ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಇ.ಡಿ. ಸಮನ್ಸ್‌ಗೆ ಖರ್ಗೆ ಕಿಡಿ


Team Udayavani, Aug 5, 2022, 6:20 AM IST

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಇ.ಡಿ. ಸಮನ್ಸ್‌ಗೆ ಖರ್ಗೆ ಕಿಡಿ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ, ಪ್ರಧಾನ ಕಚೇರಿ ಜಪ್ತಿ, ಕಾಂಗ್ರೆಸ್‌ನ ಪ್ರಮುಖ ನಾಯಕರ ವಿಚಾರಣೆಗೆ ಸಮನ್ಸ್‌ ವಿಚಾರ ಗುರುವಾರ ಸಂಸತ್‌ ಅಧಿವೇಶನದಲ್ಲಿ ಭಾರೀ ಸದ್ದು ಮಾಡಿದೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಗದ್ದಲವೆಬ್ಬಿಸಿದ್ದರಿಂದ ಕಲಾಪಗಳೂ ಮುಂದೂಡಲ್ಪಟ್ಟಿವೆ.

“ಮಧ್ಯಾಹ್ನ 12.30ಕ್ಕೆ ವಿಚಾರಣೆಗೆ ಹಾಜರಾಗಿ’ ಎಂದು ಜಾರಿ ನಿರ್ದೇಶನಾಲಯ ಕಳುಹಿಸಿರುವ ಸಮನ್ಸ್‌ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, “ಸಂಸತ್‌ ಅಧಿವೇಶನ ನಡೆಯುತ್ತಿದೆ. ನಾನು ಇಲ್ಲಿ ಪ್ರತಿಪಕ್ಷ ನಾಯಕ. ಅಧಿವೇಶನ ನಡೆಯುತ್ತಿರುವಾಗ ಸಮನ್ಸ್‌ ಕಳುಹಿಸುವುದು ಎಷ್ಟು ಸರಿ? ನಾನು ಕಾನೂನು ಪಾಲಿಸುವಾತ. ನಾನು ವಿಚಾರಣೆಗೆ ಹಾಜರಾಗುತ್ತೇನೆ. ಆದರೆ, ಇ.ಡಿ. ಈ ಸಮಯದಲ್ಲಿ ಸಮನ್ಸ್‌ ಕೊಡುವುದು ನ್ಯಾಯಸಮ್ಮತವೇ?’ ಎಂದು ಪ್ರಶ್ನಿಸಿದರು.

ಜತೆಗೆ, ಬುಧವಾರ ಸೋನಿಯಾ ಗಾಂಧಿ, ರಾಹುಲ್‌ ನಿವಾಸಕ್ಕೆ ಪೊಲೀಸರು ಘೇರಾವ್‌ ಹಾಕಿದ್ದಾರೆ. ಇದು ಹೀಗೇ ಮುಂದುವರಿದರೆ ನಮ್ಮ ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯುತ್ತದೆಯೇ? ಅದು ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವೇ? ನಮ್ಮ ನೈತಿಕ ಸ್ಥೈರ್ಯ ಕುಂದಿಸಲೆಂದೇ ಉದ್ದೇಶಪೂರ್ವಕವಾಗಿ ಹೀಗೆಲ್ಲ ಮಾಡಲಾಗುತ್ತಿದೆ. ಆದರೆ ನಾವು ಹೆದರಲ್ಲ, ನಮ್ಮ ಹೋರಾಟ ಮುಂದುವರಿಯುತ್ತದೆ ಎಂದೂ ಖರ್ಗೆ ಆಕ್ರೋಶಭರಿತರಾಗಿ ನುಡಿದರು.

