![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Dec 13, 2022, 8:50 AM IST
ಭೋಪಾಲ್: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಇಂದು ಬಂಧಿಸಲಾಗಿದೆ.
ಸಂವಿಧಾನವನ್ನು ಉಳಿಸಬೇಕಾದರೆ ಪಿಎಂ ಮೋದಿಯನ್ನು ಕೊಲ್ಲಬೇಕು ಎಂದು ರಾಜಾ ಪಟೇರಿಯಾ ಅವರು ಜನರ ಗುಂಪನ್ನು ಪ್ರೇರೇಪಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು.
ಪಟೇರಿಯಾ ಅವರ ಹೇಳಿಕೆಯ ವಿಡಿಯೋ ವೈರಲ್ ಆದ ಬಳಿಕ ಮಧ್ಯಪ್ರದೇಶ ಸರ್ಕಾರವು ಮಾಜಿ ರಾಜ್ಯ ಸಚಿವ ಪಟೇರಿಯಾ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಿದೆ.
ಇದನ್ನೂ ಓದಿ:ಸಾಧನೆಗೆ ಅಡ್ಡಿಯಾಗದ ಅಂಧತ್ವ: ಉದಯವಾಣಿಯಲ್ಲಿ “ಮಾನವ ಕಂಪ್ಯೂಟರ್’
ಪನ್ನಾದ ಪಾವಾಯಿ ಪೊಲೀಸ್ ಠಾಣೆಯಲ್ಲಿ ಸೋಮವಾರ ಮಧ್ಯಾಹ್ನ ಪಟೇರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿಕೆಯನ್ನು ಖಂಡಿಸಿದ್ದಾರೆ. “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬರುತ್ತಿದೆ” ಎಂದು ಟೀಕೆ ಮಾಡಿದ್ದಾರೆ.
“ಮೋದಿ ಚುನಾವಣೆಯನ್ನು ಕೊನೆಗೊಳಿಸುತ್ತಾರೆ, ಮೋದಿ ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ವಿಭಜನೆ ಮಾಡುತ್ತಾರೆ. ದಲಿತರು, ಬುಡಕಟ್ಟುಗಳು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ ಮೋದಿಯನ್ನು ಕೊಲ್ಲಲು ಸಿದ್ಧರಾಗಿ” ಎಂದು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ರಾಜಾ ಪಟೇರಿಯಾ ಹೇಳಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.