Babri mosque ಧ್ವಂಸಕ್ಕೆ ಬಿಜೆಪಿಯಷ್ಟೇ ಕಾಂಗ್ರೆಸ್ ಕೂಡಾ ಕಾರಣ: ಅಸಾದುದ್ದಿನ್ ಓವೈಸಿ
Team Udayavani, Nov 3, 2023, 6:41 PM IST
ಹೊಸದಿಲ್ಲಿ: ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಅವರು ಕಾಂಗ್ರೆಸ್ ವಿರುದ್ಧ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವು ಸಮಾನ ಹೊಣೆಗಾರಿಕೆಯನ್ನು ಹೊಂದಿದೆ ಎಂದಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವನ್ನು ಬಿಜೆಪಿ ಮತ್ತು ಆರೆಸ್ಸೆಸ್ ಗೆ ಹೋಲಿಸಬಹುದು ಎಂದು ಅವರು ಹೇಳಿದರು.
ಇತ್ತೀಚೆಗೆ ಬಾಬರಿ ಮಸೀದಿ ಧ್ವಂಸದಲ್ಲಿ ಕಾಂಗ್ರೆಸ್ ಪಾತ್ರದ ಕುರಿತು ಚರ್ಚೆ ಹುಟ್ಟುಹಾಕಿದ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಇತ್ತೀಚಿನ ಹೇಳಿಕೆಯ ನಂತರ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ.
ಹೈದರಾಬಾದ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾನು ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ಹೇಳುತ್ತಲೇ ಬಂದಿದ್ದೇನೆ, ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ಎಸ್ ನಷ್ಟೇ ಕಾಂಗ್ರೆಸ್ ಪಾಲಿದೆ. ಬಾಬರಿ ಮಸೀದಿ ಧ್ವಂಸಕ್ಕೆ ಕಾಂಗ್ರೆಸ್ ಸಮಾನ ಹೊಣೆಗಾರಿಕೆ ಎಂಬುದು ಕಮಲ್ ನಾಥ್ ಹೇಳಿಕೆಯಿಂದ ಮತ್ತೊಮ್ಮೆ ಸಾಬೀತಾಗಿದೆ” ಎಂದು ಓವೈಸಿ ಹೇಳಿದರು.
ಕಮಲ್ ನಾಥ್ ಅವರು ಇತ್ತೀಚೆಗೆ ಬಾಬರಿ ಮಸೀದಿ ಮತ್ತು ರಾಜೀವ್ ಗಾಂಧಿ ಬಗ್ಗೆ ಹೇಳಿಕೆ ನೀಡಿದ್ದರು, 1986ರಲ್ಲಿ ರಾಜೀವ್ ಗಾಂಧಿ ಅವರು ಮಸೀದಿ ಬೀಗ ತೆರೆಸಿದ್ದರು. ಇತಿಹಾಸವನ್ನು ಯಾರೂ ಮರೆಯಬಾರದು ಎಂದಿದ್ದರು.
ಇದನ್ನೂ ಓದಿ:ಕುಡಿದ ಮತ್ತಿನಲ್ಲಿದ್ದ ರೈಲ್ವೆ ಪೊಲೀಸ್ ಅಧಿಕಾರಿಯ ಪಿಸ್ತೂಲ್ ನಿಂದಲೇ ಹತ್ಯೆಗೈದ ಪತ್ನಿ!
ರಾಮ ಮಂದಿರವು ಯವುದೇ ಒಂದು ಪಕ್ಷಕ್ಕೆ ಅಥವಾ ವ್ಯಕ್ತಿಗೆ ಸೇರಿದ್ದಲ್ಲ. ಅದು ಇಡಿ ದೇಶಕ್ಕೆ ಸಂಬಂಧಿಸಿದ್ದು. ಅದು ದೇಶದ ಪ್ರತಿಯೊಬ್ಬರದೂ. ಆದರೆ ಬಿಜೆಪಿ ತನ್ನ ಆಸ್ತಿ ಎಂಬಂತೆ ಬಳಸಿಕೊಳ್ಳುತ್ತಿದೆ. ಅವರ ಸರ್ಕಾರವಿದೆ. ಅವರು ನಿರ್ಮಿಸುತ್ತಿದ್ದಾರೆ. ಆದರೆ ಅವರೇನು ಅವರ ಹಣದಿಂದ ನಿರ್ಮಿಸುತ್ತಿಲ್ಲ. ಸರ್ಕಾರಿ ಹಣದಿಂದ ನಿರ್ಮಾಣ ಮಾಡಲಾಗುತ್ತಿದೆ” ಎಂದು ಕಮಲ್ ನಾಥ್ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.