![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 4, 2020, 10:11 PM IST
ತೆಲಂಗಾಣ: ಕೋವಿಡ್ 19 ಸೋಂಕು ವಿಶ್ವವ್ಯಾಪಿಯಾಗಿರುವ ಈ ಸಂದರ್ಭದಲ್ಲಿ ಎಲ್ಲರ ದೃಷ್ಟಿಯೂ ಈ ಮಹಾಮಾರಿಗೆ ಸಿದ್ಧಗೊಳ್ಳಲಿರುವ ಲಸಿಕೆಯ ಕಡೆಗೆ ನೆಟ್ಟಿದೆ.
ವಿಶ್ವಾದ್ಯಾಂತ ಹಲವಾರು ವೈದ್ಯಕೀಯ ಸಂಸ್ಥೆಗಳು ಹಾಗೂ ಔಷಧಿ ತಯಾರಿ ಕಂಪೆನಿಗಳು ಕೋವಿಡ್ 19 ಸೋಂಕಿಗೆ ಲಸಿಕೆ ಕಂಡುಹುಡುಕುವ ಸಿದ್ಧತೆಗಳಲ್ಲಿವೆ ಮತ್ತು ಇವುಗಳಲ್ಲಿ ಹಲವಾರು ಅಂತಿಮ ಪ್ರಯೋಗದ ಹಂತಕ್ಕೆ ಬಂದಿವೆ.
ಈ ರೀತಿಯಾಗಿ ಭಾರತದಲ್ಲಿ ಬಹಳ ನಿರೀಕ್ಷೆ ಮೂಡಿಸಿರುವುದು ಭಾರತ್ ಬಯೋಟೆಕ್ ಸಂಸ್ಥೆ ತಯಾರಿಸುತ್ತಿರುವ ‘ಕೊವ್ಯಾಕ್ಸಿನ್’ ಎಂಬ ಲಸಿಕೆ. ಈ ಲಸಿಕೆ ಪ್ರಯೋಗ ಯಶಸ್ವಿಯಾಗಿ ಮಾರುಕಟ್ಟೆಗೆ ಬಂದರೆ ಈ ‘ಕೊ ವ್ಯಾಕ್ಸಿನ್’ ಒಂದು ನೀರಿನ ಬಾಟಲ್ ದರಕ್ಕಿಂತಲೂ ಕಡಿಮೆ ದರದಲ್ಲಿ ಜನರಿಗೆ ಲಭಿಸಲಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಪ್ರಥಮ ಹಂತದಲ್ಲಿ ಡೋಸ್ ಒನ್ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿರುವ ಕೊವ್ಯಾಕ್ಸಿನ್ ಲಸಿಕೆಯ ದರಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಎಂ.ಡಿ. ಕೃಷ್ಣ ಯೆಲ್ಲಾ ಅವರು ಈ ಕುತೂಹಲಕಾರಿ ಮಾಹಿತಿಯನ್ನು ನೀಡಿದ್ದಾರೆ.
ಪ್ರಯೋಗಾಲಯ ಪರೀಕ್ಷೆ ಹಾಗೂ ಮೊದಲ ಹಂತದ ಕ್ಲಿನಿಕಲ್ ಪರೀಕ್ಷಾ ಹಂತವನ್ನು ಈ ಲಸಿಕೆ ಇದೀಗ ಯಶಸ್ವಿಯಾಗಿ ಪೂರೈಸಿದೆ. ಎಲ್ಲವೂ ಸುಗಮವಾಗಿ ನಡೆದರೆ 2021ರಲ್ಲಿ ಈ ಲಸಿಕೆ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.
ಮತ್ತು ಪ್ರಥಮ ಹಂತದ ಪರೀಕ್ಷೆಯಲ್ಲಿ ಈ ಲಸಿಕೆಯನ್ನು ಪಡೆದುಕೊಂಡಿರುವ ವ್ಯಕ್ತಿಗಳಲ್ಲಿ ಯಾವುದೇ ವ್ಯತಿರಿಕ್ತ ಪರಿಣಾಮಗಳು ಕಂಡುಬಂದಿಲ್ಲ ಎಂದು ಕಂಪೆನಿ ಹೇಳಿಕೊಂಡಿದೆ. ಇದೀಗ ಇವರೆಲ್ಲರಿಗೆ ಈ ಲಸಿಕೆಯ ಎರಡನೇ ಡೋಸ್ ನೀಡಲಾಗುತ್ತಿದೆ.
ಮತ್ತು ಕೊ ವ್ಯಾಕ್ಸಿನ್ ಲಸಿಕೆಯ ಎರಡನೇ ಹಂತದ ಪ್ರಯೋಗ ಸೆಪ್ಟಂಬರ್ ಮೊದಲ ವಾರದಲ್ಲಿ ಪ್ರಾರಂಭಗೊಳ್ಳುವ ನಿರೀಕ್ಷೆ ಇದೆ.
ಅಮೆರಿಕಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಈ ಲಸಿಕೆ ತಯಾರಿಯಲ್ಲಿ ಬಹಳಷ್ಟು ಪ್ರೋತ್ಸಾಹವನ್ನು ನೀಡುತ್ತಿದೆ ಎಂದು ಕೃಷ್ಣ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.