Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?
Team Udayavani, Jul 8, 2024, 3:49 PM IST
ಹೊಸದಿಲ್ಲಿ: ಮಹಿಳೆಯರಿಗೆ ಮುಟ್ಟಿನ ರಜೆಯನ್ನು (Menstrual Leave) ಕಡ್ಡಾಯಗೊಳಿಸುವುದರಿಂದ ಅವರನ್ನು ಉದ್ಯೋಗದಿಂದ ದೂರವಿಡಬಹುದು, ಈ ನಿರ್ಧಾರವು ಅವರಿಗೆ ಸಮಸ್ಯೆ ತರಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಅಲ್ಲದೆ ಇದು ನ್ಯಾಯಾಲಯಗಳು ನೋಡಬೇಕಾದ ವಿಷಯವಲ್ಲ ಎಂದು ಒತ್ತಿಹೇಳಿದೆ.
ಮುಟ್ಟಿನ ರಜೆಗಾಗಿ ನೀತಿಗಳನ್ನು ರೂಪಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, “ಅಂತಹ ರಜೆಗಳನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರು ಉದ್ಯೋಗಿಗಳಿಂದ ದೂರವಿರುತ್ತಾರೆ. ನಾವು ಅದನ್ನು ಬಯಸುವುದಿಲ್ಲ. ಮಹಿಳೆಯರನ್ನು ರಕ್ಷಿಸಲು ನಾವು ಪ್ರಯತ್ನಿಸುತ್ತೇವೆ, ಆದರೆ ಇದು ಅವರ ಅನನುಕೂಲತೆಗೆ ಕಾರಣವಾಗಬಹುದು” ಎಂಧರು.
“ಇದು ವಾಸ್ತವವಾಗಿ ಸರ್ಕಾರದ ನೀತಿ ಅಂಶವಾಗಿದೆ. ನ್ಯಾಯಾಲಯಗಳು ಪರಿಶೀಲಿಸಲು ಆಹದು” ಎಂದು ನ್ಯಾಯಾಲಯ ಹೇಳಿದೆ.
ಸಮಸ್ಯೆಯು ಬಹು ನೀತಿ ಅಂಶಗಳಿಗೆ ಸಂಬಂಧಿಸಿದೆ. ನ್ಯಾಯಾಲಯವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಚಂದ್ರಚೂಡ್ ಅವರಿದ್ದ ಪೀಠ ಹೇಳಿದೆ.
“ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿನ ಕಾರ್ಯದರ್ಶಿಯನ್ನು ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರ ಬಳಿಗೆ ಹೋಗಲು ನಾವು ಅರ್ಜಿದಾರರಿಗೆ ಅನುಮತಿ ನೀಡುತ್ತೇವೆ. ಈ ವಿಷಯವನ್ನು ನೀತಿ ಮಟ್ಟದಲ್ಲಿ ಪರಿಶೀಲಿಸಲು ಮತ್ತು ಎಲ್ಲಾ ಸ್ಟೇಕ್ ಹೋಲ್ಡರ್ ಗಳನ್ನು ಸಂಪರ್ಕಿಸಿದ ನಂತರ ನಿರ್ಧಾರ ತೆಗೆದುಕೊಳ್ಳುವಂತೆ ನಾವು ಕಾರ್ಯದರ್ಶಿಯನ್ನು ವಿನಂತಿಸುತ್ತೇವೆ. ಮಾದರಿ ನೀತಿಯನ್ನು ರೂಪಿಸಬಹುದೇ ಎಂದು ನೋಡುತ್ತೇ” ಎಂದು ಪೀಠ ಹೇಳಿದೆ.
ಮಹಿಳಾ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಋತುಚಕ್ರದ ನೋವಿನ ರಜೆಗೆ ನಿಯಮಗಳನ್ನು ರೂಪಿಸಲು ಎಲ್ಲಾ ರಾಜ್ಯಗಳಿಗೆ ನಿರ್ದೇಶನವನ್ನು ಕೋರಿ ಅರ್ಜಿ ಸಲ್ಲಿಸಿದಾಗ ಈ ವರ್ಷದ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಇದೇ ರೀತಿಯ ನಿಲುವನ್ನು ತೆಗೆದುಕೊಂಡಿತ್ತು. ಆಗ ಕೂಡ, ಈ ವಿಷಯವು ನೀತಿ ರೂಪಿಸುವವರಿಗೆ ಬರುತ್ತದೆ ಎಂದು ನ್ಯಾಯಾಲಯ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.