮ್ಮನ್ನು ತಾವು ಪ್ರತ್ಯೇಕವಾಗಿರಿಸಿಕೊಳ್ಳುವ ಪ್ರಥಮ ಹಂತವಾಗಿ ಇದೇ ಮಾರ್ಚ್ 22ರ ರವಿವಾರದಂದು ದೇಶಾದ್ಯಂತ ‘ಜನತಾ ಕರ್ಫ್ಯೂ’ ವಿಧಿಸಲಾಗಿದೆ ಎಂದು ಪ್ರಧಾನಿ ಮೋದಿ ಅವರು ಇಂದು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

ಮತ್ತು ಈ ದಿನದಂದು ಸಾಯಂಕಾಲ 5 ಗಂಟೆಗೆ ಸರಿಯಾಗಿ ಜನರು ತಮ್ಮ ಮನೆಗಳಲ್ಲಿಯೇ 5 ನಿಮಿಷ ನಿಂತು ಚಪ್ಪಾಳೆ ತಟ್ಟುವ ಮೂಲಕ, ಶಿಳ್ಳೆಗಳನ್ನು ಹಾಕುವ ಮೂಲಕ ಅಥವಾ ಸಂಗೀತ ಉಪಕರಣಗಳನ್ನು ಬಾರಿಸುವ ಮೂಲಕ ಈ ಕೋವಿಡ್ 19 ವೈರಸ್ ವಿರುದ್ಧ ಹಗಲು ರಾತ್ರಿ ಹೋರಾಡುತ್ತಿರುವ ವೈದ್ಯರು, ಆರೋಗ್ಯ ಪಾಲನಾ ಸಿಬ್ಬಂದಿಗಳು, ಔಷಧಾಲಯ ಸಿಬ್ಬಂದಿಗಳು, ಆರೋಗ್ಯ ಕಾರ್ಯಕರ್ತರು ಹೀಗೆ ಈ ಮಹಾಮಾರಿಯ ವಿರುದ್ಧ ಅಘೋಷಿತ ಸಮರ ಸಾರಿರುವ ವ್ಯಕ್ತಿಗಳಿಗೆ ಗೌರವದ ಅಭಿನಂದನೆ ಸಲ್ಲಿಸಬೇಕು ಎಂದು ಪ್ರಧಾನಿ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ.

ಸರಕಾರಿ ನೌಕರರು, ಆರೋಗ್ಯ ಪಾಲನಾ ಸಿಬ್ಬಂದಿಗಳು ಸೇರಿದಂತೆ ತುರ್ತು ಸೇವೆಗಳಲ್ಲಿ ತೊಡಗಿಸಿಕೊಂಡಿರುವವರನ್ನು ಹೊರತುಪಡಿಸಿ ಉಳಿದವರೆಲ್ಲಾ ಆದಷ್ಟು ತಮ್ಮ ತಮ್ಮ ಮನೆಗಳಲ್ಲಿಯೇ ಇರುವಂತೆ ಪ್ರಧಾನಿಯವರು ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮತ್ತು ದೇಶಾದ್ಯಂತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವುದು ಸರಕಾರದ ಜವಾಬ್ದಾರಿ ಎಂಬ ಭರವಸೆಯನ್ನು ಮೋದಿ ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.

ಈ ಸಂಕಷ್ಟದ ಸಮಯದಲ್ಲಿ ನಮ್ಮ ಜೀವವನ್ನು ಕಾಪಾಡಲು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಕೆಲಸ ಮಾಡುತ್ತಿರುವ ‘ಮೆಡಿಕಲ್ ಯೋಧ’ರು ಇವರೆಲ್ಲಾ…



ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.