1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್
ಪ್ರಕರಣದಲ್ಲಿ ತನ್ನ ಪಾತ್ರವಿಲ್ಲ ಎಂದ ಕಾಂಗ್ರೆಸ್ ನಾಯಕ
Team Udayavani, Sep 30, 2024, 6:56 PM IST
ಹೊಸದಿಲ್ಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಮತ್ತು ಇತರ ಅಪರಾಧಗಳಿಗಾಗಿ ತನ್ನ ವಿರುದ್ಧ ಆರೋಪಗಳನ್ನು ರೂಪಿಸಿದ ಇತ್ತೀಚಿನ ವಿಚಾರಣ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಟೈಟ್ಲರ್ ವಿರುದ್ಧದ ಆರೋಪಗಳಲ್ಲಿ ಕಾನೂನುಬಾಹಿರ ಸಭೆ, ಗಲಭೆ ಮತ್ತು ದ್ವೇಷವನ್ನು ಉತ್ತೇಜಿಸುವುದು ಸೇರಿವೆ. ಇತ್ತೀಚೆಗೆ ವಿಚಾರಣ ನ್ಯಾಯಾಲಯದ ಮುಂದೆ ಹಾಜರಾದ ಟೈಟ್ಲರ್, ಈ ಆರೋಪಗಳಿಗೆ ನಿರ್ದೋಷಿ ಎಂದು ಹೇಳಿಕೊಂಡಿದ್ದರು.ಇದೀಗ ಗಲಭೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಆರೋಪಗಳನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕೊಲೆ ಮತ್ತು ಗಲಭೆಯನ್ನು ಉಂಟುಮಾಡುವ ಉದ್ದೇಶದ ಹೊರತಾಗಿ, ಟೈಟ್ಲರ್ ಕಾನೂನುಬಾಹಿರ ಸಭೆ, ಗಲಭೆ, ಆದೇಶಕ್ಕೆ ಅವಿಧೇಯತೆ, ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವಿಕೆ, ಕುಮ್ಮಕ್ಕು, ಬೆಂಕಿ ಹಚ್ಚಿರುವುದು ಮತ್ತು ಕಳ್ಳತನದ ಆರೋಪಗಳನ್ನು ಎದುರಿಸುದ್ದಾರೆ.
1984ರ ನವೆಂಬರ್ನಲ್ಲಿ ಗುರುದ್ವಾರದ ಬಳಿ ನೆರೆದಿದ್ದ ಜನಸಮೂಹವನ್ನು ಪ್ರಚೋದಿಸಿದ್ದಕ್ಕಾಗಿ ಮಾಜಿ ಕೇಂದ್ರ ಸಚಿವ ಟೈಟ್ಲರ್ ವಿರುದ್ಧ ಕಳೆದ ವರ್ಷ ಮೇನಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ
VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ
Bulldozer Action:ಬುಲ್ಡೋಜರ್ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್
Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ
Pakistanಕ್ಕೆ ದೊಡ್ಡ ಮೊತ್ತದ ಆರ್ಥಿಕ ನೆರವು …ರಾಜನಾಥ್ ಸಿಂಗ್ ಭರ್ಜರಿ ಆಫರ್, ಆದರೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.