ಖಚಿತವಾಯಿತು ಚಿಕಿತ್ಸೆ; ಕೋವಿಡ್ ಗೆ ನೀಡುವ ಔಷಧವೇ ಒಮಿಕ್ರಾನ್‌ಗೆ: ಕೇಂದ್ರ


Team Udayavani, Dec 25, 2021, 7:00 AM IST

ಖಚಿತವಾಯಿತು ಚಿಕಿತ್ಸೆ; ಕೋವಿಡ್ ಗೆ ನೀಡುವ ಔಷಧವೇ ಒಮಿಕ್ರಾನ್‌ಗೆ: ಕೇಂದ್ರ

ಹೊಸದಿಲ್ಲಿ: ಕೋವಿಡ್ ಸೋಂಕು ಮತ್ತು ಅದರ ರೂಪಾಂತರಿ ಡೆಲ್ಟಾಕ್ಕೆ ನೀಡುವ ಚಿಕಿತ್ಸೆಯನ್ನೇ ಹೊಸ ರೂಪಾಂತರಿ ಒಮಿಕ್ರಾನ್‌ಗೂ ನೀಡಬೇಕು. ಹೀಗೆಂದು ಕೇಂದ್ರ ಸರಕಾರ‌ ಶುಕ್ರವಾರ ತಿಳಿಸಿದೆ.

ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಈ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಒಮಿಕ್ರಾನ್‌ಗೆ ಯಾವ ರೀತಿಯ ಚಿಕಿತ್ಸೆ ಎಂಬ ಬಗ್ಗೆ ಇದ್ದ ಜಿಜ್ಞಾಸೆಯೂ ನಿವಾರಣೆಯಾದಂತಾಗಿದೆ. ಡೆಲ್ಟಾ ರೂಪಾಂತರಿ ಹೆಚ್ಚಿನ ಪ್ರಮಾಣದಲ್ಲಿ ಹಬ್ಬುತ್ತದೆ. ಇದರಿಂದಾಗಿ ಕೊರೊನಾ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ಭೂಷಣ್‌ ಇದೇ ಸಂದರ್ಭದಲ್ಲಿ ವಿವರಿಸಿದರು.

ಕರ್ನಾಟಕದಲ್ಲಿ ಹೆಚ್ಚು: ಕರ್ನಾಟಕ ಸೇರಿದಂತೆ ದೇಶದಲ್ಲಿ ಐದು ರಾಜ್ಯಗಳಲ್ಲಿ ಸಕ್ರಿಯ ಸೋಂಕು ಪ್ರಕರಣಗಳು ಹೆಚ್ಚಾಗಿವೆ ಎಂದು ರಾಜೇಶ್‌ ಭೂಷಣ್‌ ಹೇಳಿದ್ದಾರೆ. ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಲ ರಾಜ್ಯಗಳಲ್ಲಿ ಕೂಡ ಸಕ್ರಿಯ ಸೋಂಕು ಪ್ರಕರಣ ಹೆಚ್ಚಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ದೇಶದ 20 ಜಿಲ್ಲೆಗಳಲ್ಲಿ ಒಂದು ವಾರದಲ್ಲಿ ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ.5-ಶೇ.10 ಆಗಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಪತ್ತೆಯಾಗಿರುವ 181 ಒಮಿಕ್ರಾನ್‌ ಪ್ರಕರಣಗಳ ಪೈಕಿ, ಶೇ.91 ಮಂದಿ 2 ಡೋಸ್‌ ಲಸಿಕೆ ಪಡೆದಿದ್ದಾರೆ. ಮೂವರಿಗೆ ಬೂಸ್ಟರ್‌ ಡೋಸ್‌ ನೀಡಲಾಗಿದೆ ಎಂದರು ಭೂಷಣ್‌. ಶೇ.70ರಷ್ಟು ಒಮಿಕ್ರಾನ್‌ ಕೇಸ್‌ಗಳು ಲಕ್ಷಣ ರಹಿತವಾಗಿವೆ ಮತ್ತು ಸೋಂಕಿತರಲ್ಲಿ ಶೇ.61 ಮಂದಿ ಪುರುಷರು ಎಂದು ವಿವರಿಸಿದ್ದಾರೆ.

