ಬುಲ್ಡೋಜರ್‌ ಅಬ್ಬರ: ಉ.ಪ್ರ.: ಹಿಂಸೆಯ ಸೂತ್ರಧಾರನ ಅಕ್ರಮ ಮನೆ ಧ್ವಂಸ

ಪ. ಬಂಗಾಲ ಉದ್ವಿಗ್ನ , ರೈಲು ನಿಲ್ದಾಣದ ಮೇಲೆ ದಾಳಿ

Team Udayavani, Jun 13, 2022, 7:20 AM IST

ಬುಲ್ಡೋಜರ್‌ ಅಬ್ಬರ: ಉ.ಪ್ರ.: ಹಿಂಸೆಯ ಸೂತ್ರಧಾರನ ಅಕ್ರಮ ಮನೆ ಧ್ವಂಸ

ಹೊಸದಿಲ್ಲಿ: ಪ್ರವಾದಿ ಮುಹಮ್ಮದ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಶುಕ್ರವಾರ ಆರಂಭವಾದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಬುಲ್ಡೋಜರ್‌ಗಳು ಅಬ್ಬರಿಸತೊಡಗಿವೆ.

ಶುಕ್ರವಾರ ನಡೆದ ಹಿಂಸಾಚಾರದ ಸೂತ್ರಧಾರ ಎನ್ನಲಾದ ಪ್ರಯಾಗ್‌ರಾಜ್‌ ಮೂಲದ ರಾಜ ಕಾರಣಿ ಜಾವೇದ್‌ ಮೊಹಮ್ಮದ್‌ ಅವರ ಎರಡು ಮಹಡಿಗಳ ಅಕ್ರಮ ನಿವಾಸವನ್ನು ರವಿವಾರ ಧ್ವಂಸ ಮಾಡಲಾಗಿದೆ. ಹಿಂಸಾಚಾರದಲ್ಲಿ ಪಾಲ್ಗೊಂ ಡಿದ್ದ ಇನ್ನಿಬ್ಬರು ಆರೋಪಿಗಳ ಸಹರಾನ್ಪುರದ ಮನೆಗಳನ್ನು ಶನಿವಾರ ಕೆಡವಲಾಗಿತ್ತು.

ಪ್ರಯಾಗ್‌ರಾಜ್‌ನ ಕರೇಲಿ ಪ್ರದೇಶದಲ್ಲಿ ರುವ ಜಾವೇದ್‌ ಅವರ 2 ಮಹಡಿಗಳ ಮನೆಯನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ ಎಂದು ನಿವಾಸದ ಹೊರಗೆ ಸ್ಥಳೀಯಾ ಡಳಿತವು ನೋಟಿಸ್‌ ಅಂಟಿಸಿದ ಕೆಲವೇ ತಾಸು ಗಳಲ್ಲಿ ಅಲ್ಲಿಗೆ ಬುಲ್ಡೋಜರ್‌ ಪ್ರವೇಶಿಸಿದೆ. ಮನೆಯೊಳಗಿದ್ದ ಪೀಠೊಪಕರಣಗಳನ್ನು ಹೊರತಂದು ಇರಿಸಿದ ಬಳಿಕ ಇಡೀ ಮನೆಯನ್ನು ಕೆಡವಲಾಗಿದೆ. ಬಿಗಿ ಪೊಲೀಸ್‌ ಬಂದೋಬಸ್ತ್ ನಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿದೆ.
ಅಕ್ರಮ ಕಟ್ಟಡವನ್ನು ತೆರವುಗೊಳಿಸುವಂತೆ ಮೇ ತಿಂಗಳಲ್ಲೇ ಜಾವೇದ್‌ ಅವರಿಗೆ ನೋಟಿಸ್‌ ನೀಡಲಾಗಿತ್ತು.

ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಈಗ ಕಾನೂನು ಪ್ರಕಾರವೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನೋಟಿಸ್‌ನಲ್ಲಿ ವಿವರಿಸಲಾಗಿದೆ.

