ಸೋಂಕು ಹರಡುವವರ ವಿರುದ್ಧ ಕಾನೂನಾಸ್ತ್ರ; ಈ ಸೆಕ್ಷನ್‌ಗಳು ಏನು ಹೇಳುತ್ತವೆ?


Team Udayavani, Mar 30, 2020, 7:40 AM IST

ಸೋಂಕು ಹರಡುವವರ ವಿರುದ್ಧ ಕಾನೂನಾಸ್ತ್ರ; ಈ ಸೆಕ್ಷನ್‌ಗಳು ಏನು ಹೇಳುತ್ತವೆ?

ದೂರದ ದುಬಾೖಯಿಂದ ಹಿಮಾಚಲ ಪ್ರದೇಶದ ಕಾಂಗ್ರಾಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿತ್ತು. ಆದರೆ ಟ್ರಾವೆಲ್‌ ಹಿಸ್ಟರಿಯನ್ನು ವಿವರಿಸದ ಕಾರಣ, ಅವರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 270ರ ಅನ್ವಯ ಪ್ರಕರಣ ದಾಖಲಿಸಲಾಯಿತು. ಇನ್ನು, ಸೋಂಕಿಗೊಳಗಾಗಿದ್ದ ಬಾಲಿವುಡ್‌ ಗಾಯಕಿ ಕನ್ನಿಕಾ ಕಪೂರ್‌ ವಿರುದ್ಧ ಐಪಿಸಿ ಸೆಕ್ಷನ್‌ 269, 188ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಈ ಸೆಕ್ಷನ್‌ಗಳು ಏನು ಹೇಳುತ್ತವೆ, ಇದನ್ನು ಯಾವಾಗ, ಹೇಗೆ ಬಳಸಲಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ:

ಸೆಕ್ಷನ್‌ 269, 270 ನಡುವಿನ ವ್ಯತ್ಯಾಸ
ಮಾರಣಾಂತಿಕ ಕಾಯಿಲೆ ಅಥವಾ ಸೋಂಕನ್ನು ಇತರರಿಗೆ ಹರಡದಂತೆ ಎಚ್ಚರಿಕೆ ವಹಿಸದೆ, ಬೇಜವಾಬ್ದಾರಿ ವಹಿಸುವವರ ಮೇಲೆ ಐಪಿಸಿಯ 269ನೇ ವಿಧಿಯನ್ನು ಪ್ರಯೋಗಿಸಲಾಗುತ್ತದೆ.

ಇನ್ನು, ಐಪಿಸಿ 270ನೇ ವಿಧಿಯು ಪ್ರಜಾದ್ರೋಹಕ್ಕೆ ಸಂಬಂಧಿಸಿದ್ದಾಗಿದೆ. ತನಗೆ ಮಾರಣಾಂತಿಕ ಕಾಯಿಲೆ ಇರುವುದು ತಿಳಿದಿದ್ದರೂ ಉಳಿದ ಪ್ರಜೆಗಳಿಗೆ ಹರಡುವಂಥ ನಡೆಯನ್ನು ಅನುಸರಿಸಿದ್ದಕ್ಕಾಗಿ ಇದರನ್ವಯ ಪ್ರಯೋಗ ದಾಖಲಿಸಬಹುದಾಗಿದೆ.

ಸೆಕ್ಷನ್‌ 188 ಎಂಬ ಮತ್ತೂಂದು ಅಸ್ತ್ರ
ಸೋಂಕು ಹರಡುವವರ ವಿರುದ್ಧ ಬಳಸಲಾಗುವ ಸೆಕ್ಷನ್‌ 269, 270 ಹೊರತಾಗಿ ಸೆಕ್ಷನ್‌ 188 ಅನ್ನೂ ದಾಖಲಿಸಬಹುದಾಗಿದೆ. ಸರಕಾರದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಇದನ್ನು ಬಳಸಲಾಗುತ್ತದೆ. ಉದಾಹರಣೆಗೆ, ಈಗ ದೇಶದೆಲ್ಲೆಡೆ ಲಾಕ್‌ಡೌನ್‌ ಪರಿಸ್ಥಿತಿ ಇದ್ದು ಈ ನಿಬಂಧನೆಯನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಸೆಕ್ಷನ್‌ 188 ಬಳಸಬಹುದು.

ಶಿಕ್ಷೆಯ ಪ್ರಮಾಣ ಹೇಗೆ?
ಐಪಿಸಿ 269ನೇ ವಿಧಿಯನ್ವಯ ಅಪರಾಧಿಗಳಿಗೆ 6 ತಿಂಗಳು ಜೈಲು ಅಥವಾ ದಂಡ ವಿಧಿಸಬಹುದು. ವಿಶೇಷ ಸಂದರ್ಭ ಗಳಲ್ಲಿ ಇವೆರಡನ್ನೂ ವಿಧಿಸಬಹುದು.

ಐಪಿಸಿ 270ನೇ ವಿಧಿಯನ್ವಯ ಎರಡು ವರ್ಷ ಜೈಲು ಅಥವಾ ದಂಡ ವಿಧಿಸಬಹುದು. ಕೆಲವೊಮ್ಮೆ ಇವೆರಡನ್ನೂ ಸೇರಿಸಿ ಶಿಕ್ಷೆ ಪ್ರಕಟಿಸಬಹುದು.

ಹಿಂದಿನ ಪ್ರಕರಣಗಳು
1886ರಲ್ಲಿ ವ್ಯಕ್ತಿಯೊಬ್ಬ ತನಗೆ ಕಾಲರಾ ಇದ್ದರೂ ರೈಲಿನಲ್ಲಿ ಪ್ರಯಾಣಿಸಿದ್ದಕ್ಕೆ ಆತನ ವಿರುದ್ಧ ಸೆಕ್ಷನ್‌ 269ರ ಅನ್ವಯ ಮದ್ರಾಸ್‌ ಹೈಕೋರ್ಟ್‌ ಶಿಕ್ಷೆ ಜಾರಿಗೊಳಿಸಿತ್ತು.

2015ರಲ್ಲಿ ಮ್ಯಾಗಿ ನೂಡಲ್ಸ್‌ ಬಗ್ಗೆ ಜಾಹೀರಾತು ನೀಡಿದ್ದಕ್ಕೆ ಬಾಲಿವುಡ್‌ ನಟ ನಟಿಯರಾದ ಅಮಿತಾಭ್‌ ಬಚ್ಚನ್‌, ಮಾಧುರಿ ದೀಕ್ಷಿತ್‌, ಪ್ರೀತಿ ಝಿಂಟಾ ಹಾಗೂ ನೆಸ್ಲೆ ಕಂಪನಿಯ ಇಬ್ಬರು ಅಧಿಕಾರಿಗಳ ವಿರುದ್ಧ ಸೆಕ್ಷನ್‌ 270, 273 (ಅಪಾಯಕಾರಿ ತಿನಿಸು ಮಾರಾಟಕ್ಕೆ ಸಹಕಾರ) ಮತ್ತು 420 (ಮೋಸ) ಪ್ರಕಾರ ಕೇಸ್‌ ದಾಖಲಾಗಿತ್ತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.