ನಾವು ಮೂಗುತೂರಿಸಲ್ಲ:

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಸಭೆ ನಾಯಕ ಪಿಯೂಷ್‌ ಗೋಯಲ್‌, “ಜಾರಿ ನಿರ್ದೇಶನಾಲಯದ ಕಾರ್ಯದಲ್ಲಿ ನಾವು ಮೂಗುತೂರಿಸುವುದಿಲ್ಲ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಹಾಗೆ ಮಾಡಿರಬಹುದು, ಆದರೆ ನಾವು ಮಾಡುವುದಿಲ್ಲ. ಯಾರು ಏನೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಖರ್ಗೆ ಅವರ ಆರೋಪ ಆಧಾರರಹಿತ. ಕಾಂಗ್ರೆಸ್‌ ನಾಯಕರು ತಪ್ಪಿಸಿಕೊಂಡು ಓಡಿ ಹೋಗುವ ಬದಲು ಕಾನೂನು ಪಾಲಿಸಲಿ’ ಎಂದು ಹೇಳಿದರು.

ಇಂದು ಪ್ರಧಾನಿ ನಿವಾಸಕ್ಕೆ ಮುತ್ತಿಗೆ :

ಬೆಲೆಯೇರಿಕೆ, ಜಿಎಸ್‌ಟಿ ಹೆಚ್ಚಳ ಖಂಡಿಸಿ ಪ್ರತಿಪಕ್ಷಗಳ ಸಂಸದರು ಶುಕ್ರವಾರ ಭಾರೀ ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಿಸಿದೆ. ಜತೆಗೆ,ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಪಾದಯಾತ್ರೆ ನಡೆಸಿ, ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಿದೆ. ನಿಷೇಧಾಜ್ಞೆ ಉಲ್ಲಂ ಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ ನಾಯಕರಿಗೆ ದೆಹಲಿ ಪೊಲೀಸರು ಗುರುವಾರ ಎಚ್ಚರಿಕೆ ನೀಡಿದ್ದಾರೆ.

ಅಧಿವೇಶನ ನಡೆಯುತ್ತಿರುವಾಗ ಖರ್ಗೆ ಅವರಿಗೆ ಸಮನ್ಸ್‌ ಕಳುಹಿಸಿರುವುದು ಶಾಸನಸಭೆಗೆ ಮಾಡಿರುವ ಅವಮಾನ. “ಮೋದಿಶಾಹಿ’ ಈಗ ಮತ್ತಷ್ಟು ಕೀಳುಮಟ್ಟಕ್ಕೆ ಇಳಿಯುತ್ತಿದೆ. ಜೈರಾಂ ರಮೇಶ್‌, ಕಾಂಗ್ರೆಸ್‌ ನಾಯಕ

ಕಾಂಗ್ರೆಸ್‌ ಮೊದಲು ಲೂಟಿ ಮಾಡಿ, ಈಗ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ. ಸೋನಿಯಾ, ರಾಹುಲ್‌ ಕಾನೂನಿಗಿಂತ ದೊಡ್ಡವರಲ್ಲ. ಕಾಂಗ್ರೆಸ್‌ ನಾಯಕರು ತನಿಖಾ ಸಂಸ್ಥೆಯನ್ನು ಬೆದರಿಸಲು ಯತ್ನಿಸುತ್ತಿದ್ದಾರೆ.ಗೌರವ್‌ ಭಾಟಿಯಾ, ಬಿಜೆಪಿ ವಕ್ತಾರ

ಸ್ವಾತಂತ್ರ್ಯ ಹೋರಾಟದಲ್ಲಿ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಪಾತ್ರ ಮಹತ್ವದ್ದಾಗಿತ್ತು. ನನ್ನ ಸ್ವಂತ ಮನೆ ಆನಂದ್‌ ಭವನ್‌ ಮಾರಾಟ ಮಾಡುವ ಪರಿಸ್ಥಿತಿ ಬಂದರೂ ನಾನು ಹೆರಾಲ್ಡ್‌ ಕಚೇರಿ ಮುಚ್ಚುವುದಿಲ್ಲ ಎಂದು ನೆಹರೂ ಹೇಳಿದ್ದರು. ಅದನ್ನು ಉಳಿಸಿಕೊಳ್ಳಬೇಕಾದ್ದು ಕಾಂಗ್ರೆಸ್‌ನ ಕರ್ತವ್ಯ.ವಿ.ಡಿ.ಸತೀಷನ್‌, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.