![1-mangaluru](https://www.udayavani.com/wp-content/uploads/2024/07/1-mangaluru-415x268.jpg)
ಕೋವಿಡ್ 4ನೇ ಅಲೆಯ ಆತಂಕ ಬೇಡ; ಲಸಿಕೆ ವಿತರಣೆಗೆ ವೇಗ ನೀಡಲು ತಜ್ಞರ ಸಲಹೆ
ಶೇ.1 ದಾಟಿದ ಕೋವಿಡ್ ಪಾಸಿಟಿವಿಟಿ ದರ
Team Udayavani, Jun 5, 2022, 7:48 PM IST
![ಕೋವಿಡ್ 4ನೇ ಅಲೆಯ ಆತಂಕ ಬೇಡ; ಲಸಿಕೆ ವಿತರಣೆಗೆ ವೇಗ ನೀಡಲು ತಜ್ಞರ ಸಲಹೆ](https://www.udayavani.com/wp-content/uploads/2022/06/Covid-wave-620x417.jpg)
ನವದೆಹಲಿ: ದೇಶಾದ್ಯಂತ ಶನಿವಾರದಿಂದ ಭಾನುವಾರಕ್ಕೆ 24 ಗಂಟೆಗಳ ಅವಧಿಯಲ್ಲಿ 4,270 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನ 4ನೇ ಅಲೆಯ ಭೀತಿ ಆರಂಭವಾಗಿದೆ. 34 ದಿನಗಳ ಬಳಿಕ ದೈನಂದಿನ ಪಾಸಿಟಿವಿಟಿ ದರ ಶೇ.1ಕ್ಕಿಂತಲೂ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಆದರೆ, ಪ್ರಸ್ತುತ ಸೋಂಕು ಪ್ರಕರಣಗಳಲ್ಲಿ ಆಗುತ್ತಿರುವ ಹೆಚ್ಚಳವು ಕೊರೊನಾ 4ನೇ ಅಲೆಯ ಮುನ್ಸೂಚನೆಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೆಲವು ರಾಜ್ಯಗಳಲ್ಲಿ ಸೋಂಕು ಏರಿಕೆಯಾಗುತ್ತಿರುವುದು ನಿಜ. ಆದರೆ, ಅದು 4ನೇ ಅಲೆಯ ಲಕ್ಷಣವಲ್ಲ. ಬದಲಿಗೆ ಒಮಿಕ್ರಾನ್ನ ಬಿಎ.4 ಮತ್ತು ಬಿಎ.5 ಉಪತಳಿಗಳಿಂದಾಗಿ ಸ್ವಲ್ಪಮಟ್ಟಿಗೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರಬಹುದು. ಲಸಿಕೆ ವಿತರಣೆಗೆ ವೇಗ ನೀಡಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಎಲ್ಲವೂ ಸರಿಯಾಗುತ್ತದೆ ಎಂದು ಸಾಂಕ್ರಾಮಿಕ ರೋಗಗಳ ತಜ್ಞ ಡಾ.ಈಶ್ವರ್ ಗಿಲಾಡಾ ಹೇಳಿದ್ದಾರೆ.
ಮುಂಬೈನಲ್ಲಿ ಭಾರೀ ಏರಿಕೆ:
ದೇಶದಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 24,052ಕ್ಕೇರಿದ್ದರೆ, ಸಾವಿನ ಸಂಖ್ಯೆ 5,24,692 ಆಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಾರಾಷ್ಟ್ರ ಮತ್ತು ಕೇರಳಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಮುಂಬೈನಲ್ಲಂತೂ ಮಾರ್ಚ್ ತಿಂಗಳಿಡೀ ದಾಖಲಾದ ಸೋಂಕು ಪ್ರಕರಣಗಳ ಸಂಖ್ಯೆಗಿಂತ ದುಪ್ಪಟ್ಟು ಪ್ರಕರಣಗಳು ಜೂನ್ನ ಮೊದಲ 4 ದಿನಗಳಲ್ಲೇ ಪತ್ತೆಯಾಗಿವೆ.
ಶನಿವಾರ ಮುಂಬೈನಲ್ಲಿ 889 ಪ್ರಕರಣಗಳು ಪತ್ತೆಯಾಗಿದ್ದು, ಫೆಬ್ರವರಿಯ ನಂತರ ದೈನಂದಿನ ಪ್ರಕರಣಗಳಲ್ಲಿ ಈ ಮಟ್ಟದ ಏರಿಕೆ ಕಂಡಿರುವುದು ಇದೇ ಮೊದಲು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದಲ್ಲಿ ಕಳೆದ 5 ದಿನಗಳಿಂದೀಚೆಗೆ ಪ್ರತಿ ದಿನ ಒಂದು ಸಾವಿರದಷ್ಟು ಮಂದಿಗೆ ಸೋಂಕು ದೃಢಪಡುತ್ತಿದೆ. ಎರ್ನಾಕುಳಂ, ತಿರುವನಂತಪುರಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ. ಶನಿವಾರ ಕೇರಳದಲ್ಲಿ 1,544 ಮಂದಿಗೆ ಸೋಂಕು ದೃಢಪಟ್ಟಿದೆ.
