Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ
ಆಮ್ ಆದ್ಮಿ ಪಕ್ಷದೊಳಗಿನ ಆಂತರಿಕ ಕಲಹ ನಿಭಾಯಿಸುವುದು ಕಷ್ಟವಾಗಿದೆ...
Team Udayavani, Sep 15, 2024, 8:04 PM IST
ಹೊಸದಿಲ್ಲಿ: ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು “ಅಪರಾಧದ ತಪ್ಪೊಪ್ಪಿಗೆ” ಎಂದು ಬಿಜೆಪಿ ಭಾನುವಾರ ಪ್ರತಿಕ್ರಿಯಿಸಿದೆ. ಆಮ್ ಆದ್ಮಿ ಪಕ್ಷದೊಳಗಿನ ಆಂತರಿಕ ಕಲಹದಿಂದಾಗಿ ಕೇಜ್ರಿವಾಲ್ ಹುದ್ದೆ ತ್ಯಜಿಸಲು ಮುಂದಾಗಿದ್ದಾರೆಯೇ ಎಂದು ಪ್ರಶ್ನಿಸಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ”ಕೇಜ್ರಿವಾಲ್ ಅವರ ನಡೆ ನಾಟಕ. ಅವರು ಭಾವನಾತ್ಮಕ ಕಾರ್ಡ್ ಆಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಅವರನ್ನು ಕಚೇರಿಗೆ ಪ್ರವೇಶಿಸಿ ಯಾವುದೇ ಫೈಲ್ಗೆ ಸಹಿ ಹಾಕುವುದಕ್ಕೆ ನಿರ್ಬಂಧಿಸಿರುವುದನ್ನು ಉಲ್ಲೇಖಿಸಿದರು.
“ ಕೇಜ್ರಿವಾಲ್ ರಾಜೀನಾಮೆ ಅವರ ಅಪರಾಧದ ತಪ್ಪೊಪ್ಪಿಗೆ. ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಾಗದಂತಹ ಆರೋಪಗಳನ್ನು ಅವರು ಒಪ್ಪಿಕೊಂಡಿದ್ದಾರೆ. ಅವರನ್ನು ಬಂಧಿಸಿದಾಗಲೇ ಏಕೆ ರಾಜೀನಾಮೆ ನೀಡಲಿಲ್ಲ ಎಂದು ಪ್ರಶ್ನಿಸಿದರು.
“ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಅವರು ರಾಜೀನಾಮೆ ನೀಡಿ ದೆಹಲಿಯಲ್ಲಿ ಶೀಘ್ರ ಚುನಾವಣೆಗೆ ಒತ್ತಾಯಿಸಿರುವುದು ಅನುಮಾನವನ್ನು ಹುಟ್ಟುಹಾಕುತ್ತಿದೆ. ಅವರ ಪಕ್ಷದೊಳಗೆ ಸಂಘರ್ಷ ನಡೆಯುತ್ತಿದ್ದು, ಅದನ್ನು ನಿಭಾಯಿಸುವುದು ಕಷ್ಟ ಎಂದು ಅವರು ಭಾವಿಸಿದ್ದಾರೆಯೇ?. ಕೇಜ್ರಿವಾಲ್ ಅವರ ಪಾತ್ರಕ್ಕೆ ವಿರುದ್ಧವಾಗಿ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ” ಎಂದರು.
“ಆಮ್ ಆದ್ಮಿ ಪಕ್ಷವು ದೆಹಲಿ ವಿಧಾನಸಭೆಯಲ್ಲಿ ಭಾರಿ ಬಹುಮತವನ್ನು ಹೊಂದಿದೆ. ಅವರು ಚುನಾವಣೆ ನಡೆಸಬೇಕೆಂದು ಬಯಸಿದರೆ, ಅವರು ಸಂಪುಟ ಸಭೆಯನ್ನು ಕರೆದು ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಬಹುದು ಎಂದರು.
ದೆಹಲಿಯ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ್ ಪ್ರತಿಕ್ರಿಯಿಸಿ ”ಕೇಜ್ರಿವಾಲ್ ಅವರ ಪರ ಜನರು ಈಗಾಗಲೇ ಲೋಕಸಭೆ ಚುನಾವಣೆಯಲ್ಲಿ ತಮ್ಮ ತೀರ್ಪನ್ನು ನೀಡಿದ್ದು, ರಾಷ್ಟ್ರ ರಾಜಧಾನಿಯ ಏಳು ಸ್ಥಾನಗಳಲ್ಲಿ ಎಎಪಿ ಗೆಲ್ಲಲು ಸಾಧ್ಯವಾಗದಿರುವಾಗ ಅವರು ಜನರ ನ್ಯಾಯಾಲಯಕ್ಕೆ ಹೋಗುವ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.