ನಾಲ್ಕನೇ ಅಲೆ: ಜಗತ್ತಿನಲ್ಲಿ ಕೊರೊನಾದ ನಾಲ್ಕನೇ ಅಲೆ ಉಂಟಾಗಿದೆ. ಒಟ್ಟಾರೆ ಪಾಸಿಟಿವಿಟಿ ಪ್ರಮಾಣ ಶೇ.6.1. ಹೀಗಾಗಿ, ದೇಶವಾಸಿಗಳೂ ಮುತುವರ್ಜಿ­ಯಿಂದ ಮುನ್ನೆಚ್ಚರಿಕೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಡೆಲ್ಟಾಗೆ ಹೋಲಿಕೆ ಮಾಡಿದರೆ ಒಮಿಕ್ರಾನ್‌ ಕ್ಷಿಪ್ರವಾಗಿ ಹರಡುತ್ತದೆ. 1.5 ದಿನಗಳಿಂದ 3 ದಿನಗಳಲ್ಲಿ ಕೇಸ್‌ ದ್ವಿಗುಣಗೊಳ್ಳುತ್ತದೆ ಎಂದಿದ್ದಾರೆ. ದೇಶದ ಶೇ.61ರಷ್ಟು ಮಂದಿಗೆ 2 ಡೋಸ್‌ ಲಸಿಕೆ ನೀಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ರಾಜಸ್ಥಾನ: ಭಾರತೀಯ ವಾಯುಸೇನೆಯ ಮಿಗ್- 21 ವಿಮಾನ ಪತನ, ಪೈಲಟ್ ಸಾವು

358ಕ್ಕೆ ಏರಿಕೆ: ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ ದೇಶದಲ್ಲಿ 122 ಒಮಿಕ್ರಾನ್‌ ರೂಪಾಂತರಿ ಪ್ರಕರಣಗಳ ಸಂಖ್ಯೆ ದೃಢಪಟ್ಟಿದೆ. ಹೀಗಾಗಿ, ಒಟ್ಟು ಕೇಸ್‌ಗಳ ಸಂಖ್ಯೆ 358ಕ್ಕೆ ಏರಿಕೆ­ಯಾಗಿದೆ. ಈ ಪೈಕಿ 114 ಮಂದಿ ಚೇತರಿಸಿ­ಕೊಂಡಿ­ದ್ದಾರೆ. ಒಟ್ಟು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅದು ದೃಢಪಟ್ಟಿದೆ. ಇನ್ನು ದಿನವಹಿ ಕೊರೊನಾ ಸೋಂಕುಗಳ ಸಂಖ್ಯೆ 24 ಗಂಟೆಗಳಲ್ಲಿ 6,650 ಹೊಸ ಪ್ರಕರಣಗಳು ಮತ್ತು ಇದೇ ಅವಧಿಯಲ್ಲಿ 374 ಮಂದಿ ಸಾವಿಗೀಡಾಗಿದ್ದಾರೆ.

ಜರ್ಮನಿಯಲ್ಲಿ ಮೊದಲ ಸಾವು: ಜರ್ಮನಿಯಲ್ಲಿ ಒಮಿಕ್ರಾನ್‌ ರೂಪಾಂತರಿ­ಯಿಂದಾಗಿ ಮೊದಲ ಸಾವು ಸಂಭವಿ­ಸಿರುವುದಾಗಿ ಜರ್ಮನಿಯ ರಾಬರ್ಟ್‌ ಕೋಚ್‌ ಇನ್‌ಸ್ಟಿಟ್ಯೂಟ್‌ ಗುರುವಾರ ತಿಳಿಸಿದೆ. ಹೊಸ ರೂಪಾಂತರಿಗೆ ಜಗತ್ತಿನಲ್ಲಿ ಇದು ಮೂರನೇ ಸಾವು. ಅಮೆರಿಕ, ಯು.ಕೆ.ಯಲ್ಲಿ ತಲಾ ಒಬ್ಬರು ಅಸುನೀಗಿದ್ದರು.
ಮುಂಬಯಿ, ದಿಲ್ಲಿಯಲ್ಲಿ ಹೆಚ್ಚಳ: ಮಹಾ­ರಾಷ್ಟ್ರದಲ್ಲಿ ಶುಕ್ರವಾರ 680 ಹೊಸ ಕೇಸ್‌ಗಳು ದೃಢಪಟ್ಟಿವೆ. ಜತೆಗೆ 20 ಒಮಿಕ್ರಾನ್‌ ಕೇಸ್‌ಗಳೂ ಖಚಿತ­ಪಟ್ಟಿವೆ. ದಿಲ್ಲಿಯಲ್ಲಿ 180 ಹೊಸ ಪ್ರಕರಣ­ಗಳು ದೃಢಪಟ್ಟಿವೆ. ಈ ಎಲ್ಲ ಬೆಳವಣಿ ಗೆಗಳ ನಡುವೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಐವರು ಸೇರುವಂತಿಲ್ಲ. ಸಿನೆಮಾ ಹಾಲ್‌ಗ‌ಳಲ್ಲಿ ಮತ್ತು ಜಿಮ್‌ಗಳಲ್ಲಿ ಶೇ.50ರ ಮಿತಿಯನ್ನು ಮತ್ತೆ ಹೇರಲಾಗಿದೆ.