ಸದ್ಯದಲ್ಲೇ ಮಾಸ್ಕ್ ಕಡ್ಡಾಯ
ಮಹಾರಾಷ್ಟ್ರದಲ್ಲಿ ಸೋಂಕಿನ ಏರುಗತಿ ನೋಡಿದರೆ, ನಾವು ಸದ್ಯದಲ್ಲೇ ಕೊರೊನಾ 4ನೇ ಅಲೆಯನ್ನು ಎದುರಿಸಲಿರುವ ಲಕ್ಷಣ ಕಾಣಿಸುತ್ತಿದೆ. ಹಾಗಂತ, ನಾಗರಿಕರಾರೂ ಆತಂಕ ಪಡಬೇಕಾಗಿಲ್ಲ ಎಂದು ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಭಾನುವಾರ ಹೇಳಿದ್ದಾರೆ. ಜತೆಗೆ, ಮನೆಯಿಂದ ಹೊರಗೆ ಕಾಲಿಡುವಾಗ ಎಲ್ಲರೂ ಮಾಸ್ಕ್ ಧರಿಸಿಕೊಳ್ಳಿ. ನಾವು ಇನ್ನೂ ಮಾಸ್ಕ್ ಕಡ್ಡಾಯಗೊಳಿಸಿಲ್ಲ. ಆದರೆ, ಸದ್ಯದಲ್ಲೇ ಅದನ್ನು ಜಾರಿ ಮಾಡುವ ಸ್ಥಿತಿ ಬರಲಿದೆ. ಅಲ್ಲದೇ, ಜನರು ಬೂಸ್ಟರ್ ಡೋಸ್ ಅನ್ನೂ ಸಮಯಕ್ಕೆ ಸರಿಯಾಗಿ ಪಡೆದುಕೊಂಡರೆ ಉತ್ತಮ ಎಂದೂ ಅವರು ಹೇಳಿದ್ದಾರೆ.
ಶಾರುಖ್, ಕತ್ರೀನಾ, ಫಡ್ನವೀಸ್ಗೆ ಸೋಂಕು
ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವಂತೆಯೇ ಸೋಂಕಿತ ಸೆಲೆಬ್ರಿಟಿಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಅಕ್ಷಯ್ ಕುಮಾರ್, ಕಾರ್ತಿಕ್ ಆರ್ಯನ್, ಆದಿತ್ಯ ರಾಯ್ ಕಪೂರ್ ಬಳಿಕ ಭಾನುವಾರ ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ನಟಿ ಕತ್ರೀನಾ ಕೈಫ್ಗೂ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದೆ. ಮನೆಯಲ್ಲೇ ಐಸೋಲೇಟ್ ಆಗಿರುವುದಾಗಿ ಅವರು ಹೇಳಿದ್ದಾರೆ. ಇದೇ ವೇಳೆ, ಸದ್ಯಕ್ಕೆ ಯಾವುದೇ ಪಾರ್ಟಿಗಳನ್ನು ಆಯೋಜನೆ ಮಾಡದಂತೆ ಮುಂಬೈನ ಫಿಲಂ ಸ್ಟುಡಿಯೋಗಳಿಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ ಸೂಚಿಸಿದೆ.
ಮನೆ-ಮನೆಗೆ ಲಸಿಕೆ 2.0ಗೆ ವೇಗ
ಮನೆ ಮನೆಗೆ ಲಸಿಕೆ ಯೋಜನೆಯ ಎರಡನೇ ಭಾಗವಾಗಿ ಜುಲೈ 31ರೊಳಗಾಗಿ 4.7 ಕೋಟಿ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ವಿತರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. 60 ವರ್ಷ ಮೇಲ್ಪಟ್ಟ 13.75 ಕೋಟಿ ನಾಗರಿಕರ ಪೈಕಿ 11.91 ಕೋಟಿ ಮಂದಿ ಜೂ.3ರವರೆಗೆ ಎರಡು ಬಾರಿ ಲಸಿಕೆ ತೆಗೆದುಕೊಂಡಿದ್ದಾರೆ. ಇನ್ನು 6.67 ಕೋಟಿ ಹಿರಿಯ ನಾಗರಿಕರು ಜು.31ರೊಳಗೆ ಮುನ್ನೆಚ್ಚರಿಕಾ ಡೋಸ್ ತೆಗೆದುಕೊಳ್ಳಬೇಕು. ಈ ಪೈಕಿ 1.94 ಕೋಟಿ ಮಂದಿ ಲಸಿಕೆ ಪಡೆದಿದ್ದಾರೆ. ಗಮನಾರ್ಹ ಸಂಗತಿಯೆಂದರೆ 1.04 ಕೋಟಿ ಹಿರಿಯ ನಾಗರಿಕರು ಇನ್ನೂ ಮೊದಲ ಲಸಿಕೆಯನ್ನೇ ತೆಗೆದುಕೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಘರ್ ಘರ್ ದಸ್ತಕ್ 2.0 ಅಭಿಯಾನದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಲಾಗುತ್ತದೆ. ಸತತ 2 ತಿಂಗಳ ಈ ಅಭಿಯಾನ ಜೂ.1ರಿಂದಲೇ ಶುರುವಾಗಿದೆ.
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ
![1993 Mumbai riot accused arrested after 31 years](https://www.udayavani.com/wp-content/uploads/2024/07/riot-150x83.jpg)
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.