ಘಾತುಕರ ಕೈವಾಡ: ರಜನಿ ಅಭಿಮತ
Team Udayavani, May 31, 2018, 6:00 AM IST
ತೂತುಕುಡಿ: ಸ್ಟರ್ಲೈಟ್ ತಾಮ್ರ ಉತ್ಪಾದನಾ ಘಟಕದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಸಮಾಜ ವಿರೋಧಿ ಶಕ್ತಿಗಳ ಕೈವಾಡ ಇದೆ. ಅವುಗಳನ್ನು ತಡೆಯಲು ದಿ.ಜಯಲಲಿತಾ ಅವರ ಕಠಿಣ ಮಾರ್ಗಗಳನ್ನು ಪಾಲಿಸಬೇಕು ಎಂದು ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ಕಳೆದ ವಾರ ಘಟಕದ ವಿರುದ್ಧ ನಡೆದ ಪ್ರತಿಭಟನೆ ವೇಳೆ ಗಾಯಗೊಂಡವರನ್ನು ಭೇಟಿಯಾದ ಬಳಿಕ ಮಾತನಾಡಿದರು. ಜಿಲ್ಲಾಧಿ ಕಾರಿ ಕಚೇರಿ ಮೇಲೆ ದಾಳಿ, ಸ್ಟರ್ಲೈಟ್ ಘಟಕದ ವಸತಿ ಸಮುಚ್ಚಯಕ್ಕೆ ಬೆಂಕಿ ಹಚ್ಚಿದ್ದು ಸೇರಿದಂತೆ ದಾಂಧಲೆ ನಡೆಸಿದ್ದು ಜನಸಾಮಾನ್ಯರಲ್ಲ. ಅದು ಸಮಾಜ ವಿರೋಧಿ ಶಕ್ತಿಗಳ ಕೈವಾಡ . ಅಂಥವರ ವಿರುದ್ಧ ತಮಿಳುನಾಡು ಸರ್ಕಾರ ಕಠಿಣವಾಗಿಯೇ ವರ್ತಿಸಬೇಕು ಎಂದು ಹೇಳಿದ್ದಾರೆ ರಜನಿ. ಇದರ ಜತೆಗೆ ಗಾಯಗೊಂಡ 48 ಮಂದಿಗೆ ತಲಾ 10 ಸಾವಿರ ರೂ.ಗಳ ವೈಯಕ್ತಿಕ ಪರಿಹಾರವನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.