ಒಮಿಕ್ರಾನ್‌ ಕಡಿಮೆ ತೀವ್ರತೆಯದ್ದು
ಭಾರತ ಸೇರಿದಂತೆ ಜಗತ್ತಿನಲ್ಲಿ ಒಮಿಕ್ರಾನ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಅದರಿಂದ ಉಂಟಾಗುವ ಪರಿಣಾಮ ಅಲ್ಪ ಪ್ರಮಾಣದ್ದು. ದಕ್ಷಿಣ ಆಫ್ರಿಕಾ, ಸ್ಕಾಟ್ಲೆಂಡ್‌, ಇಂಗ್ಲೆಂಡ್‌ನ‌ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಈ ಅಭಿ­ಪ್ರಾಯಕ್ಕೆ ಬರಲಾಗಿದೆ. ಒಮಿಕ್ರಾನ್‌ ದೃಢಪಟ್ಟರೂ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ತೀರಾ ಕಡಿಮೆ ಇರುತ್ತದೆ. ಮೂರು ರಾಷ್ಟ್ರಗಳ ಅಧ್ಯಯನದ ಪ್ರಕಾರ ಒಮಿಕ್ರಾನ್‌ನಿಂದಾಗಿ ಪರಿಸ್ಥಿತಿ ಕೈಮೀರಿ ಹೋಗಿರುವ ಪ್ರಮಾಣ ಕಡಿಮೆ. ಇದೇ ವೇಳೆಅಮೆರಿಕ ಮತ್ತು ಐರೋಪ್ಯ ಒಕ್ಕೂಟದ ಕೆಲವು ಭಾಗಗಳಲ್ಲಿ ಕೆಲವು ದಿನಗಳಿಂದ ಡೆಮಿಕ್ರಾನ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಡೆಲ್ಟಾ ಮತ್ತು ಒಮಿಕ್ರಾನ್‌ ಎರಡೂ ಸೇರಿ ಉಂಟಾಗಿರುವ ಹೊಸ ರೂಪಾಂತರಿ ಇದಾಗಿದೆ.

ವಿಜ್ಞಾನಿಗಳ ಪರಿಶೀಲನೆ
ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬೂಸ್ಟರ್‌ ಡೋಸ್‌ ಬೇಕೋ ಬೇಡವೋ ಎಂಬ ಬಗ್ಗೆ ಸರಕಾರ‌ದ ವಿಜ್ಞಾನಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಜಗತ್ತಿನ ಇತರ ರಾಷ್ಟ್ರಗಳಲ್ಲಿ ಬೂಸ್ಟರ್‌ ಡೋಸ್‌ ನೀಡಿದ ಬಳಿಕ ಲಭ್ಯವಾಗಿರುವ ಅಂಶಗಳನ್ನು ಅಧ್ಯಯನ ನಡೆಸಲಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿಯ ಮಹಾನಿರ್ದೇಶಕ ಡಾ| ಬಲರಾಮ ಭಾರ್ಗವ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ಬೂಸ್ಟರ್‌ ಡೋಸ್‌ ನೀಡಬೇಕೇ ಎಂಬ ಬಗ್ಗೆ ವಿಜ್ಞಾನಿಗಳ ಸಮಿತಿ ಹಲವು ಹಂತದಲ್ಲಿ ಸಮಾಲೋಚನೆ ನಡೆಸಿದೆ. ಲಸಿಕೆ ಹಾಕಿಸುವುದಕ್ಕಾಗಿ ಇರುವ ರಾಷ್ಟ್ರೀಯ ತಾಂತ್ರಿಕ ಸಮಿತಿ ಕೂಡ ಈ ಬಗ್ಗೆ ಪರಿಶೀಲನೆ ನಡೆಸಿದೆ. ಅಂತಿಮವಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.