ಕೆಲವೆಡೆ ಶಾಂತಿ, ಕೆಲವೆಡೆ ಬೆಂಕಿ
ಝಾರ್ಖಂಡ್‌ ರಾಜಧಾನಿ ರಾಂಚಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಗುಂಡೇಟಿಗೆ ಇಬ್ಬರು ಬಲಿಯಾದ ಬಳಿಕ ಪೊಲೀಸರ ಕಟ್ಟೆಚ್ಚರದಿಂದಿದ್ದು, ಅಂಗಡಿ ಮುಂಗಟ್ಟುಗಳನ್ನೆಲ್ಲ ಮುಚ್ಚಲಾಗಿದೆ. ರವಿವಾರ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಜಮ್ಮುವಿನ ಗಲಭೆಪೀಡಿತ ಚೇನಾಬ್‌ ಕಣಿವೆ ಪ್ರದೇಶದಲ್ಲಿ ಸತತ 4ನೇ ದಿನವೂ ಕರ್ಫ್ಯೂ ಮುಂದುವರಿದಿದ್ದು, ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ರವಿವಾರ ಬಂಧಿಸಲಾಗಿದೆ. ಪಶ್ಚಿಮ ಬಂಗಾಲದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ರವಿವಾರ ಇಲ್ಲಿನ ನಾಡಿಯಾ ಜಿಲ್ಲೆಯಲ್ಲಿ ಉದ್ರಿಕ್ತರ ಗುಂಪೊಂದು ಸ್ಥಳೀಯ ರೈಲು ನಿಲ್ದಾಣದ ಮೇಲೆ ದಾಳಿ ಮಾಡಿ ರೈಲೊಂದಕ್ಕೆ ಹಾನಿ ಉಂಟು ಮಾಡಿದೆ. ಪ್ಲ್ರಾಟ್‌ಫಾರಂನಲ್ಲಿ ನಿಂತಿದ್ದ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದೇ ವೇಳೆ ಹೌರಾ ಹಿಂಸಾಚಾರ ಸಂಬಂಧ 53 ಮಂದಿಯನ್ನು ಬಂಧಿಸಲಾಗಿದೆ.

304 ಮಂದಿ ಬಂಧನ
ಉತ್ತರ ಪ್ರದೇಶದಲ್ಲಿ ಹಿಂಸಾಚಾರ ಸಂಬಂಧ ರವಿವಾರ ಬೆಳಗ್ಗೆ 8ರ ವರೆಗೆ ಒಟ್ಟು 304 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಾದವರಲ್ಲಿ ಪ್ರಯಾಗ್‌ರಾಜ್‌ನ 91, ಸಹರಾನ್ಪುರದ 71, ಹತ್ರಾಸ್‌ನ 51, ಮೊರಾದಾಬಾದ್‌ನ 34, ಫಿರೋಜಾಬಾದ್‌ನ 15 ಮತ್ತು ಅಂಬೇಡ್ಕರ್‌ನಗರದ 34 ಮಂದಿ ಸೇರಿ ದ್ದಾರೆ. ಸಹರಾನ್ಪುರದಲ್ಲಿ ಪ್ರತಿಭಟನೆ ಆರಂಭ ವಾಗುವುದಕ್ಕೆ ಮುನ್ನ ಭಿತ್ತಿಪತ್ರಗಳನ್ನು ಮುದ್ರಣ ಮಾಡಿದ್ದ ಸಲ್ಮಾನ್‌ ಎಂಬಾತನನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಪಿಸ್ತೂಲ್‌ಗ‌ಳು ಪತ್ತೆ
ಕಾರ್ಯಾಚರಣೆಗೆ ಮುನ್ನ ಜಾವೇದ್‌ ಮನೆಯಲ್ಲಿ 12 ಬೋರ್‌ನ ಅಕ್ರಮ ಪಿಸ್ತೂಲ್‌, 315 ಬೋರ್‌ನ ಮತ್ತೊಂದು ಪಿಸ್ತೂಲು ಮತ್ತು ಮದ್ದುಗುಂಡುಗಳು, ನ್ಯಾಯಾಲಯವನ್ನು ವಿರೋಧಿಸುವಂಥ ಕೆಲವು ಆಕ್ಷೇಪಾರ್ಹ ದಾಖಲೆಗಳು ಪತ್ತೆಯಾ ಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.