![“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್ ಗುಂಡೂರಾವ್](https://www.udayavani.com/wp-content/uploads/2024/07/DIESH-415x234.jpg)
ರಾಜಸ್ಥಾನ ಉಪಚುನವಾಣೆ: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದು
Team Udayavani, Feb 1, 2018, 12:30 PM IST
![Congess-Flag-700.jpg](https://www.udayavani.com/wp-content/uploads/2018/02/1/Congess-Flag-700-620x400.jpg)
ಹೊಸದಿಲ್ಲಿ : ರಾಜಸ್ಥಾನದ ಎರಡು ಸಂಸದೀಯ ಕ್ಷೇತ್ರಗಳಾದ ಅಲ್ವಾರ್ ಮತ್ತು ಅಜ್ಮೇರ್ ಹಾಗೂ ಮಂಡಲಗಢ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಗಳ ಮತ ಎಣಿಕೆ ಇಂದು ನಡೆಯುತ್ತಿದ್ದು ಈ ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಈಗ ಮುಂದಿರುವುದಾಗಿ ತಾಜಾ ವರದಿಗಳು ತಿಳಿಸಿವೆ.
ರಾಜಸ್ಥಾನದ ಈ ಉಪಚುನವಾಣೆಗಳು ಈ ವರ್ಷಾಂತ್ಯ ರಾಜಸ್ಥಾನ ವಿಧಾನಸಭೆಗೆ ನಡೆಯಲಿರುವ ಚುನಾವಣೆ ಮತ್ತು ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಪರಿಗಣಿತವಾಗಿದೆ.
ಇದೇ ವೇಳೆ ಪಶ್ಚಿಮ ಬಂಗಾಲದ ಉಲುಬೆರಿಯಾ ಸಂಸದೀಯ ಕ್ಷೇತ್ರಕ್ಕೆ ನಡೆದಿರುವ ಉಪ ಚುನಾವಣೆ ಮತ ಎಣಿಕೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಮುಂದಿದೆ. ಈ ಕ್ಷೇತ್ರ ತೃಣ ಮೂಲ ಕಾಂಗ್ರೆಸ್ ಕೈಯಲ್ಲೇ ಇತ್ತು. ಇದೇ ರೀತಿ ಕಾಂಗ್ರೆಸ್ ಕೈಯಲ್ಲಿದ್ದ ನವಪಾರಾ ವಿಧಾನಸಭಾ ಕ್ಷೇತ್ರವನ್ನು ತೃಣ ಮೂಲ ಕಾಂಗ್ರೆಸ್ ಗೆದ್ದುಕೊಂಡು ತನ್ನ ಜನಪ್ರಿಯತೆಗೆ ಯಾವುದೇ ಧಕ್ಕೆ ಉಂಟಾಗಿಲ್ಲ ಎಂಬುದನ್ನು ಸಾಬೀತು ಪಡಿಸಿದೆ.
ರಾಜಸ್ಥಾನದಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಸರಕಾರ 2013ರಿಂದ ಅಧಿಕಾರದಲ್ಲಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ರಾಜ್ಯದಲ್ಲಿನ ಎಲ್ಲ 25 ಸ್ಥಾನಗಳನ್ನು ಗೆದ್ದಿತ್ತು.
ಟಾಪ್ ನ್ಯೂಸ್
![“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್ ಗುಂಡೂರಾವ್](https://www.udayavani.com/wp-content/uploads/2024/07/DIESH-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![TN-BSP-Armstrong](https://www.udayavani.com/wp-content/uploads/2024/07/TN-BSP-Armstrong-150x90.jpg)
Tamil Nadu: ಬಿಎಸ್ಪಿ ಮುಖ್ಯಸ್ಥ ಆರ್ಮ್ಸ್ಟ್ರಾಂಗ್ ಹತ್ಯೆ
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.