Fake currency case ತನಿಖೆ; ಆರ್ ಎಸ್ಎಸ್ ಉ*ಗ್ರ ಸಂಘಟನೆ ಎಂಬ ಪುಸ್ತಕ ಮದರಸಾದಲ್ಲಿ ಪತ್ತೆ
ವಿದ್ಯಾರ್ಥಿಗಳಲ್ಲಿ ಆರ್ಎಸ್ಎಸ್ ವಿರೋಧಿ ಭಾವನೆ ಹುಟ್ಟುಹಾಕಲು ಬಳಕೆ
PTI, Sep 4, 2024, 10:21 AM IST
ಪ್ರಯಾಗರಾಜ್ (UP): ನಕಲಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಮದರಸಾವೊಂದರಲ್ಲಿ ಶೋಧದ ವೇಳೆ ಆರ್ಎಸ್ಎಸ್ ಅನ್ನು ಭಯೋತ್ಪಾದಕ ಸಂಘಟನೆಯೊಂದಿಗೆ ಹೋಲಿಸುವ ಪುಸ್ತಕವೊಂದನ್ನು ಮಂಗಳವಾರ(ಸೆ.3) ಪ್ರಯಾಗರಾಜ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳಲ್ಲಿ “ಆರ್ಎಸ್ಎಸ್ ವಿರೋಧಿ ಭಾವನೆಗಳನ್ನು ಹುಟ್ಟುಹಾಕಲು” ಧರ್ಮಗುರು ಅದನ್ನು ಬಳಸುತ್ತಿದ್ದರು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 28 ರಂದು ಅತರ್ಸುಯಿಯಾ ಪ್ರದೇಶದ ಜಾಮಿಯಾ ಹಬೀಬಿಯಾ ಮಸೀದಿ ಅಜಮ್ ಮದರಸಾದಲ್ಲಿ ನಡೆದ ದಾಳಿಯಲ್ಲಿ ನಕಲಿ ನೋಟುಗಳ ಜತೆಗೆ, ಪೊಲೀಸರು ಪುಸ್ತಕವನ್ನು ಪತ್ತೆ ಮಾಡಿದ್ದಾರೆ ಎಂದು ಪ್ರಯಾಗರಾಜ್ ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉರ್ದುವಿನಿಂದ ಹಿಂದಿಗೆ ಭಾಷಾಂತರಿಸಿದ್ದು, ಎಸ್.ಎಂ.ಮುಷರಫ್ ಬರೆದಿರುವ ಪುಸ್ತಕ “ಆರ್ಎಸ್ಎಸ್: ದೇಶದ ಅತಿ ದೊಡ್ಡ ಉಗ್ರ ಸಂಘಟನೆ ” ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಮದರಸಾದ ಧರ್ಮಗುರು ಮೊಹಮ್ಮದ್ ತಫ್ಸೀರುಲ್ ಆರಿಫೀನ್ ಪುಸ್ತಕವನ್ನು ಮಕ್ಕಳ ಮನಸ್ಸಿನಲ್ಲಿ ಆರ್ಎಸ್ಎಸ್ ವಿರೋಧಿ ಭಾವನೆಗಳನ್ನು ಬಿಟ್ಟಲು ಬಳಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಗುಪ್ತಚರ ಘಟಕ (LIU) ಮತ್ತು ಭಯೋತ್ಪಾದನಾ ನಿಗ್ರಹ ದಳ (ATS) ತಂಡಗಳು ಮಂಗಳವಾರ ಮದ್ರಸಾ ಸಿಬಂದಿಗಳನ್ನು ವಿಚಾರಣೆ ನಡೆಸಿವೆ.
ಆಗಸ್ಟ್ 28 ರಂದು, ಪ್ರಯಾಗರಾಜ್ ಪೊಲೀಸರು ನಕಲಿ ಕರೆನ್ಸಿ ಗ್ಯಾಂಗ್ ಭೇದಿಸಿ ನಾಲ್ವರು ಶಂಕಿತರನ್ನು ಬಂಧಿಸಿ ಒಟ್ಟು 1,300 ನಕಲಿ 100 ರೂ. ನೋಟುಗಳು, 234 ಮುದ್ರಿತ ಪುಟಗಳು, ಒಂದು ಲ್ಯಾಪ್ಟಾಪ್, ಒಂದು ಕಲರ್ ಪ್ರಿಂಟರ್, ಎರಡು ಬಂಡಲ್ ಬೌಂಡ್ ಪೇಪರ್ ಮತ್ತು ಒಂದು ಬಂಡಲ್ ಅನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.