Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ
ಕಾಂಗ್ರೆಸ್ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುತ್ತದೆ ಮತ್ತು...
Team Udayavani, Oct 9, 2024, 3:22 PM IST
ಹೊಸದಿಲ್ಲಿ: ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಮರುದಿನ ಬುಧವಾರ(ಅ9) ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿ ಕಾರಿದ್ದು ‘ ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ. ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಬಯಸುವ ದ್ವೇಷ ಹರಡುವ ಕಾರ್ಖಾನೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ.ಗಿಂತ ಹೆಚ್ಚಿನ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಮೋದಿ ”ನಾವು ದೊಡ್ಡ ಗೆಲುವು ಪಡೆಯಬೇಕು. ವಿಪಕ್ಷವಾದ ಮಹಾ ವಿಕಾಸ್ ಅಘಾಡಿ (MVA) ಅಧಿಕಾರ ಪಡೆದು ಮಹಾರಾಷ್ಟ್ರವನ್ನು ದುರ್ಬಲಗೊಳಿಸಲು ಬಯಸಿದೆ, ಆದರೆ ಆಡಳಿತಾರೂಢ ಮಹಾಯುತಿಯು ರಾಜ್ಯವನ್ನು ಬಲಪಡಿಸುತ್ತದೆ” ಎಂದರು.
‘ಯೋಜನೆಗಳ ತ್ವರಿತ ಅಭಿವೃದ್ಧಿಯನ್ನು ಮಹಾರಾಷ್ಟ್ರ ಹಿಂದೆಂದೂ ಕಂಡಿರಲಿಲ್. ಕಾಂಗ್ರೆಸ್ ಆಡಳಿತದಲ್ಲಿ, ಭ್ರಷ್ಟಾಚಾರದ ವಿಷಯದಲ್ಲಿ ಅದೇ ವೇಗ ಮತ್ತು ಪ್ರಮಾಣವು ಸಾಕ್ಷಿಯಾಗಿದೆ’ ಎಂದು ಪ್ರಧಾನಿ ಹೇಳಿದರು.
“ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ ಮತ್ತು ದ್ವೇಷವನ್ನು ಹರಡುವ ಕಾರ್ಖಾನೆಯಾಗಿದೆ. ಕಾಂಗ್ರೆಸ್ಗೆ ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಕಾಳಜಿ ಇಲ್ಲ, ನಾವು ಎರಡಕ್ಕೂ ಗಮನ ನೀಡಿದ್ದೇವೆ’ ಎಂದರು.
ಬಡವರು, ರೈತರು, ಯುವಕರು ಮತ್ತು ಮಹಿಳೆಯರ ಅಭಿವೃದ್ಧಿಯೊಂದಿಗೆ ವಿಕಸಿತ್ ಭಾರತ್ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುತ್ತದೆ ಮತ್ತು ಅವರನ್ನು ತನ್ನ ಮತಬ್ಯಾಂಕ್ ಆಗಿ ಪರಿವರ್ತಿಸುತ್ತದೆ. ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಬಯಸುತ್ತದೆ’ ಎಂದು ಮೋದಿ ಕಿಡಿ ಕಾರಿದರು.
ಮಹಾರಾಷ್ಟ್ರ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಜೆಪಿ ಈಗಾಗಲೇ ಸಿದ್ಧತೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi;ಕಾಂಗ್ರೆಸ್ ನೊಂದಿಗೆ ಮೈತ್ರಿ?: 2 ರಾಜ್ಯಗಳ ಫಲಿತಾಂಶದ ಬಳಿಕ ಆಪ್ ಹೇಳಿದ್ದೇನು?
Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ
Prayagraj: ಕುಂಭಮೇಳದಲ್ಲಿ ಮಳಿಗೆಗೆ ಸನಾತನೇತರರಿಗೆ ಅವಕಾಶ ಇಲ್ಲ: ಅಖಾರ ಪರಿಷತ್
Jammu-Kashmir: ಇಬ್ಬರು ಸೇನಾ ಯೋಧರ ಅಪಹರಣ-ಓರ್ವ ಯೋಧನ ಮೃತದೇಹ ಪತ್ತೆ
Haryana: ಸೈನಿ ಪ್ರಮಾಣವಚನಕ್ಕೆ ಬಿಜೆಪಿ ಸಿದ್ಧತೆ: ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Anandapura: ವರುಣಾರ್ಭಟ: ಕೊಚ್ಚಿ ಹೋದ ಸೇತುವೆ: ಸಂಪರ್ಕ ಕಳೆದುಕೊಂಡ ಗ್ರಾಮಸ್ಥರು
Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ
Udupi: ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೊಟೇಲ್ ಉದ್ಘಾಟನೆ
Udupi: ಕಾರಿನ ಬ್ರೇಕ್ ಫೇಲ್ ಆಗಿ ಅವಘಡ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.