ಒಬ್ಬ ಭಾರತೀಯನಿಂದ 4 ಜನರಿಗೆ ಸೋಂಕು ; ಕೋವಿಡ್ 19 ಪ್ರಾರಂಭದಲ್ಲಿ ಸಿದ್ಧಪಡಿಸಿದ್ದ ವರದಿ


Team Udayavani, Mar 25, 2020, 1:43 AM IST

ಒಬ್ಬ ಭಾರತೀಯನಿಂದ 4 ಜನರಿಗೆ ಸೋಂಕು ; ಕೋವಿಡ್ 19 ಪ್ರಾರಂಭದಲ್ಲಿ ಸಿದ್ಧಪಡಿಸಿದ್ದ ವರದಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ‘ಒಬ್ಬ ಭಾರತೀಯನಿಗೆ ಕೋವಿಡ್ 19 ವೈರಸ್ ಸೋಂಕು ತಗಲಿದರೆ ಅದು ಆತನಿಂದ ಏಕಕಾಲಕ್ಕೆ ನಾಲ್ವರಿಗೆ ಹರಡಬಹುದು. ಹಾಗಾಗಿ ಸೋಂಕಿತರನ್ನು ಅಥವಾ ಸೋಂಕು ಶಂಕಿತರನ್ನು 3 ದಿನಗಳ ಕಾಲ ಸ್ವಯಂನಿರ್ಬಂಧಕ್ಕೆ ಒಳಪಡಿಸಿದರೆ ಸಾಕು, ಕೊರೊನಾ ಹರಡುವಿಕೆಯನ್ನು ಶೇ. 62ರಷ್ಟು ಕಡಿಮೆ ಮಾಡಬಹುದು.

ಮಿತಿಮೀರಿದ ಸಂದರ್ಭಗಳಲ್ಲಿ ಈ ಸೋಂಕನ್ನು ಶೇ. 89ರಷ್ಟು ಕಡಿಮೆಗೊಳಿಸಬಹುದು’ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಸಿದ್ಧಪಡಿಸಿರುವ ಗಣಿತಶಾಸ್ತ್ರ ಆಧಾರಿತ ಸಂಶೋಧನಾ ವರದಿಯೊಂದು ಹೇಳಿದೆ. ಬಹುಮುಖ್ಯವಾಗಿ ಇದು ಸಾಮಾಜಿಕ ಅಂತರ ಕಾಪಾಡುವುದರ ಪ್ರಯೋಜನಗಳನ್ನು ಅಂಕಿ-ಅಂಶಗಳ ಮೂಲಕ ಪ್ರಸ್ತುತಗೊಳಿಸಿದೆ.

ಈ ವರದಿಯನ್ನು ಫೆಬ್ರವರಿಯಲ್ಲಿ, ಅಂದರೆ ಸೋಂಕು ಆಗ ತಾನೇ ಭಾರತಕ್ಕೆ ಕಾಲಿಡುತ್ತಿದ್ದ ಸಂದರ್ಭದಲ್ಲಿ ಸಿದ್ಧಪಡಿಸಲಾಗಿತ್ತು. ಆದರೆ ಈಗ ದೇಶದೆಲ್ಲೆಡೆ ಹರಡಿದೆ. ಸೋಂಕಿತರ ಸಂಖ್ಯೆ 515ನ್ನು ದಾಟಿದೆ.
ದೇಶವೇ ಲಾಕ್‌ಡೌನ್‌ ಆಗಿದೆ. ಹೀಗಿರುವಾಗ ಆರಂಭಿಕ ಹಂತದಲ್ಲಿ ತಯಾರಿಸಲಾದ ವರದಿ ಈಗ ಅನ್ವಯವಾಗುತ್ತದೆಯೇ ಎಂಬ ಪ್ರಶ್ನೆಗೆ ಐಸಿಎಂಆರ್‌ನ ಸಾಂಕ್ರಾಮಿಕ ರೋಗಗಳ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ರಮಣ ಆರ್‌. ಗಂಗಖೇಡ್ಕರ್‌ ಅವರು ಉತ್ತರಿಸಿದ್ದಾರೆ.

‘ಸೋಂಕು ಆರಂಭಿಕ ಹಂತದಲ್ಲಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ನಿಜ. ಆದರೆ ಸೋಂಕಿತರು ನಿರ್ದಿಷ್ಟ ಅವಧಿಯಲ್ಲಿ ಎಷ್ಟು ಜನರಿಗೆ ಹರಡುತ್ತಾರೆ ಎಂಬುದು ಬದಲಾಗದ ಸತ್ಯ. ಏಕೆಂದರೆ ಆ ವೈರಾಣು ಹರಡಿಕೊಳ್ಳುವ ವೇಗವನ್ನು ಲೆಕ್ಕ ಇಟ್ಟು ಈ ವರದಿ ಸಿದ್ಧಪಡಿಸಲಾಗಿದೆ. ಆ ವೇಗ ಬದಲಾಗುವುದಿಲ್ಲ. ಹಾಗಾಗಿ ಈ ವರದಿಯು ಸರ್ವಕಾಲಿಕ’ ಎಂದು ಅವರು ತಿಳಿಸಿದ್ದಾರೆ.

‘ಇದು ನಿರ್ದಿಷ್ಟ ಪ್ರಾಂತ್ಯ ಅಥವಾ ದೇಶದಲ್ಲಿ ರೋಗಾಣುಗಳ ಹರಡುವಿಕೆಯ ವೇಗವನ್ನು ಆರ್‌- ನಾಟ್‌ (R0) ಎಂದು ಸಾಂಕೇತಿಕವಾಗಿ ವರದಿಯಲ್ಲಿ ಉಲ್ಲೇಖೀಸಲಾಗಿದೆ. 0 ಮೌಲ್ಯ 1 ಅಥವಾ ಅದಕ್ಕಿಂತ ಕೆಳಗಿದ್ದರೆ ವೈರಾಣುಗಳು ಸಾಯುವ ಹಂತದಲ್ಲಿವೆ ಎಂದರ್ಥ. ಆದರೆ ಈ ಮೌಲ್ಯ 2 ಅಥವಾ ಅದಕ್ಕಿಂತ ಹೆಚ್ಚಿದ್ದರೆ ವೈರಾಣುಗಳು ಅಪಾಯಕಾರಿ ಸ್ಥಿತಿಯಲ್ಲಿ ಹರಡುತ್ತಿವೆ ಎಂದರ್ಥ’ ಎಂದು ಡಾ| ರಮಣ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.