ಒಂದು ಮಿನರಲ್ ವಾಟರ್ ಬಾಟಲ್ ರೇಟ್ ಗಿಂತಲೂ ಕಡಿಮೆ ಬೆಲೆಗೆ ಲಭಿಸಲಿದೆ ‘ಕೊವ್ಯಾಕ್ಸಿನ್!’


Team Udayavani, Aug 4, 2020, 10:11 PM IST

ಒಂದು ಮಿನರಲ್ ಬಾಟಲ್ ರೇಟ್ ಗಿಂತಲೂ ಕಡಿಮೆ ಬೆಲೆಗೆ ಲಭಿಸಲಿದೆ ‘ಕೊವ್ಯಾಕ್ಸಿನ್!’

ತೆಲಂಗಾಣ: ಕೋವಿಡ್ 19 ಸೋಂಕು ವಿಶ್ವವ್ಯಾಪಿಯಾಗಿರುವ ಈ ಸಂದರ್ಭದಲ್ಲಿ ಎಲ್ಲರ ದೃಷ್ಟಿಯೂ ಈ ಮಹಾಮಾರಿಗೆ ಸಿದ್ಧಗೊಳ್ಳಲಿರುವ ಲಸಿಕೆಯ ಕಡೆಗೆ ನೆಟ್ಟಿದೆ.

ವಿಶ್ವಾದ್ಯಾಂತ ಹಲವಾರು ವೈದ್ಯಕೀಯ ಸಂಸ್ಥೆಗಳು ಹಾಗೂ ಔಷಧಿ ತಯಾರಿ ಕಂಪೆನಿಗಳು ಕೋವಿಡ್ 19 ಸೋಂಕಿಗೆ ಲಸಿಕೆ ಕಂಡುಹುಡುಕುವ ಸಿದ್ಧತೆಗಳಲ್ಲಿವೆ ಮತ್ತು ಇವುಗಳಲ್ಲಿ ಹಲವಾರು ಅಂತಿಮ ಪ್ರಯೋಗದ ಹಂತಕ್ಕೆ ಬಂದಿವೆ.

ಈ ರೀತಿಯಾಗಿ ಭಾರತದಲ್ಲಿ ಬಹಳ ನಿರೀಕ್ಷೆ ಮೂಡಿಸಿರುವುದು ಭಾರತ್ ಬಯೋಟೆಕ್ ಸಂಸ್ಥೆ ತಯಾರಿಸುತ್ತಿರುವ ‘ಕೊವ್ಯಾಕ್ಸಿನ್’ ಎಂಬ ಲಸಿಕೆ. ಈ ಲಸಿಕೆ ಪ್ರಯೋಗ ಯಶಸ್ವಿಯಾಗಿ ಮಾರುಕಟ್ಟೆಗೆ ಬಂದರೆ ಈ ‘ಕೊ ವ್ಯಾಕ್ಸಿನ್’ ಒಂದು ನೀರಿನ ಬಾಟಲ್ ದರಕ್ಕಿಂತಲೂ ಕಡಿಮೆ ದರದಲ್ಲಿ ಜನರಿಗೆ ಲಭಿಸಲಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಪ್ರಥಮ ಹಂತದಲ್ಲಿ ಡೋಸ್ ಒನ್ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿರುವ ಕೊವ್ಯಾಕ್ಸಿನ್ ಲಸಿಕೆಯ ದರಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಎಂ.ಡಿ. ಕೃಷ್ಣ ಯೆಲ್ಲಾ ಅವರು ಈ ಕುತೂಹಲಕಾರಿ ಮಾಹಿತಿಯನ್ನು ನೀಡಿದ್ದಾರೆ.

ಪ್ರಯೋಗಾಲಯ ಪರೀಕ್ಷೆ ಹಾಗೂ ಮೊದಲ ಹಂತದ ಕ್ಲಿನಿಕಲ್ ಪರೀಕ್ಷಾ ಹಂತವನ್ನು ಈ ಲಸಿಕೆ ಇದೀಗ ಯಶಸ್ವಿಯಾಗಿ ಪೂರೈಸಿದೆ. ಎಲ್ಲವೂ ಸುಗಮವಾಗಿ ನಡೆದರೆ 2021ರಲ್ಲಿ ಈ ಲಸಿಕೆ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಮತ್ತು ಪ್ರಥಮ ಹಂತದ ಪರೀಕ್ಷೆಯಲ್ಲಿ ಈ ಲಸಿಕೆಯನ್ನು ಪಡೆದುಕೊಂಡಿರುವ ವ್ಯಕ್ತಿಗಳಲ್ಲಿ ಯಾವುದೇ ವ್ಯತಿರಿಕ್ತ ಪರಿಣಾಮಗಳು ಕಂಡುಬಂದಿಲ್ಲ ಎಂದು ಕಂಪೆನಿ ಹೇಳಿಕೊಂಡಿದೆ. ಇದೀಗ ಇವರೆಲ್ಲರಿಗೆ ಈ ಲಸಿಕೆಯ ಎರಡನೇ ಡೋಸ್ ನೀಡಲಾಗುತ್ತಿದೆ.

ಮತ್ತು ಕೊ ವ್ಯಾಕ್ಸಿನ್ ಲಸಿಕೆಯ ಎರಡನೇ ಹಂತದ ಪ್ರಯೋಗ ಸೆಪ್ಟಂಬರ್ ಮೊದಲ ವಾರದಲ್ಲಿ ಪ್ರಾರಂಭಗೊಳ್ಳುವ ನಿರೀಕ್ಷೆ ಇದೆ.

ಅಮೆರಿಕಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಈ ಲಸಿಕೆ ತಯಾರಿಯಲ್ಲಿ ಬಹಳಷ್ಟು ಪ್ರೋತ್ಸಾಹವನ್ನು ನೀಡುತ್ತಿದೆ ಎಂದು ಕೃಷ್ಣ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.