Congress; ಕರ್ನಾಟಕದಿಂದ ಸ್ಪರ್ಧೆ ಮಾಡಲು ರಾಹುಲ್ಗೆ ಎಡ ಪಕ್ಷಗಳ ಸಲಹೆ
Team Udayavani, Dec 5, 2023, 6:25 AM IST
ತಿರುವನಂತಪುರ: ಮೂರು ರಾಜ್ಯಗಳಲ್ಲಿನ ಸೋಲಿನ ತಪ್ಪುಗಳನ್ನು ತಿದ್ದಿಕೊಳ್ಳಿ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕಾಂಗ್ರೆಸ್ಗೆ ಹೇಳಿದ ಬೆನ್ನಲ್ಲೇ, ಕೇರಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡದಂತೆ ಎಡಪಕ್ಷಗಳು ರಾಹುಲ್ ಗಾಂಧಿಯವರಿಗೆ ಸಲಹೆ ನೀಡಿವೆ.
ಇದಕ್ಕೆ ಬದಲಾಗಿ ಬಿಜೆಪಿ ಜತೆಗೆ ನೇರ ಕಾದಾಟವಿರುವ ಕರ್ನಾಟಕದಂಥ ರಾಜ್ಯದಲ್ಲಿ ಸ್ಪರ್ಧೆ ಮಾಡಿ ಎಂದು ಹೇಳಿವೆ. ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜ, ಸಿಪಿಎಂ ಕೇರಳ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್, ಸಿಪಿಐ ನಾಯಕ ಮತ್ತು ಕೇರಳ ಕಂದಾಯ ಸಚಿವ ಕೆ.ರಾಜನ್ ಅವರು ಈ ಬಗ್ಗೆ ಸೋಮವಾರ ಬಹಿರಂಗ ಹೇಳಿಕೆ ನೀಡಿದ್ದಾರೆ.
2019ರಲ್ಲೇ ರಾಹುಲ್ ಗಾಂಧಿಯವರು ಕೇರಳದ ವಯನಾಡ್ನಿಂದ ಸ್ಪರ್ಧೆ ಮಾಡುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದವು. ಆದರೆ ಕಾಂಗ್ರೆಸ್, ವಯನಾಡ್ ಮುಸ್ಲಿಂ ಬಾಹುಳ್ಯದ ಕ್ಷೇತ್ರವಾಗಿರುವ ಕಾರಣ, ಇದನ್ನೇ ಆಯ್ಕೆ ಮಾಡಿತ್ತು. ಈಗ 2023ರ ಲೋಕಸಭೆ ಚುನಾವಣೆಯಲ್ಲೂ ರಾಹುಲ್ ಗಾಂಧಿಯವರು ವಯನಾಡ್ನಿಂದ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದು, ಹೀಗಾಗಿ, ಎಡಪಕ್ಷಗಳು ಬೇರೆ ಕಡೆಗೆ ಕ್ಷೇತ್ರ ನೋಡುವಂತೆ ಹೇಳಿವೆ. ಈ ಮೂಲಕ ಐಎನ್ಡಿಐಎನಲ್ಲಿ ಒಡಕು ಇರುವುದನ್ನು ಬಹಿರಂಗ ಮಾಡಿವೆ.
ಸದ್ಯ 3 ರಾಜ್ಯಗಳಲ್ಲಿ ಕಾಂಗ್ರೆಸ್ ಸೋತಿರುವುದರಿಂದ ಕೆಲವು ಪಕ್ಷಗಳ ವರಸೆ ಬದಲಾಗಿದೆ ಎಂದು ಮೂಲಗಳು ಹೇಳಿವೆ. ಹೀಗಾಗಿ ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರ ಆರಿಸಿಕೊಳ್ಳುವಂತೆ ಸಲಹೆ ನೀಡಿವೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.